AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ
ಬಿಬಿಎಂಪಿ
TV9 Web
| Updated By: ganapathi bhat|

Updated on:Jan 16, 2022 | 12:51 PM

Share

ಬೆಂಗಳೂರು: ನಗರದಲ್ಲಿ ಅಂಗಡಿಗಳ ನಿರ್ಮಾಣಕ್ಕೆ 25 ಮರ ಕಟಾವು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸುಮಾರು 25 ಮರಗಳನ್ನು ಕಡಿದು ಹಾಕಿರುವ ಬಗ್ಗೆ ತಿಳಿದುಬಂದಿದೆ. ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಮರ ಕಡಿದಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮರಗಳನ್ನು ಕಡಿಯುವುದಕ್ಕೆ ಅನುಮತಿಯನ್ನು ಪಡೆದಿಲ್ಲ. ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲವೆಂದು ಆರೋಪ ಕೇಳಿಬಂದಿದೆ.

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಫುಟ್‌ಪಾತ್ ಮೇಲೆ ಅಂಗಡಿಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆಯೇ? ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂಗಡಿ ನಿರ್ಮಾಣ ಮಾಡಲಾಗುತ್ತದೆಯೇ? ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆ ನಡೆಸಲು ಬಿಡಲ್ಲ ಎಂದು ಮರ ಕಡಿದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತೋಟಗಾರಿಕಾ ಇಲಾಖೆ ಸಚಿವರ ಕ್ಷೇತ್ರದಲ್ಲಿ ಮರಗಳಿಗೆ ಉಳಿಗಾಲ ಇಲ್ಲ. 20 ವರ್ಷಗಳಿಂದ ಇದ್ದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ ಎಂದು ಸ್ಥಳೀಯ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಹಿತಿ ನೀಡದೆಯೇ ಮರಗಳ ತೆರವು ಮಾಡಲಾಗಿದೆ. ಯಾರಿಗೂ ಗೊತ್ತಿಲ್ಲದೇ ಕರ್ಫ್ಯೂ ಸಮಯದಲ್ಲಿ ಮರ ಕಡಿಯಲಾಗಿದೆ. ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆಗಳನ್ನ ನಡೆಸಲು ಬಿಡೊಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು

Published On - 12:11 pm, Sun, 16 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ