AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ
TV9 Web
| Edited By: sandhya thejappa|

Updated on:May 05, 2022 | 4:48 PM

Share

ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta) ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್​ರನ್ನು (Tushar Girinath) ನೇಮಕ ಮಾಡಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಮನೋಜ್ ಜೈನ್ ನೇಮಕಗೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ವರ್ಗಾವಣೆಯಾಗಿದ್ದು, ಪೊನ್ನುರಾಜ್​ಗೆ ಕೆಪಿಸಿಎಲ್ ಎಂಡಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಹಾಗೇ, 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆಗೆ ನೀಡಿದೆ. ದೆಹಲಿ ಕರ್ನಾಟಕ ಭವನದ ಉಪಸ್ಥಾನೀಯ ಆಯುಕ್ತರಾಗಿ ಖುಷ್ಬೂ ಚೌಧರಿ ನೇಮಕಗೊಂಡಿದ್ದಾರೆ. ಕೆಪಿಎಸ್​ಸಿ ಕಾರ್ಯದರ್ಶಿಯಾಗಿ ಕ್ಯಾ.‌ಡಾ.ರಾಜೇಂದ್ರ, ಕೆಆರ್​ಐಡಿಎಲ್ ಎಂಡಿ ಆಗಿ ಎಂ.ಜಿ.ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಗಿ ನಿತೇಶ್ ಪಾಟೀಲ್​, ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗ್ಡೆ ವರ್ಗಾವಣೆಯಾಗಿದ್ದಾರೆ.

ಕೆಎಸ್​ಆರ್​ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್, ಬಾಗಲಕೋಟೆ ಜಿಲ್ಲಾಧಿಕಾರಿ ಭೂ ಬಾಲನ್ ಟಿ, ಇಡಿಸಿಎಸ್ ನಿರ್ದೇಶಕರಾಗಿ ಡಾ.ದಿನೇಶ್ ಸಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಭರತ್ ಎಸ್, ಕೆಯುಐಡಿಎಫ್​ಸಿ ಎಂಡಿಯಾಗಿ ಶಿಲ್ಪಾ ಎಂ, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಹೆಚ್, ಕಲಬುರಗಿ ಜಿ.ಪಂ. ಸಿಇಒ ಆಗಿದೆ ಡಾ.ಗಿರೀಶ್ ದಿಲೀಪ್ ಬಾಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ

ಊಟದ ಮುನ್ನವೇ ಸಿಹಿ ತಿನ್ನಬೇಕೆಂದು ಹೇಳುತ್ತೆ ಆಯುರ್ವೇದ, ಏಕೆ?

‘ಜಯರಾಜ್​ ಒಬ್ಬ ಸಂತ ಅಂತ ತೋರಿಸೋಕೆ ಆಗಲ್ಲ; ಸತ್ಯವನ್ನೇ ತೋರಿಸಿದ್ದೇನೆ’: ಅಗ್ನಿ ಶ್ರೀಧರ್​ ತಿರುಗೇಟು

Published On - 4:17 pm, Thu, 5 May 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು