AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ
TV9 Web
| Edited By: sandhya thejappa|

Updated on:May 05, 2022 | 4:48 PM

Share

ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta) ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್​ರನ್ನು (Tushar Girinath) ನೇಮಕ ಮಾಡಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಮನೋಜ್ ಜೈನ್ ನೇಮಕಗೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ವರ್ಗಾವಣೆಯಾಗಿದ್ದು, ಪೊನ್ನುರಾಜ್​ಗೆ ಕೆಪಿಸಿಎಲ್ ಎಂಡಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಹಾಗೇ, 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆಗೆ ನೀಡಿದೆ. ದೆಹಲಿ ಕರ್ನಾಟಕ ಭವನದ ಉಪಸ್ಥಾನೀಯ ಆಯುಕ್ತರಾಗಿ ಖುಷ್ಬೂ ಚೌಧರಿ ನೇಮಕಗೊಂಡಿದ್ದಾರೆ. ಕೆಪಿಎಸ್​ಸಿ ಕಾರ್ಯದರ್ಶಿಯಾಗಿ ಕ್ಯಾ.‌ಡಾ.ರಾಜೇಂದ್ರ, ಕೆಆರ್​ಐಡಿಎಲ್ ಎಂಡಿ ಆಗಿ ಎಂ.ಜಿ.ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಗಿ ನಿತೇಶ್ ಪಾಟೀಲ್​, ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗ್ಡೆ ವರ್ಗಾವಣೆಯಾಗಿದ್ದಾರೆ.

ಕೆಎಸ್​ಆರ್​ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್, ಬಾಗಲಕೋಟೆ ಜಿಲ್ಲಾಧಿಕಾರಿ ಭೂ ಬಾಲನ್ ಟಿ, ಇಡಿಸಿಎಸ್ ನಿರ್ದೇಶಕರಾಗಿ ಡಾ.ದಿನೇಶ್ ಸಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಭರತ್ ಎಸ್, ಕೆಯುಐಡಿಎಫ್​ಸಿ ಎಂಡಿಯಾಗಿ ಶಿಲ್ಪಾ ಎಂ, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಹೆಚ್, ಕಲಬುರಗಿ ಜಿ.ಪಂ. ಸಿಇಒ ಆಗಿದೆ ಡಾ.ಗಿರೀಶ್ ದಿಲೀಪ್ ಬಾಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ

ಊಟದ ಮುನ್ನವೇ ಸಿಹಿ ತಿನ್ನಬೇಕೆಂದು ಹೇಳುತ್ತೆ ಆಯುರ್ವೇದ, ಏಕೆ?

‘ಜಯರಾಜ್​ ಒಬ್ಬ ಸಂತ ಅಂತ ತೋರಿಸೋಕೆ ಆಗಲ್ಲ; ಸತ್ಯವನ್ನೇ ತೋರಿಸಿದ್ದೇನೆ’: ಅಗ್ನಿ ಶ್ರೀಧರ್​ ತಿರುಗೇಟು

Published On - 4:17 pm, Thu, 5 May 22

Follow Us
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ