AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿಯಲ್ಲಿ ಮತ್ತೊಂದು ಮೈಲುಗಲ್ಲು: 721 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದ ವಮಿಕ ಯಂತ್ರ

Namma Metro ವಮಿಕ(ಸುರಂಗ ಕೊರೆಯುವ ಯಂತ್ರ ) ಯಂತ್ರ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 721 ಮೀಟರ್ ನಮ್ಮ ಮೆಟ್ರೋ ಸುರಂಗ ಕೊರೆದು ಯಶಸ್ವಿಯಾಗಿ ಹೊರ ಬಂದಿದೆ. ಏಪ್ರಿಲ್ 21ರಂದು ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಒಳನುಗಿದ್ದ ವಮಿಕ ಬರೋಬ್ಬರಿ ನಾಲ್ಕು ತಿಂಗಳು ಅಂದರೆ 132 ದಿನದ ಬಳಿಕ ಆಚೆ ಬಂದಿದೆ.

ಮೆಟ್ರೋ ಕಾಮಗಾರಿಯಲ್ಲಿ ಮತ್ತೊಂದು ಮೈಲುಗಲ್ಲು: 721 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದ ವಮಿಕ ಯಂತ್ರ
ಸುರಂಗ ಕೊರೆಯುವ ಯಂತ್ರ (ವಮಿಕ)
Kiran Surya
| Edited By: |

Updated on:Aug 30, 2023 | 5:16 PM

Share

ಬೆಂಗಳೂರಿ, (ಆಗಸ್ಟ್ 30): ಬೆಂಗಳೂರಿನಲ್ಲಿ ನಮ್ಮ ಮೆಟ್ರೋ (Namma Metro) ಕಾಮಗಾರಿ ಮತ್ತೊಂದು ಮೈಲುಗಲ್ಲು ತಲುಪಿದೆ. ವಮಿಕ ಯಂತ್ರ (tunneling machine vamika )ಬರೋಬ್ಬರಿ 721 ಮೀಟರ್ ಮೆಟ್ರೋ ಸುರಂಗ ಕೊರೆದು ವಮಿಕ ಬರೋಬ್ಬರಿ ನಾಲ್ಕು ತಿಂಗಳು ಅಂದರೆ 132 ದಿನದ ಬಳಿಕ ಯಶಸ್ವಿಯಾಗಿ ಹೊರ ಬಂದಿದೆ. ಏಪ್ರಿಲ್ 21ರಂದು ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಸುರಂಗ ಕೊರೆಯಲು ಆರಂಭಿಸಿದ್ದ ವಮಿಕ, ಇಂದು(ಆಗಸ್ಟ್ 30) ಬೆಂಗಳೂರಿನ ಲ್ಯಾಂಗ್​ಫೋರ್ಡ್​ ಟೌನ್​ ನಿಲ್ದಾಣದಲ್ಲಿ ಹೊರಬಂದಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ ಮಾಹಿತಿ ನೀಡಿದೆ.

ಈ ಹಿಂದೆ ವಮಿಕ ಟಿಬಿಎಂ ಮೆಷಿನ್ ಸೌತ್ ರಾಂಪ್ ಮತ್ತು ಡೈರಿ ಸರ್ಕಲ್‌ ಸುರಂಗ ನಿಲ್ದಾಣಗಳ ನಡುವೆ 613.2 ಮೀ ಹಾಗೂ ಡೈರಿ ಸರ್ಕಲ್‌ ನಿಲ್ದಾಣದಿಂದ ಲಕ್ಕಸಂದ್ರ ನಿಲ್ದಾಣದ ನಡುವೆ 743.4 ಮೀ ಸುರಂಗ ಕಾಮಗಾರಿ ಪೂರ್ಣಗೊಳಿಸಿತ್ತು. ಇದೀಗ ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಲ್ಯಾಂಗ್​ಫೋರ್ಡ್​ ಟೌನ್​ ನಿಲ್ದಾಣದಲ್ಲಿ 721 ಮೀಟರ್ ಸುರಂಗ ಕೊರೆದಿದೆ. ಇದರೊಂದಿಗೆ ಹಂತ-2, ರೀಚ್-6ರ 20.991 ಕಿ.ಮೀ ಸುರಂಗ ಮಾರ್ಗದಲ್ಲಿ ಒಟ್ಟು 17,62ಕಿ.ಮೀ ಕಾಮಗಾರಿ ಪೂರ್ಣಗೊಂಡಂತಾಗಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಮೂಲಕ ಮಾಹಿತಿ ತಿಳಿಸಿದೆ

ರೀಚ್-6ರ 20.991 ಕಿ.ಮೀ. ಪೈಕಿ 17.62 ಕಿ.ಮೀ. ಸುರಂಗ ಮಾರ್ಗ ಪೂರ್ಣಗೊಂಡಿದೆ. ಇದರೊಂದಿಗೆ ರೀಚ್-6ರ ಸುರಂಗ ಮಾರ್ಗದಲ್ಲಿ 9 ಟಿಬಿಎಂಗಳ ಕಾರ್ಯಾಚರಣೆ ನಡೆದಿದ್ದು, ಈ ಪೈಕಿ 6 ಟಿಬಿಎಂಗಳು ಸುರಂಗ ಕಾಮಗಾರಿ ಪೂರ್ಣಗೊಳಿಸಿವೆ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ ಹೇಳಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:07 pm, Wed, 30 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?