
2,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 0.3% ರಿಂದ 0.5% ರಷ್ಟು ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿಗೆ ಚಿಂತಿಸಿದೆ. ರೂ. 1.5 ಕೋಟಿಗಿಂತ ಹೆಚ್ಚು ವಹಿವಾಟು ನಡೆಸುವ ದೊಡ್ಡ ವ್ಯಾಪಾರಿಗಳಿಗೆ ಮಾತ್ರ ಇದು ಅನ್ವಯಿಸಲಿದ್ದು, ಸಾಮಾನ್ಯ ಗ್ರಾಹಕರು ಮತ್ತು ಸಣ್ಣ ವರ್ತಕರಿಗೆ ಸಂಪೂರ್ಣ ವಿನಾಯಿತಿ ಸಿಗಲಿದೆ.
ಬಾಗೇಪಲ್ಲಿ ಶಾಸಕ S.N.ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡರು ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕು ಬಂದ್ಗೆ ಕರೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಅಂಬರೀಶ್ ಎಂಬ ಬೆಂಬಲಿಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ.
ಮೋಜು-ಮಸ್ತಿಗಾಗಿ ಕಟ್ಟಡದ ಸೆಂಟ್ರಿಂಗ್ ಶೀಟ್, ಬೋರ್ವೆಲ್ ಕೇಬಲ್ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಬಡಗರಹಳ್ಳಿಯ ಪುನೀತ್ ಗೌಡ ಮತ್ತು ಕುಮಾರ್ನನ್ನು ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 289 ಸೆಂಟ್ರಿಂಗ್ ಶೀಟ್, 40 ಕೆಜಿ ಕೇಬಲ್, ಬೈಕ್ ಮತ್ತು ಗುಡ್ಸ್ ವಾಹನ ಜಪ್ತಿ ಮಾಡಲಾಗಿದ್ದು, ಒಟ್ಟು 7 ಪ್ರಕರಣಗಳು ಬಯಲಾಗಿವೆ.
ಯಾದಗಿರಿಯ ಕಡೇಚೂರ್ ಕೈಗಾರಿಕಾ ಪ್ರದೇಶದ ‘ಸಿಲ್ ಲ್ಯಾಬೋರೇಟರಿ’ ಔಷಧ ಕಾರ್ಖಾನೆಯಲ್ಲಿ ಕೆಮಿಕಲ್ ಸೋರಿಕೆಯಾಗಿ, ವಿಷಗಾಳಿ ಉಸಿರಾಡಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಅಸ್ವಸ್ಥಗೊಂಡು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
Breaking News Today Live Updates in Kannada: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ‘ಪೇಮೆಂಟ್ ಸೀಟ್’ ಕುರಿತ ಆಡಿಯೋ ವೈರಲ್ ಆಗಿದೆ. ಮತ್ತೊಂದೆಡೆ, ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ನಡುವೆ, ತಮಿಳುನಾಡಿನಲ್ಲಿ ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್, ಟಿವಿಕೆ ಸರ್ಕಾರ ತಮ್ಮನ್ನು ಬಂಧಿಸಿ ಭಯೋತ್ಪಾದಕನಂತೆ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 9:15 am, Wed, 5 August 26