AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

2021ರಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಾರಿ ಮಾಡಿದ್ದ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು.

Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Mar 08, 2024 | 10:44 AM

Share

ಬೆಂಗಳೂರು, ಮಾರ್ಚ್​.08: ಟಿವಿ9 ನ್ಯೂಸ್​ನ ಬಿಗ್​ ಇಂಪ್ಯಾಕ್ಟ್​. ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್​ಸಿಎಲ್ (BMRCL) ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಘೇರಾವ್, ಗ್ರಾಮಸ್ಥರ ಮಾತಿನ ಚಕಮಕಿ

ಏನಿದು ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2021?

2021ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರು ‘ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ- 2021’ ಅನ್ನು ಪ್ರಾರಂಭಿಸಿದರು. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಸಾರ್ವಜನಿಕರು ತಮ್ಮ ಮನೆಗಳಿಂದ ಬಸ್ ನಿಲ್ದಾಣಗಳು, ರೈಲ್ವೆ ಮತ್ತು ಮೆಟ್ರೋ ಸ್ಟೇಷನ್‌ಗಳಿಗೆ ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ತೆರಳುವಂತೆ ಮಾಡುವುದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಪ್ರಯಾಣದ ಸಮಯ ಮತ್ತು ಅನನುಕೂಲತೆ ಕಡಿಮೆ ಮಾಡುವುದು. “ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2021 ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಪ್ರಯಾಣಿಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿತ್ತು.

ಆದರೆ ಇತ್ತೀಚೆಗೆ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ಮಹಿಳೆಯರಿಗೆ ಅಸುರಕ್ಷಿತ ಎಂಬ ಕೂಗು ಎದ್ದಿತ್ತು. ಈ ಬಗ್ಗೆ ಟಿವಿ9 ಕೂಡ ಸುದ್ದಿ ಬಿತ್ತರಿಸಿ ಸರ್ಕಾರದ ಗಮನ ಸೆಳೆದಿತ್ತು. ಅಲ್ಲದೆ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಸದ್ಯ ಈಗ ಸರ್ಕಾರ ಈ ಯೋಜನೆಯನ್ನು ರದ್ದು ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:44 am, Fri, 8 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್