AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ಜೈಲಧಿಕಾರಿಗಳ ದುರಾಡಳಿತ ಆರೋಪ, ಖೈದಿಗಳ ಉಪವಾಸ ಪ್ರತಿಭಟನೆ; ಟಿವಿ9 ವಿಶೇಷ ವರದಿ ಇಲ್ಲಿದೆ

Parappana Agrahara: ಬೆಂಗಳೂರಿನಲ್ಲಿರುವಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ಬಹಳ ಸಮಸ್ಯೆಯಾಗುತ್ತಿದೆ ಎಂದು ಖೈದಿಗಳು ಆರೋಪಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲು ನೆರವಾಗಿ ಎಂದು ಅವರು ಕೋರಿಕೊಂಡಿದ್ದಾರೆ. ಈ ಕುರಿತ ಟಿವಿ9 ವಿಶೇಷ ವರದಿ ಇಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ಜೈಲಧಿಕಾರಿಗಳ ದುರಾಡಳಿತ ಆರೋಪ, ಖೈದಿಗಳ ಉಪವಾಸ ಪ್ರತಿಭಟನೆ; ಟಿವಿ9 ವಿಶೇಷ ವರದಿ ಇಲ್ಲಿದೆ
ಪರಪ್ಪನ ಅಗ್ರಹಾರ ಜೈಲು (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Oct 16, 2021 | 11:17 AM

ಬೆಂಗಳೂರು: ನಗರದಲ್ಲಿರುವ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನೊಳಗೆ ನಡೆಯುತ್ತಿರುವ ಕರಾಳ ಕೃತ್ಯಗಳ ಕುರಿತು ಈ ಹಿಂದೆ ಟಿವಿ9 ವಿಶೇಷ ವರದಿ ಪ್ರಸಾರ ಮಾಡಿತ್ತು. ಅಪರಾಧಿಗಳು ಜೈಲಿನೊಳಗೆ ಕುಳಿತು ಏನೆಲ್ಲಾ ಸವಲತ್ತು ಪಡೆಯುತ್ತಾ, ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗೂ ಜೈಲಿನ ಕೆಲವು ಸಿಬ್ಬಂದಿಗಳು ಅಕ್ರಮ ಎಸಗುತ್ತಿರುವುದರ ಬಗ್ಗೆ ವರದಿಯಲ್ಲಿ ತಿಳಿಸಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಅಂದಿನ ಗೃಹ ಸಚಿವ, ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಜೈಲಿನಲ್ಲಿ ಪ್ರಿಸನ್ ವೆಲ್​ಫೇರ್ ಬೋರ್ಡ್ ಸ್ಥಾಪಿಸುವುದಾಗಿಯೂ ಅವರು ತಿಳಿಸಿದ್ದರು. ಆದರೆ ಅದ್ಯಾವುದೂ ಸಾಕಾರವಾಗಿಲ್ಲ. ಅಷ್ಟೇ ಅಲ್ಲದೇ, ಇದೀಗ ಜೈಲಿನೊಳಗೆ ಬಹಳ ಸಂಕಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಖೈದಿಗಳು ಟಿವಿ9ನೊಂದಿಗೆ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದು, ಜೈಲಧಿಕಾರಿಗಳ ವಿರುದ್ಧ ಉಪವಾಸ ಪ್ರತಿಭಟನೆ ನಡೆಸಿದ್ದಾರೆ.

ಟಿವಿ9ನಲ್ಲಿ ಈ ಹಿಂದೆ ಬಯಲಾಗಿದ್ದ ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ಪ್ರಪಂಚ:

ಪ್ರಸ್ತುತ ಖೈದಿಗಳು ಎದುರಿಸುತ್ತಿರುವ ಸಮಸ್ಯೆಗಳೇನು? ಜೈಲಿನಲ್ಲಿ ಸಿಬ್ಬಂದಿಗಳ ಅಕ್ರಮ ದಂಧೆ ಇನ್ನೂ ನಿಂತಿಲ್ಲವೇ ಎಂಬ ಅನುಮಾನ ವ್ಯಕ್ತವಾಗಿದೆ. ಕಾರಣ, ಜೈಲಧಿಕಾರಿಗಳ ವಿರುದ್ಧ ಖೈದಿಗಳು ಉಪವಾಸ ಪ್ರತಿಭಟನೆ ನಡೆಸಿದ್ದಾರೆ. ಜೈಲಿನಲ್ಲಿ ಇಬ್ಬರು ಖೈದಿಗಳು ಸಾವನ್ನಪ್ಪಿದ್ಧಾರೆ. ಇದರಿಂದಾಗಿ ಅಲ್ಲಿರುವ ಇತರ ಖೈದಿಗಳಿಗೆ ಆತಂಕ ಪ್ರಾರಂಭವಾಗಿದೆ. ಜೈಲು ಅಧೀಕ್ಷಕ ರಂಗನಾಥ್ ವಿರುದ್ಧ ಕೈದಿಗಳು ದುಡ್ಡಿಗಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಕೈದಿಗಳ ಸಾವಿಗೆ ಅಧಿಕಾರಿಗಳು ನೀಡುತ್ತಿರುವ ಚಿತ್ರಹಿಂಸೆಯೇ ಕಾರಣ ಎಂದೂ ಆರೋಪಿಸಲಾಗಿದೆ. ಈ ಕುರಿತು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಖೈದಿಯೋರ್ವ ಟಿವಿ9ಗೆ ಆಡಿಯೋ ಮೆಸೇಜ್ ಕಳುಹಿಸಿ ಅಲ್ಲಿನ ಸಮಸ್ಯೆಗಳನ್ನು ತೆರೆದಿಟ್ಟಿದ್ದಾರೆ.

ಖೈದಿಗಳು ಆರೋಪಿಸಿರುವ ಆಡಿಯೋ ಇಲ್ಲಿದೆ:

ಖೈದಿಗಳ ಆರೋಪಕ್ಕೆ ಬೇರೊಂದು ಆಯಾಮ ಇದೆಯೇ? ಖೈದಿಗಳು ಜೈಲು ಅಧೀಕ್ಷಕ ರಂಗನಾಥ್ ವಿರುದ್ಧ ಆರೋಪ ಮಾಡಿದ್ದಕ್ಕೆ ಮತ್ತೊಂದು ರೀತಿಯ ಚರ್ಚೆಯೂ ನಡೆದಿದೆ. ಹಲವು ಸುಧಾರಣಾ ಕ್ರಮಗಳನ್ನು ರಂಗನಾಥ್ ಜೈಲಿನಲ್ಲಿ ಜಾರಿಗೊಳಿಸಿದ್ದರು. ಇದರಿಂದಾಗಿ ಜೈಲಿನೊಳಗೆ ಕುಳಿತು ದುಷ್ಕೃತ್ಯ ಎಸಗುತ್ತಿದ್ದವರಿಗೆ ಸಮಸ್ಯೆಯಾಗಿತ್ತು. ಆದ್ದರಿಂದಲೇ ರಂಗನಾಥ್ ವಿರುದ್ಧ ಜೈಲಿನೊಳಗಿನ ಅಧಿಕಾರಿಗಳೇ ಕತ್ತಿ ಮಸೆಯುತ್ತಿದ್ದಾರೆಯೇ? ಎಂಬ ಆಯಾಮದಲ್ಲಿ ಚರ್ಚೆಯೂ ಹುಟ್ಟಿಕೊಂಡಿದೆ.

ಜೈಲು ಸುಧಾರಣೆಗೆ ಕಮಿಟಿ ವಿಶೇಷ ಗಮನ ಕೊಡಲಾಗುವುದು. ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಟಿವಿ9ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಜೈಲಿನಿಂದ ವರದಿಯನ್ನು ತರಿಸಿಕೊಳ್ಳುತ್ತೇನೆ. ಜೈಲಿನಲ್ಲಿ ದುರಾಡಳಿತದಲ್ಲಿ ಭಾಗಿಯಾದವರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಗೃಹ ಸಚಿವರ ಆರಗ ಜ್ಞಾನೇಂದ್ರ ಮಾತನಾಡಿರುವ ವಿಡಿಯೋ ಇಲ್ಲದೆ:

ಇದನ್ನೂ ಓದಿ:

ಮುಸ್ಮಿಮರನ್ನಾದ್ರು ಮಾಡ್ಲಿ, ದಲಿತರನ್ನಾದರೂ ಸಿಎಂ ಮಾಡಲಿ; ಅದು ಹೈಕಮಾಂಡ್, ಶಾಸಕರಿಗೆ ಬಿಟ್ಟ ವಿಚಾರ: ಸಿದ್ದರಾಮಯ್ಯ

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ

Published On - 11:05 am, Sat, 16 October 21

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು