AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ
ಬಿಬಿಎಂಪಿ
TV9 Web
| Edited By: |

Updated on:Jan 16, 2022 | 12:51 PM

Share

ಬೆಂಗಳೂರು: ನಗರದಲ್ಲಿ ಅಂಗಡಿಗಳ ನಿರ್ಮಾಣಕ್ಕೆ 25 ಮರ ಕಟಾವು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸುಮಾರು 25 ಮರಗಳನ್ನು ಕಡಿದು ಹಾಕಿರುವ ಬಗ್ಗೆ ತಿಳಿದುಬಂದಿದೆ. ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಮರ ಕಡಿದಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮರಗಳನ್ನು ಕಡಿಯುವುದಕ್ಕೆ ಅನುಮತಿಯನ್ನು ಪಡೆದಿಲ್ಲ. ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲವೆಂದು ಆರೋಪ ಕೇಳಿಬಂದಿದೆ.

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಫುಟ್‌ಪಾತ್ ಮೇಲೆ ಅಂಗಡಿಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆಯೇ? ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂಗಡಿ ನಿರ್ಮಾಣ ಮಾಡಲಾಗುತ್ತದೆಯೇ? ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆ ನಡೆಸಲು ಬಿಡಲ್ಲ ಎಂದು ಮರ ಕಡಿದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತೋಟಗಾರಿಕಾ ಇಲಾಖೆ ಸಚಿವರ ಕ್ಷೇತ್ರದಲ್ಲಿ ಮರಗಳಿಗೆ ಉಳಿಗಾಲ ಇಲ್ಲ. 20 ವರ್ಷಗಳಿಂದ ಇದ್ದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ ಎಂದು ಸ್ಥಳೀಯ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಹಿತಿ ನೀಡದೆಯೇ ಮರಗಳ ತೆರವು ಮಾಡಲಾಗಿದೆ. ಯಾರಿಗೂ ಗೊತ್ತಿಲ್ಲದೇ ಕರ್ಫ್ಯೂ ಸಮಯದಲ್ಲಿ ಮರ ಕಡಿಯಲಾಗಿದೆ. ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆಗಳನ್ನ ನಡೆಸಲು ಬಿಡೊಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು

Published On - 12:11 pm, Sun, 16 January 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?