AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಸಾಧ್ಯತೆ; ಹೈ ಅಲರ್ಟ್​​ ಘೋಷಣೆ

ಸಮುದ್ರಮಟ್ಟದಲ್ಲಿ ಟ್ರಫ್(ಗಾಳಿಯ ಚಲನೆಯಿಂದ ವಾತಾವರಣದಲ್ಲಿ ಉಂಟಾಗುವ ಪರಿಣಾಮ) ಉಂಟಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಹಿಂಗಾರು ಮಳೆ(Rain) ಅಬ್ಬರ ಜೋರಾಗುವ ಸಾಧ್ಯತೆ ಇದೆ. ಅಲ್ಲದೇ ಸುಳಿಯ ಪ್ರಭಾವವು ಜಾಸ್ತಿಯಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯ ಅಲರ್ಟ್ ಘೋಷಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಹವಮಾನ ಇಲಾಖೆ ತಜ್ಞ ಎ.ಪ್ರಸಾದ್ ಹೇಳಿದರು.

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಸಾಧ್ಯತೆ; ಹೈ ಅಲರ್ಟ್​​ ಘೋಷಣೆ
ಕರ್ನಾಟಕ ಮಳೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 23, 2023 | 9:51 PM

ಬೆಂಗಳೂರು, ನ.23: ಸಮುದ್ರಮಟ್ಟದಲ್ಲಿ ಟ್ರಫ್(ಗಾಳಿಯ ಚಲನೆಯಿಂದ ವಾತಾವರಣದಲ್ಲಿ ಉಂಟಾಗುವ ಪರಿಣಾಮ) ಉಂಟಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಹಿಂಗಾರು ಮಳೆ(Rain) ಅಬ್ಬರ ಜೋರಾಗುವ ಸಾಧ್ಯತೆಯಿದೆ. ಅಲ್ಲದೇ ಸುಳಿಯ ಪ್ರಭಾವವು ಜಾಸ್ತಿಯಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯ ಅಲರ್ಟ್ ಘೋಷಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಹವಮಾನ ಇಲಾಖೆ ತಜ್ಞ ಎ.ಪ್ರಸಾದ್ ಹೇಳಿದರು. ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು 7 ಸೆಂ.ಮೀ. ಮಳೆ ಸಾಧ್ಯತೆಯಿದ್ದು, ಮೂರು ದಿನ ಮಳೆಯಾಗಲಿದೆ. ಈ ಹಿನ್ನಲೆ ಯಲ್ಲೋ ಅಲರ್ಟ್​​ ಘೋಷಣೆ ಮಾಡಲಾಗಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್​​ನಿಂದ ನವೆಂಬರ್​ವೆರೆಗೆ 38 ಪ್ರತಿಶತದಷ್ಟು ಮಳೆ ಕೊರತೆಯಿದೆ.  ಕರಾವಳಿ ಭಾಗದಲ್ಲಿ ಶೇಕಡಾ 14 ರಷ್ಟು, ಉತ್ತರ ಒಳನಾಡಿನಲ್ಲಿ ಶೇಕಡಾ 25ರಷ್ಟು ಮಳೆ ಕೊರತೆಯಿದೆ. ಇನ್ನು ಮೈಸೂರಿನಲ್ಲಿ ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ಮಳೆಯಾದರೆ, ಬೆಂಗಳೂರಿನಲ್ಲೂ ಈ ಬಾರಿ ಅತಿ ಹೆಚ್ಚಿನ ಮಳೆಯಾಗಿದೆ. ಈ ನಗರದಲ್ಲಿ ಮೂರು ದಿನಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಜ್ಞ ಎ.ಪ್ರಸಾದ್​ ಹೇಳಿದರು.

ಇದನ್ನೂ ಓದಿ:Karnataka Rain: ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭ; ನಾಳೆಯಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದವರಿಗೆ ಹಿಂಗಾರು ಮಳೆ ಕೈಹಿಡಿದಂತೆ ಕಾಣುತ್ತಿದೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ರೈತರು, ಹಿಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯುತ್ತಾರೆ. ಕಡಿಮೆ ಶ್ರಮ ಹಾಗೂ ಕಡಿಮೆ ನಿರ್ವಹಣೆ ಈ ಬೆಳೆಗೆ ಸಾಕಾಗಿರುತ್ತದೆ. ಈ ಬಾರಿ ಹಿಂಗಾರು ಮಳೆ ಕೂಡ ಕೈಕೊಡುವ ಲಕ್ಷಣವಿತ್ತು. ಇದೀಗ ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು 7 ಸೆಂ.ಮೀ. ಮಳೆ ಸಾಧ್ಯತೆಯಿದ್ದು, ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Thu, 23 November 23

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ