AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ
ಬಿಬಿಎಂಪಿ
Follow us
TV9 Web
| Updated By: ganapathi bhat

Updated on:Jan 16, 2022 | 12:51 PM

ಬೆಂಗಳೂರು: ನಗರದಲ್ಲಿ ಅಂಗಡಿಗಳ ನಿರ್ಮಾಣಕ್ಕೆ 25 ಮರ ಕಟಾವು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸುಮಾರು 25 ಮರಗಳನ್ನು ಕಡಿದು ಹಾಕಿರುವ ಬಗ್ಗೆ ತಿಳಿದುಬಂದಿದೆ. ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಮರ ಕಡಿದಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮರಗಳನ್ನು ಕಡಿಯುವುದಕ್ಕೆ ಅನುಮತಿಯನ್ನು ಪಡೆದಿಲ್ಲ. ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲವೆಂದು ಆರೋಪ ಕೇಳಿಬಂದಿದೆ.

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಫುಟ್‌ಪಾತ್ ಮೇಲೆ ಅಂಗಡಿಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆಯೇ? ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂಗಡಿ ನಿರ್ಮಾಣ ಮಾಡಲಾಗುತ್ತದೆಯೇ? ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆ ನಡೆಸಲು ಬಿಡಲ್ಲ ಎಂದು ಮರ ಕಡಿದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತೋಟಗಾರಿಕಾ ಇಲಾಖೆ ಸಚಿವರ ಕ್ಷೇತ್ರದಲ್ಲಿ ಮರಗಳಿಗೆ ಉಳಿಗಾಲ ಇಲ್ಲ. 20 ವರ್ಷಗಳಿಂದ ಇದ್ದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ ಎಂದು ಸ್ಥಳೀಯ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಹಿತಿ ನೀಡದೆಯೇ ಮರಗಳ ತೆರವು ಮಾಡಲಾಗಿದೆ. ಯಾರಿಗೂ ಗೊತ್ತಿಲ್ಲದೇ ಕರ್ಫ್ಯೂ ಸಮಯದಲ್ಲಿ ಮರ ಕಡಿಯಲಾಗಿದೆ. ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆಗಳನ್ನ ನಡೆಸಲು ಬಿಡೊಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು

Published On - 12:11 pm, Sun, 16 January 22

ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು