AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನಕ್ಕೆ ಜಾಗೃತಿ‌ ಮೂಡಿಸಲು ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಏಪ್ರಿಲ್ 26ರಂದು ಬೆಂಗಳೂರು ದಕ್ಷಿಣ, ಮಧ್ಯ ಮತ್ತು ಉತ್ತರ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾರರು ತಪ್ಪದೇ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನಕ್ಕೆ ಜಾಗೃತಿ‌ ಮೂಡಿಸಲು ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ತುಷಾರ್ ಗಿರಿನಾಥ್
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Mar 26, 2024 | 7:44 AM

ಬೆಂಗಳೂರು, ಮಾರ್ಚ್​.26: ಲೋಕಸಭಾ ಚುನಾವಣೆ (Lok Sabha Election) ದಿನಾಂಕ ನಿಗದಿ ಆಗಿದ್ದು, ಜಿಲ್ಲಾ ಚುನಾವಣಾಧಿಕಾರಿ ಅಲರ್ಟ್ ಆಗಿದ್ದಾರೆ. ಬೆಂಗಳೂರಲ್ಲಿ ಕಳೆದ ಬಾರಿ ಮತದಾನ (Voting) ಕಡಿಮೆ ಹಿನ್ನಲೆ ಮತದಾನ ಹೆಚ್ಚಳಕ್ಕೆ ಪ್ಲ್ಯಾನ್ ನಡೆದಿದೆ. ಈಗಾಗಲೆ ಬೇರೆ ಬೇರೆ ವಲಯಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ಹಬ್ಬ ಅಂತನೇ ಕರೆಸಿಕೊಳ್ಳುವ ಲೋಕಸಭಾ ಚುನಾವಣೆಗೆ ದಿನಗಣನೆ ಅರಂಭವಾಗಿದ್ದು, ಆಯೋಗ ಇದಕ್ಕೆ ಬೇಕಾದ ಸಕಲ ಸಿದ್ದತೆ ಮಾಡಿಕೊಳ್ತಿದೆ. ಚುನಾವಣೆಗೆ ನೇಮಕಗೊಂಡಿರುವ ಬಿಎಲ್​ಓ ಹಾಗೂ ಸಿಬ್ಬಂದಿಗಳಿಗೆ ಚುನಾವಣೆ ಪಾಠವನ್ನು ಜಿಲ್ಲಾ ಚುನಾವಣೆ ಅಧಿಕಾರಿ‌‌ ತುಷಾರ್ ಗಿರಿನಾಥ್ (Tushar Girinath) ಮಾಡಿದ್ದು, ಕಳೆದ ಬಾರಿ ನಗರದಲ್ಲಿ ಕೆಲ ಮತಗಟ್ಟೆಗಳಲ್ಲಿ 51% ಕಡಿಮೆ ಮತದಾನ ಹಿನ್ನಲೆ ಅಂತಹ ಮತಗಟ್ಟೆಗಳಲ್ಲಿ ಜಾಗೃತಿ‌ ಮೂಡಿಸುವ‌ ಮೂಲಕ ಹೆಚ್ಚು ಮತದಾನಕ್ಕೆ ಕರೆ ಕೊಟ್ಟಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 1,897 ಮತಗಟ್ಟೆಗಳ ಪೈಕಿ 935 ಮತಗಟ್ಟೆಗಳಲ್ಲಿ 2019ರಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶೇಕಡಾವರು ಮತದಾನ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹೋಳಿ: ಬಣ್ಣದೋಕುಳಿಯಲಿ ಮಿಂದೆದ್ದು ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿಯಿಂದ ಬಿತ್ತು ಫೈನ್

ಮತದಾರರು ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ನಮೂದಿಸುವ ಮೂಲಕ ಮತಗಟ್ಟೆಗಳು ಮತ್ತು ವಿಳಾಸಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಮತದಾರರ ಸಹಾಯವಾಣಿಗೆ ಭೇಟಿ ನೀಡಬಹುದು.ಮತಗಟ್ಟೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಸಾಫ್ಟ್‌ವೇರ್ ಸಹ ಅಭಿವೃದ್ಧಿಪಡಿಸಲಾಗುತ್ತಿದೆ.

ಇನ್ನೂ ಬೇರೆ ಬೇರೆ ವಲಯಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ಅಧಿಕಾರಿಗಳು ತರಬೇತಿ‌ ನೀಡುತ್ತಿದ್ದಾರೆ. ಮತದಾರರಿಗೆ ಮತದಾನ ಜಾಗೃತಿ ಕಾರ್ಯಾಗಾರ ಜೊತೆಗೆ ಕಡಿಮೆ ಮತದಾನವಾದ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೀದಿ ನಾಟಕ ಮೂಲಕ ಮತದಾನ ಜಾಗೃತಿ‌ ಮೂಡಿಸಲು ಜಿಲ್ಲಾ ಚುನಾವಣಾ ಅಧಿಕಾರಿಗಳು ಪ್ಲ್ಯಾನ್ ಮಾಡಿದ್ದಾರೆ. ಈಗಾಗಲೇ ಎಲ್ಲಾ ಸಿಬ್ಬಂದಿಗಳಿಗೆ ಮತದಾನದ ಕಾರ್ಯದ ಬಗ್ಗೆ ಟ್ರೈನಿಂಗ್ ಕೊಡಲಾಗಿದ್ದು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ವೀಕ್ಷಣೆ ಮಾಡಲು ವ್ಯವಸ್ಥೆ ಇದೆ ಹಾಗೂ ಪ್ಯಾರ ಮಿಲಿಟರಿ ನಿಯೋಜನೆ ಮಾಡಲಾಗುತ್ತದೆ.

ಒಟ್ಟಿನಲ್ಲಿ ಮತದಾನ ಹೆಚ್ಚಳಕ್ಕೆ ಚುನಾವಣೆ ಆಯೋಗ ಮುಂದಾಗಿದ್ದು, ಅಧಿಕಾರಿಗಳಿಗೆ ತರಬೇತಿ‌ ನೀಡುವ ಮೂಲಕ ಈ ಬಾರಿ ಪ್ರಜಾಪ್ರಭುತ್ವ ಹಬ್ಬವನ್ನು ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುಂಜಾಗ್ರತೆಯ ಕ್ರಮ ವಹಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ