AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Impact: ಟಿವಿ9 ವರದಿ ಬೆನ್ನಲ್ಲೇ ಮಕ್ಕಳ ಮೊಬೈಲ್ ಬಳಕೆ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಇಳಿದ ಸರ್ಕಾರ, ತಜ್ಞರ ಸಮಿತಿ ರಚನೆ

ಮಕ್ಕಳು ಅತಿ ಹೆಚ್ಚು ಮೊಬೈಲ್ ಬಳಸುವುದರಿಂದ ಉಂಟಾಗುವ ಡಿಸಾರ್ಡರ್ ಸಮಸ್ಯೆಗಳ ಕುರಿತು ಟಿವಿ9 ಇದೇ ತಿಂಗಳ 15ರಂದು ಸುದ್ದಿ ಪ್ರಸಾರ ಮಾಡಿತ್ತು. ಈಗ ಮೊಬೈಲ್ ಗೀಳು ಹಾಗೂ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

TV9 Impact: ಟಿವಿ9 ವರದಿ ಬೆನ್ನಲ್ಲೇ ಮಕ್ಕಳ ಮೊಬೈಲ್ ಬಳಕೆ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಇಳಿದ ಸರ್ಕಾರ, ತಜ್ಞರ ಸಮಿತಿ ರಚನೆ
ಸಾಂದರ್ಭಿಕ ಚಿತ್ರ
Vinay Kashappanavar
| Updated By: ಆಯೇಷಾ ಬಾನು|

Updated on:Jul 22, 2023 | 7:57 AM

Share

ಬೆಂಗಳೂರು, ಜುಲೈ 22: ಮೊಬೈಲ್ ಬಳಕೆಯಿಂದ ಮಕ್ಕಳ(Children Mobile Use) ಮೇಲೆ ಉಂಟಾಗುತ್ತಿರುವ ದೈಹಿಕ ಸಮಸ್ಯೆಗಳ ಬಗ್ಗೆ ಕೆಲ ದಿನಗಳ ಹಿಂದೆ ಟಿವಿ9 ಕನ್ನಡ ಮಾಧ್ಯಮ ಸುದ್ದಿ ಪ್ರಸಾರ ಮಾಡಿತ್ತು(Tv9 Kannada). ಈ ಬೆನ್ನಲ್ಲೇ ಈಗ ಮೊಬೈಲ್ ಗೀಳು ಹಾಗೂ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಕ್ಕಳ ಹಕ್ಕುಗಳ ಆಯೋಗವು(Karnataka State Commission for Protection of Child Rights) ಮೊಬೈಲ್ ಗೀಳು ಹಾಗೂ ಕ್ರಮಗಳ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿದೆ.

ಮಕ್ಕಳು ಅತಿ ಹೆಚ್ಚು ಮೊಬೈಲ್ ಬಳಸುವುದರಿಂದ ಉಂಟಾಗುವ ಡಿಸಾರ್ಡರ್ ಸಮಸ್ಯೆಗಳ ಕುರಿತು ಟಿವಿ9 ಇದೇ ತಿಂಗಳ 15ರಂದು ಸುದ್ದಿ ಪ್ರಸಾರ ಮಾಡಿತ್ತು. ಟಮರ್ಸ್ ಡಿಸಾರ್ಡರ್ ಸೇರಿದಂತೆ ದೈಹಿಕ ಡಿಸಾರ್ಡರ್ ಗೆ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ವರದಿ ಪ್ರಸಾರ ಮಾಡಿತ್ತು. ಈ ವರದಿಯ ಬಳಿಕ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಹಕ್ಕುಗಳ ಆಯೋಗಕ್ಕೂ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನಲೆ ಈ ಬಗ್ಗೆ ಅಧ್ಯಯನ ನಡೆಸಲು ಇಲಾಖೆ ಮುಂದಾಗಿದೆ. ಅಲ್ಲದೆ ಸಮಸ್ಯೆ ಬಗ್ಗೆ ಎಚ್ಚೆತ್ತುಗೊಂಡ ಸರ್ಕಾರ ಮಕ್ಕಳ ಮೊಬೈಲ್ ಗೀಳು ಕಡಿಮೆ ಮಾಡಲು ಪ್ಲಾನ್ ಮಾಡಿದೆ.

ಇದನ್ನೂ ಓದಿ: Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ

ಮಕ್ಕಳ ಮೊಬೈಲ್ ಗೀಳಿಗೆ ಕಾರಣ ಏನು? ಮೊಬೈಲ್ ಗೀಳು ಕಂಟ್ರೋಲ್ ಹಾಗು ದೈಹಿಕ ಸಮಸ್ಯೆ ನಿವಾರಿಸಲು ಯಾವೆಲ್ಲ ಪ್ಲಾನ್ ಮಾಡಬಹುದು ಎಂಬ ಬಗ್ಗೆ ವರದಿ ನೀಡಲು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಶಿಕ್ಷಣ ಇಲಾಖೆ, ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ವಿಭಾಗ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ 9 ವಿಭಾಗಗಳ ತಜ್ಞರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಈ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಕ್ಕಳ ಮೊಬೈಲ್ ಗೀಳಿನ ಬಗ್ಗೆ ಅಧ್ಯಯನ ಮಾಡಲಿದೆ. ಸಮಗ್ರ ಅಧ್ಯಯನದ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮುಂದಿನ ಮೂರು ತಿಂಗಳು ಈ ಸಮಿತಿ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲಿದೆ. ಮಕ್ಕಳ ಹಕ್ಕುಗಳ ತಜ್ಞರ ವರದಿ ಆಧರಿಸಿ ಮೊಬೈಲ್ ಗೀಳು ಕಡಿಮೆ ಮಾಡಲು ಕ್ರಮಕ್ಕೆ ಅಥವಾ ಸೂಕ್ತ ತಂತ್ರಜ್ಞಾನ ಸಿದ್ಧಪಡಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:32 am, Sat, 22 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ