AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಅಲರ್ಟ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಕರ್ನಾಟಕದ ಕರಾವಳಿ-ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ, ಅಯೋಧ್ಯೆ ರಾಮಮಂದಿರದಲ್ಲಿ ವೃದ್ಧರು ಮತ್ತು ಮಕ್ಕಳಿಗೆ ‘ಸುಗಮ ದರ್ಶನ’ ವ್ಯವಸ್ಥೆ, ಹಾಗೂ ಶಸ್ತ್ರಾಸ್ತ್ರ ಕೊರತೆ ವರದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಂಡಾಮಂಡಲ. ದೇಶ-ವಿದೇಶಗಳ ಕ್ಷಣಕ್ಷಣದ ಪ್ರಮುಖ ಸುದ್ದಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Kannada News Live: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಅಲರ್ಟ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಕರಾವಳಿ-ಮಲೆನಾಡಿಗೆ ಭಾರಿ ಮಳೆ ಅಲರ್ಟ್!
ಭಾವನಾ ಹೆಗಡೆ
|

Updated on:Aug 07, 2026 | 9:52 AM

Share

LIVE NEWS & UPDATES

  • 07 Aug 2026 09:52 AM (IST)

    ‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ಖತರ್ನಾಕ್ ದಂಪತಿ ಬಂಧನ!

    ಇನ್‌ಸ್ಟಾಗ್ರಾಂ ರೀಲ್ಸ್ ಮೂಲಕ ಅಗರಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸದ ಆಸೆ ತೋರಿಸಿ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿರಣ್ ಮತ್ತು ಆರತಿ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಠೇವಣಿ ಹೆಸರಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ದಂಪತಿಯಿಂದ ಸದ್ಯ ತನಿಖೆ ಮುಂದುವರಿದಿದೆ.

  • 07 Aug 2026 08:56 AM (IST)

    ಖಾತೆಗಾಗಿ ಬೆಂಗಳೂರಿನಲ್ಲೇ ಠಿಕಾಣಿ ಹೂಡಿದ ದಾವಣಗೆರೆ ಸಚಿವರು!

    ರಾಜ್ಯದ ಬಹುತೇಕ ಸಚಿವರು ಬರ ವೀಕ್ಷಣೆಯಲ್ಲಿದ್ದರೆ, ದಾವಣಗೆರೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಕೆ.ಎಸ್. ಬಸವಂತಪ್ಪ ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದಾರೆ. ತಮಗೆ ಒಲಿಯಲಿರುವ ಖಾತೆಗಳ ಮೇಲೆಯೇ ಕಣ್ಣಿಟ್ಟಿರುವ ಈ ಇಬ್ಬರು ಸಚಿವರ ಭೇಟಿಗಾಗಿ ತವರಿನ ಅಭಿಮಾನಿಗಳು ಸದ್ಯ ಕಾದು ಕುಳಿತಿದ್ದಾರೆ.

Breaking News Today Live Updates in Kannada: ದೇಶ ಮತ್ತು ವಿದೇಶಗಳ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್‌ಗೆ ಸುಸ್ವಾಗತ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಹಾಗೂ ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ‘ಸುಗಮ ದರ್ಶನ’ ನೀತಿಯನ್ನು ಜಾರಿಗೆ ತರಲಾಗಿದೆ. ಇನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಯುದ್ಧ ಶೀಘ್ರ ಅಂತ್ಯಗೊಳ್ಳುವ ಸುಳಿವು ನೀಡಿದ್ದು, ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆ ವರದಿ ಮಾಡಿದ ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಕೆಂಡಾಮಂಡಲರಾಗಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Aug 07,2026 8:55 AM

Follow Us
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ