ಚಾಲಕರಹಿತ ಮೆಟ್ರೋ ರೈಲಿನ ಟ್ರಯಲ್ ರನ್ ಯಶಸ್ವಿ; ಶೀಘ್ರದಲ್ಲೇ ಮೆಟ್ರೋ ಬಹು ನಿರೀಕ್ಷಿತ ಹಳದಿ ಲೇನ್ ಉದ್ಘಾಟನೆ

Namma Metro: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಹಳದಿ ಬಣ್ಣದ ಮೆಟ್ರೋ ಮಾರ್ಗ ಆದಷ್ಟು ಬೇಗ ಉದ್ಘಾಟನೆಗೊಳ್ಳಲಿದೆ. ಲೋಕೋ ಪೈಲಟ್ ಲೆಸ್ ರೈಲಿನ ಟ್ರಯಲ್ ರನ್ ಯಶಸ್ವಿಯಾಗಿದ್ದು ಸಿಗ್ನಲಿಂಗ್ ಟೆಸ್ಟ್ ಆರಂಭವಾಗಿದೆ. ಎಲ್ಲಾ ರೀತಿಯ ಪರೀಕ್ಷೆಗಳು ಮುಗಿದ ನಂತರ ಸುರಕ್ಷತಾ ಪರೀಕ್ಷೆ ನಡೆಸಿ ವರದಿ ಸಲ್ಲಿಸಲಾಗುತ್ತೆ.

ಚಾಲಕರಹಿತ ಮೆಟ್ರೋ ರೈಲಿನ ಟ್ರಯಲ್ ರನ್ ಯಶಸ್ವಿ; ಶೀಘ್ರದಲ್ಲೇ ಮೆಟ್ರೋ ಬಹು ನಿರೀಕ್ಷಿತ ಹಳದಿ ಲೇನ್ ಉದ್ಘಾಟನೆ
ಲೋಕೋ ಪೈಲಟ್ ಲೆಸ್ ರೈಲಿನ ಟ್ರಯಲ್ ರನ್ ಯಶಸ್ವಿ
Follow us
| Updated By: ಆಯೇಷಾ ಬಾನು

Updated on:Jul 02, 2024 | 11:12 AM

ಬೆಂಗಳೂರು, ಜೂನ್.02: ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ (BMRCL) ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಬಹು ನಿರೀಕ್ಷಿತ ಹಳದಿ ಮಾರ್ಗ ಉದ್ಘಾಟನೆಗೆ ಸಿದ್ಧವಾಗಿದೆ. ಕಳೆದ‌ ಹದಿನೈದು ದಿನಗಳ ಹಿಂದೆ ಲೋಕೋ ಪೈಲಟ್ ಲೆಸ್ ರೈಲಿನ ಟ್ರಯಲ್ ರನ್ ಮಾಡಿದ್ದ ಬಿಎಂಆರ್​ಸಿಎಲ್ ಟ್ರಯಲ್ ರನ್ ಅನ್ನು ಯಶಸ್ವಿಯಾಗಿ ಪೂರೈಸಿದ್ದು ಇದರ ಬೆನ್ನಲ್ಲೇ ಸಿಗ್ನಲಿಂಗ್ ಟೆಸ್ಟ್ ಆರಂಭಿಸಿದೆ. ಹಳದಿ ಮಾರ್ಗದಲ್ಲಿ ಈಗ ಚಾಲಕರಹಿತ ಮೆಟ್ರೋ ರೈಲಿನ ಟ್ರಯಲ್ ರನ್‌ ಮುಕ್ತಾಯಗೊಂಡಿದ್ದು ಸಿಗ್ನಲಿಂಗ್ ಟೆಸ್ಟ್ ಆರಂಭವಾಗಿದೆ. ಹೀಗಾಗಿ ಆದಷ್ಟು ಬೇಗ ಲೋಕೋ ಪೈಲಟ್ ಲೆಸ್ ರೈಲು ಸೇವೆಗೆ ಸಿದ್ಧವಾಗಲಿದೆ. ರೈಲು ಚಾಲನೆಗೆ ಸಿದ್ಧವಾದ ನಂತರ ಮಾರ್ಗವನ್ನು ಉದ್ಘಾಟಿಸಲಾಗುತ್ತೆ.

ಬಿಎಂಆರ್​ಸಿಎಲ್‌ ಚೀನಾದ ಡ್ರೈವರ್ ಲೆಸ್ ಮೆಟ್ರೋ‌ ಮೂಲಕ ಸಿಗ್ನಲಿಂಗ್ ಟೆಸ್ಟ್ ನಡೆಸಿದೆ. ಮೆಟ್ರೋ ಅಧಿಕಾರಿಗಳು ಹಂತ ಹಂತವಾಗಿ ಸಿಗ್ನಲಿಂಗ್ ಟೆಸ್ಟ್ ಮಾಡಲಿದ್ದಾರೆ. ಇದು ಮುಗಿಯುತ್ತಿದ್ದಂತೆ ದೂರ ಸಂಪರ್ಕ ಹಾಗೂ ವಿದ್ಯುತ್ ಪರೀಕ್ಷೆಗಳು ನಡೆಯಲಿವೆ. 18.82 ಕಿಮೀ ಉದ್ದವಿರುವ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗದಲ್ಲಿ ರೈಲು ಸಂಚರಿಸಲಿದೆ. ಎಲ್ಲಾ ರೀತಿಯ ಪರೀಕ್ಷೆಗಳು ಮುಗಿದ ನಂತರ ಸುರಕ್ಷತಾ ಪರೀಕ್ಷೆ ನಡೆಸಿ ವರದಿ ಸಲ್ಲಿಸಲಾಗುತ್ತೆ. ಕೇಂದ್ರ ರೇಲ್ವೆ ಸುರಕ್ಷಿತ ಅಧಿಕಾರಿಗಳ ಪರಿಶೀಲನೆ ನಂತರ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುತ್ತೆ. ಹಳದಿ ಮಾರ್ಗದಲ್ಲಿ ಒಟ್ಟು 16 ಮೆಟ್ರೋ ಸ್ಟೇಷನ್ ಗಳು ಇರಲಿವೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸ್ ಕಾನ್ಸ್​​ಟೇಬಲ್ ಸಾವಿನ ರಹಸ್ಯ ಬೇಧಿಸಲು ಬೇಕಾಯ್ತು 250 ಸಿಸಿಟಿವಿ!

2019 ರಲ್ಲಿ, ಚೀನಾದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್ ಕೋ ಲಿಮಿಟೆಡ್ 1,578 ಕೋಟಿ ರೂಪಾಯಿಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್) 216 ಕೋಚ್‌ಗಳನ್ನು ಪೂರೈಸಿತ್ತು.

ರೈಲು ಜೂನ್ 13ರ ಗುರುವಾರದಂದು ಬೊಮ್ಮಸಂದ್ರದಿಂದ ಮಧ್ಯಾಹ್ನ 12.43 ಕ್ಕೆ ಪ್ರಾಯೋಗಿಕ ರನ್‌ಗೆ ಹೊರಟಿತು ಮತ್ತು 14 ಮಧ್ಯಂತರ ನಿಲ್ದಾಣಗಳಲ್ಲಿ ತಲಾ ಎರಡು ನಿಮಿಷಗಳ ಕಾಲ ನಿಲ್ಲಿಸಿ ಆರ್‌ವಿ ರಸ್ತೆಗೆ ಬಂದಿದೆ. ಆರ್.ವಿ.ರಸ್ತೆಯಲ್ಲಿ ಅರ್ಧಗಂಟೆಯ ನಿಲುಗಡೆಯ ನಂತರ ರೈಲು ಬೊಮ್ಮಸಂದ್ರಕ್ಕೆ ವಾಪಸ್ ಹಿಂದಿರುಗಿದೆ. ಈ ಪ್ರಾಯೋಗಿಕ ಸಂಚಾರ ಪ್ರಕ್ರಿಯೆಯಲ್ಲಿ ಸಿಗ್ನಲಿಂಗ್ ಮತ್ತು ಟ್ರ್ಯಾಕ್ ಸ್ಥಿತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:07 am, Tue, 2 July 24

ತಾಜಾ ಸುದ್ದಿ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ