AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ 5 ವಾಹನಗಳಿಗೆ ಗುದ್ದಿದ ಚಾಲಕ! ಇಬ್ಬರು ಸ್ಥಳದಲ್ಲೇ ಸಾವು

ಟಿಟಿ ಗಾಡಿ ಗುದ್ದಿರುವ ರಭಸಕ್ಕೆ ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತವಾದರೂ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ ಚಾಲಕನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ.

ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ 5 ವಾಹನಗಳಿಗೆ ಗುದ್ದಿದ ಚಾಲಕ! ಇಬ್ಬರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jun 20, 2022 | 2:57 PM

Share

ಬೆಂಗಳೂರು: ನಗದರಲ್ಲಿ ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ (Accident) ನಡೆದಿದ್ದು, ಘಟನೆಯಲ್ಲಿ ಇಬ್ಬರು ಬೈಕ್ (Bike) ಸವಾರರು ಮೃತಪಟ್ಟಿದ್ದಾರೆ. ಕುಡಿದ ಮತ್ತಿನಲ್ಲಿ ಟಿಟಿ ವಾಹನ ಚಾಲಕ 5 ವಾಹನಗಳಿಗೆ ಗುದ್ದಿದ್ದಾನೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್ ಬಳಿಯ ಸರ್ಕಲ್​ನಲ್ಲಿ ಮೂರು ಗಾಡಿಗಳು ಮತ್ತು ಪಟೇಗಾರಪಾಲ್ಯದಲ್ಲಿ ಎರಡು ದ್ವಿಚಕ್ರ ವಾಹನಗಳಿಗೆ ಟಿಟಿ ವಾಹನ ಚಾಲಕ ಗುದ್ದಿದ್ದಾನೆ. ಟಿಟಿ ಗಾಡಿ ಗುದ್ದಿರುವ ರಭಸಕ್ಕೆ ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತವಾದರೂ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ ಚಾಲಕನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ.

ಮದ್ಯಪಾನ ಸೇವಿಸಿ ವಾಹನ ಚಲಾಯಿಸಿ ಅಪಘಾತ ಮಾಡಿದ್ದ ಚಾಲಕನ ಬಟ್ಟೆ ಬಿಚ್ಚಿ ಸ್ಥಳೀಯರು ಹೊಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಚಾಲಕ ಮತ್ತು ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Centre for Brain Research: ಬಾಗ್​ಚಿ-ಪಾರ್ಥಸಾರಥಿ ಆಸ್ಪತ್ರೆಗೆ ಮೋದಿ ಶಂಕು ಸ್ಥಾಪನೆ: ಮಿದುಳು ಸಂಶೋಧನೆಯಲ್ಲಿ ಕ್ರಾಂತಿಕಾರಕ ಹೆಜ್ಜೆ ಇಟ್ಟ ಭಾರತ

ಇದನ್ನೂ ಓದಿ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
ಬೆಂಗಳೂರು ಉಪನಗರ ರೈಲು ಯೋಜನೆಗೆ ನಮೋ ಶಂಕುಸ್ಥಾಪನೆ, ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
Image
ಕರ್ನಾಟಕದಲ್ಲಿಂದು ಪ್ರಧಾನಿ ಡೆವಲ್ಪೆಂಟ್ ಜೋಶ್ :ಮೋದಿ ವಿಕಾಸದ ಹಾದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಾಥ್
Image
Modi Mysuru Visit: ಇಂದು ಸಂಜೆ ನರೇಂದ್ರ ಮೋದಿ ಮೈಸೂರಿಗೆ ಪ್ರಯಾಣ; ಪ್ರಧಾನಿಯ ಊಟ-ತಿಂಡಿಗೆ ಏನೆಲ್ಲ ಸ್ಪೆಷಲ್ ಗೊತ್ತಾ?

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಬಸ್​​ನಲ್ಲಿದ್ದ 10 ಪ್ರಯಾಣಿಕರಿಗೆ ಗಾಯಗಳಾಗಿವೆ.

ಕಾರು-ಬೈಕ್​ ನಡುವೆ ಅಪಘಾತ: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಮೋದಿ ಬರುವ ಮುನ್ನ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಹೀಗಿದ್ದೂ, ಮೇಖ್ರಿ ಸರ್ಕಲ್​ ಬಳಿ ಕಾರು-ಬೈಕ್​ ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್​ ಬಿಟ್ಟಾಗ ಆತುರದಲ್ಲಿ ಹೋಗುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ 2 ವರ್ಷದ ಮಗುವಿಗೆ ಸಣ್ಣ ಗಾಯವಾಗಿದೆ. ಮಗುವನ್ನ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Mon, 20 June 22