AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿಯಲ್ಲಿ ಮತ್ತೊಂದು ಮೈಲುಗಲ್ಲು: 721 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದ ವಮಿಕ ಯಂತ್ರ

Namma Metro ವಮಿಕ(ಸುರಂಗ ಕೊರೆಯುವ ಯಂತ್ರ ) ಯಂತ್ರ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 721 ಮೀಟರ್ ನಮ್ಮ ಮೆಟ್ರೋ ಸುರಂಗ ಕೊರೆದು ಯಶಸ್ವಿಯಾಗಿ ಹೊರ ಬಂದಿದೆ. ಏಪ್ರಿಲ್ 21ರಂದು ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಒಳನುಗಿದ್ದ ವಮಿಕ ಬರೋಬ್ಬರಿ ನಾಲ್ಕು ತಿಂಗಳು ಅಂದರೆ 132 ದಿನದ ಬಳಿಕ ಆಚೆ ಬಂದಿದೆ.

ಮೆಟ್ರೋ ಕಾಮಗಾರಿಯಲ್ಲಿ ಮತ್ತೊಂದು ಮೈಲುಗಲ್ಲು: 721 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದ ವಮಿಕ ಯಂತ್ರ
ಸುರಂಗ ಕೊರೆಯುವ ಯಂತ್ರ (ವಮಿಕ)
ಕಿರಣ್​ ಸೂರ್ಯ
| Edited By: |

Updated on:Aug 30, 2023 | 5:16 PM

Share

ಬೆಂಗಳೂರಿ, (ಆಗಸ್ಟ್ 30): ಬೆಂಗಳೂರಿನಲ್ಲಿ ನಮ್ಮ ಮೆಟ್ರೋ (Namma Metro) ಕಾಮಗಾರಿ ಮತ್ತೊಂದು ಮೈಲುಗಲ್ಲು ತಲುಪಿದೆ. ವಮಿಕ ಯಂತ್ರ (tunneling machine vamika )ಬರೋಬ್ಬರಿ 721 ಮೀಟರ್ ಮೆಟ್ರೋ ಸುರಂಗ ಕೊರೆದು ವಮಿಕ ಬರೋಬ್ಬರಿ ನಾಲ್ಕು ತಿಂಗಳು ಅಂದರೆ 132 ದಿನದ ಬಳಿಕ ಯಶಸ್ವಿಯಾಗಿ ಹೊರ ಬಂದಿದೆ. ಏಪ್ರಿಲ್ 21ರಂದು ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಸುರಂಗ ಕೊರೆಯಲು ಆರಂಭಿಸಿದ್ದ ವಮಿಕ, ಇಂದು(ಆಗಸ್ಟ್ 30) ಬೆಂಗಳೂರಿನ ಲ್ಯಾಂಗ್​ಫೋರ್ಡ್​ ಟೌನ್​ ನಿಲ್ದಾಣದಲ್ಲಿ ಹೊರಬಂದಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ ಮಾಹಿತಿ ನೀಡಿದೆ.

ಈ ಹಿಂದೆ ವಮಿಕ ಟಿಬಿಎಂ ಮೆಷಿನ್ ಸೌತ್ ರಾಂಪ್ ಮತ್ತು ಡೈರಿ ಸರ್ಕಲ್‌ ಸುರಂಗ ನಿಲ್ದಾಣಗಳ ನಡುವೆ 613.2 ಮೀ ಹಾಗೂ ಡೈರಿ ಸರ್ಕಲ್‌ ನಿಲ್ದಾಣದಿಂದ ಲಕ್ಕಸಂದ್ರ ನಿಲ್ದಾಣದ ನಡುವೆ 743.4 ಮೀ ಸುರಂಗ ಕಾಮಗಾರಿ ಪೂರ್ಣಗೊಳಿಸಿತ್ತು. ಇದೀಗ ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಲ್ಯಾಂಗ್​ಫೋರ್ಡ್​ ಟೌನ್​ ನಿಲ್ದಾಣದಲ್ಲಿ 721 ಮೀಟರ್ ಸುರಂಗ ಕೊರೆದಿದೆ. ಇದರೊಂದಿಗೆ ಹಂತ-2, ರೀಚ್-6ರ 20.991 ಕಿ.ಮೀ ಸುರಂಗ ಮಾರ್ಗದಲ್ಲಿ ಒಟ್ಟು 17,62ಕಿ.ಮೀ ಕಾಮಗಾರಿ ಪೂರ್ಣಗೊಂಡಂತಾಗಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಮೂಲಕ ಮಾಹಿತಿ ತಿಳಿಸಿದೆ

ರೀಚ್-6ರ 20.991 ಕಿ.ಮೀ. ಪೈಕಿ 17.62 ಕಿ.ಮೀ. ಸುರಂಗ ಮಾರ್ಗ ಪೂರ್ಣಗೊಂಡಿದೆ. ಇದರೊಂದಿಗೆ ರೀಚ್-6ರ ಸುರಂಗ ಮಾರ್ಗದಲ್ಲಿ 9 ಟಿಬಿಎಂಗಳ ಕಾರ್ಯಾಚರಣೆ ನಡೆದಿದ್ದು, ಈ ಪೈಕಿ 6 ಟಿಬಿಎಂಗಳು ಸುರಂಗ ಕಾಮಗಾರಿ ಪೂರ್ಣಗೊಳಿಸಿವೆ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ ಹೇಳಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:07 pm, Wed, 30 August 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ