AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ.

ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ 25 ಮರ ಕಟಾವು?; ಏಕಾಏಕಿ ಮರ ಕಡಿಯಲಾಗಿದೆ ಎಂದು ಸಾರ್ವಜನಿಕರ ಆಕ್ರೋಶ
ಬಿಬಿಎಂಪಿ
TV9 Web
| Edited By: |

Updated on:Jan 16, 2022 | 12:51 PM

Share

ಬೆಂಗಳೂರು: ನಗರದಲ್ಲಿ ಅಂಗಡಿಗಳ ನಿರ್ಮಾಣಕ್ಕೆ 25 ಮರ ಕಟಾವು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸುಮಾರು 25 ಮರಗಳನ್ನು ಕಡಿದು ಹಾಕಿರುವ ಬಗ್ಗೆ ತಿಳಿದುಬಂದಿದೆ. ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಮರ ಕಡಿದಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮರಗಳನ್ನು ಕಡಿಯುವುದಕ್ಕೆ ಅನುಮತಿಯನ್ನು ಪಡೆದಿಲ್ಲ. ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲವೆಂದು ಆರೋಪ ಕೇಳಿಬಂದಿದೆ.

ಮರ ಕಡಿಯುವ ಬದಲು ಸ್ಥಳಾಂತರ ಮಾಡಬಹುದಿತ್ತು. ಮೆಟ್ರೋ ಕಾಮಗಾರಿ ಇಲ್ಲ, ರಸ್ತೆ ಅಗಲೀಕರಣವೂ ಇಲ್ಲ. ಆದರೂ ಮರಗಳನ್ನು ಕಡಿಯುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಏಕಾಏಕಿ ಮರ ಕಡಿದ ಕಾರಣ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಫುಟ್‌ಪಾತ್ ಮೇಲೆ ಅಂಗಡಿಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆಯೇ? ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂಗಡಿ ನಿರ್ಮಾಣ ಮಾಡಲಾಗುತ್ತದೆಯೇ? ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆ ನಡೆಸಲು ಬಿಡಲ್ಲ ಎಂದು ಮರ ಕಡಿದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತೋಟಗಾರಿಕಾ ಇಲಾಖೆ ಸಚಿವರ ಕ್ಷೇತ್ರದಲ್ಲಿ ಮರಗಳಿಗೆ ಉಳಿಗಾಲ ಇಲ್ಲ. 20 ವರ್ಷಗಳಿಂದ ಇದ್ದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ ಎಂದು ಸ್ಥಳೀಯ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಹಿತಿ ನೀಡದೆಯೇ ಮರಗಳ ತೆರವು ಮಾಡಲಾಗಿದೆ. ಯಾರಿಗೂ ಗೊತ್ತಿಲ್ಲದೇ ಕರ್ಫ್ಯೂ ಸಮಯದಲ್ಲಿ ಮರ ಕಡಿಯಲಾಗಿದೆ. ಮರ ಕಡಿದ ಜಾಗದಲ್ಲಿ ಯಾವ ಚಟುವಟಿಕೆಗಳನ್ನ ನಡೆಸಲು ಬಿಡೊಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು

Published On - 12:11 pm, Sun, 16 January 22

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್