AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಹಳಿ ಮೇಲೆ ಬಿದ್ದ ಮರ: ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ವ್ಯತ್ಯಯ

ಬೆಂಗಳೂರು ಮಳೆ ಹಲವು ಅವಾಂತರಗಳನ್ನೇ ಸೃಷ್ಟಿಸಿದೆ. ಮಳೆ, ಮರ ಬಿದ್ದಿರುವುದು, ರಸ್ತೆಗಳಲ್ಲಿ ನೀರು ನಿಂತಿದ್ದ ಕಾರಣ ಒಂದೆಡೆ ಸಂಚಾರಕ್ಕೆ ಅಡಚಣೆಯಾಗಿದ್ದರೆ, ಮಂಗಳವಾರ ಬೆಳಗ್ಗೆ ಮೆಟ್ರೋ ಟ್ರ್ಯಾಕ್ ಮೇಲೆ ಮರ ಬಿದ್ದು ಮೆಟ್ರೋ ಸಂಚಾರದಲ್ಲಿಯೂ ವ್ಯತ್ಯಯವಾಗಿದೆ. ಸದ್ಯ ಮರ ತೆರವು ಮಾಡಲಾಗಿದ್ದು, ಸಂಚಾರ ಪುನರಾರಂಭಗೊಂಡಿದೆ.

ಮೆಟ್ರೋ ಹಳಿ ಮೇಲೆ ಬಿದ್ದ ಮರ: ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ವ್ಯತ್ಯಯ
ಮೆಟ್ರೋ ಹಳಿ ಮೇಲೆ ಬಿದ್ದ ಮರ
Ganapathi Sharma
|

Updated on:Oct 16, 2024 | 8:42 AM

Share

ಬೆಂಗಳೂರು, ಅಕ್ಟೋಬರ್ 16: ಮೆಟ್ರೋ ಹಳಿ ಮೇಲೆ ಮರ ಬಿದ್ದ ಕಾರಣ ಮಂಗಳವಾರ ಬೆಳ್ಳಂಬೆಳಗ್ಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆಯಾಯಿತು. ಬೆಳಿಗ್ಗೆ 6.15 ರ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದಿದೆ. ಪರಿಣಾಮವಾಗಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಯಿತು. ನಂತರ ಬಿಎಂಆರ್​ಸಿಎಲ್ ಅಧಿಕಾರಿಗಳು, ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ಮಾಡಿ ಮೆಟ್ರೋ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಡಚಣೆಯ ಸಂದರ್ಭದಲ್ಲಿ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಟು ವೈಟ್ ಫೀಲ್ಡ್‌, ಎಂ ಜಿ ರಸ್ತೆ ಟು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡಿದ್ದವು.

ನೇರಳೆ ಮಾರ್ಗದಲ್ಲಿ ಬೆಳಗ್ಗೆ 8.05 ರಿಂದ ಎಂದಿನಂತೆ ರೈಲುಗಳು ಓಡಾಡುತ್ತಿವೆ ಎಂದು ಬಿಎಂಆರ್​​ಸಿಎಲ್ ಎಕ್ಸ್​ ಸಂದೇಶದ ಮೂಲಕ ತಿಳಿಸಿದೆ.

ಅದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಬಿಎಂಆರ್​​ಸಿಎಲ್, ‘‘ಇಂದು ಬೆಳಿಗ್ಗೆ 6.15 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿನ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದ ಕಾರಣ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ. ಈ ಸಮಯದಲ್ಲಿ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ ಹಾಗೂ ಎಂ ಜಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಓಡುತ್ತಿವೆ, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಯಾಣಿಕರಿಗೆ ಇದರಿಂದಾಗಿರುವ ಅನಾನುಕೂಲತೆಗಾಗಿ ವಿಷಾದಿಸಲಾಗಿದೆ’’ ಎಂದು ತಿಳಿಸಿತ್ತು.

ಬಿಎಂಆರ್​ಸಿಎಲ್ ಎಕ್ಸ್ ಸಂದೇಶ

ಬೆಳ್ಳಂಬೆಳಗ್ಗೆಯೇ ಮೆಟ್ರೋ ಸೇವೆ ವ್ಯತ್ಯಯವಾದುದರಿಂದ ಅನೇಕ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು. ಇಂದಿರಾನಗರ, ಬೈಯಪ್ಪನಹಳ್ಳಿ ಕಡೆ ತೆರಳುವವರು ಎಂಜಿ ರಸ್ತೆಯಲ್ಲಿ ಇಳಿದು ಆಟೊ, ಟ್ಯಾಕ್ಸಿ, ಇತರ ವಾಹನಗಳ ಮೊರೆ ಹೋದರು.

ಇದನ್ನೂ ಓದಿ: ಗಮನಿಸಿ: ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರಕ್ಕೆ ತೊಂದರೆಯಾಗಬಹುದು

ಅತ್ತ ಬೆಂಗಳೂರಿನ ಅನೇಕ ರಸ್ತೆಗಳಲ್ಲಿಯೂ ಸಂಚಾರಕ್ಕೆ ಅಡಚಣೆಯಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಎಕ್ಸ್ ಖಾತೆ ಮೂಲಕ ಕ್ಷಣ ಕ್ಷಣದ ಮಾಹಿತಿ ನಿಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:52 am, Wed, 16 October 24

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್