Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

2021ರಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಾರಿ ಮಾಡಿದ್ದ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು.

Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Mar 08, 2024 | 10:44 AM

ಬೆಂಗಳೂರು, ಮಾರ್ಚ್​.08: ಟಿವಿ9 ನ್ಯೂಸ್​ನ ಬಿಗ್​ ಇಂಪ್ಯಾಕ್ಟ್​. ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್​ಸಿಎಲ್ (BMRCL) ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಘೇರಾವ್, ಗ್ರಾಮಸ್ಥರ ಮಾತಿನ ಚಕಮಕಿ

ಏನಿದು ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2021?

2021ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರು ‘ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ- 2021’ ಅನ್ನು ಪ್ರಾರಂಭಿಸಿದರು. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಸಾರ್ವಜನಿಕರು ತಮ್ಮ ಮನೆಗಳಿಂದ ಬಸ್ ನಿಲ್ದಾಣಗಳು, ರೈಲ್ವೆ ಮತ್ತು ಮೆಟ್ರೋ ಸ್ಟೇಷನ್‌ಗಳಿಗೆ ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ತೆರಳುವಂತೆ ಮಾಡುವುದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಪ್ರಯಾಣದ ಸಮಯ ಮತ್ತು ಅನನುಕೂಲತೆ ಕಡಿಮೆ ಮಾಡುವುದು. “ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2021 ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಪ್ರಯಾಣಿಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿತ್ತು.

ಆದರೆ ಇತ್ತೀಚೆಗೆ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ಮಹಿಳೆಯರಿಗೆ ಅಸುರಕ್ಷಿತ ಎಂಬ ಕೂಗು ಎದ್ದಿತ್ತು. ಈ ಬಗ್ಗೆ ಟಿವಿ9 ಕೂಡ ಸುದ್ದಿ ಬಿತ್ತರಿಸಿ ಸರ್ಕಾರದ ಗಮನ ಸೆಳೆದಿತ್ತು. ಅಲ್ಲದೆ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಸದ್ಯ ಈಗ ಸರ್ಕಾರ ಈ ಯೋಜನೆಯನ್ನು ರದ್ದು ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:44 am, Fri, 8 March 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ