TV9 Kannada News Live: ಎರಡನೇ ದಿನಕ್ಕೆ ಕಾಲಿಟ್ಟ ಬಿಡದಿ ಟೌನ್ಶಿಪ್ ವಿರುದ್ಧದ ಪಾದಯಾತ್ರೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಅನಿಲ್ ಅಂಬಾನಿ ಸಂಸ್ಥೆಗಳ ವಿರುದ್ಧ ಇಡಿ ಚಾರ್ಜ್ಶೀಟ್ ಶಾಕ್. ಬೆಂಗಳೂರಿನಲ್ಲಿ 15 ಅಕ್ರಮ ಬಾಂಗ್ಲಾದೇಶಿಗರ ಬಂಧನ, ಯುಬಿ ಸಿಟಿ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ಭಾರಿ ದಾಳಿ ಹಾಗೂ ಇಂದಿನ ಮುಂಗಾರು ಮಳೆ ಮುನ್ಸೂಚನೆಯ ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಬಸ್ ಸೌಲಭ್ಯಕ್ಕೆ ಆಗ್ರಹ: ವಿದ್ಯಾರ್ಥಿಗಳಿಂದ ಹೆದ್ದಾರಿ ತಡೆ
ಸಮರ್ಪಕ ಬಸ್ ವ್ಯವಸ್ಥೆಯಿಲ್ಲದ್ದಕ್ಕೆ ಆಕ್ರೋಶಗೊಂಡ ಯಡಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಪ್ರತಿಭಟಿಸಿದರು. ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆ ಈ ರಸ್ತೆ ತಡೆ ನಡೆಸಲಾಗಿದ್ದು, ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು.
-
ಜಾರ್ಖಂಡ್: ನೇಮಕಾತಿ ಪರೀಕ್ಷೆ ಅಕ್ರಮ ವಿರೋಧಿಸಿ ವಿಧಾನಸಭೆಗೆ ಮುತ್ತಿಗೆ ಯತ್ನ; ಪೊಲೀಸರಿಂದ ತಡೆ!
ಜಾರ್ಖಂಡ್ನ JPSC-JSSC ನೇಮಕಾತಿ ಪರೀಕ್ಷೆಗಳ ಅಕ್ರಮ ಖಂಡಿಸಿ ಕಳೆದ 17 ದಿನಗಳಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳು ಇಂದು ವಿಧಾನಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ತಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
-
-
ಕೋಲಾರದಲ್ಲಿ ಡಿಕೆಶಿ ಶಕ್ತಿ ಪ್ರದರ್ಶನ: 3200 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ!
ಕೋಲಾರದ ಮಾಲೂರಿನಲ್ಲಿ ಇಂದು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ‘ಸಾಧನೆಯ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ದೆಹಲಿಯಿಂದ ನೇರವಾಗಿ ಆಗಮಿಸಲಿರುವ ಡಿಕೆಶಿ, 3200 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸೌಧ ಮಾದರಿಯ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, 60 ಸಾವಿರ ಜನ ಸೇರುವ ನಿರೀಕ್ಷೆಯಿದೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ.
-
ದೇವಿಕೆರೆ ಗ್ರಾಮದಲ್ಲಿ ಬೃಹತ್ ಕಳ್ಳತನ; 52 ಲಕ್ಷದ ಒಡವೆ, 4 ಲಕ್ಷ ನಗದು ಕಳವು!
ದಾವಣಗೆರೆಯ ದೇವಿಕೆರೆ ಗ್ರಾಮದ ಕವಿತಾ ಎಂಬುವರು ಮಗನ ಚಿಕಿತ್ಸೆಗೆ ಆಸ್ಪತ್ರೆಗೆ ಹೋಗಿದ್ದಾಗ, ಕಳ್ಳರು ಮನೆ ಬೀಗ ಮುರಿದು 410 ಗ್ರಾಂ ಚಿನ್ನ, 600 ಗ್ರಾಂ ಬೆಳ್ಳಿ ಹಾಗೂ 4 ಲಕ್ಷ ರೂ. ದೋಚಿದ್ದಾರೆ. ಬಿಳಿಚೋಡ ಪೊಲೀಸರು ಹಾಗೂ ಶ್ವಾನದಳ ಪರಿಶೀಲನೆ ನಡೆಸಿದ್ದು, ಪತ್ತೆಗಾಗಿ ಎಸ್ಪಿ ಶೇಖರ್ ವಿಶೇಷ ತಂಡ ರಚಿಸಿದ್ದಾರೆ.
-
ಬೆಳ್ಳಂಬೆಳಗ್ಗೆ ಮುನಿರಾಜು ಮನೆ ಮೇಲೆ ಪಲ್ಟಿಯಾದ ಎಂ-ಸ್ಯಾಂಡ್ ಲಾರಿ!
ಯಲಹಂಕದ ಮಾದಪ್ಪನಹಳ್ಳಿಯಲ್ಲಿ ನಿಯಂತ್ರಣ ತಪ್ಪಿದ ಎಂ-ಸ್ಯಾಂಡ್ ಲಾರಿಯೊಂದು ಮುಂಜಾನೆ 3:30ಕ್ಕೆ ಮುನಿರಾಜು ಎಂಬುವವರ ಮನೆ ಮೇಲೆ ಪಲ್ಟಿಯಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಮಾಲೀಕನ ತಲೆಗೆ ಇಟ್ಟಿಗೆ ಬಿದ್ದಿದೆ. ಯಲಹಂಕ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಲಾರಿ ತೆರವುಗೊಳಿಸುತ್ತಿದ್ದಾರೆ.
-
-
ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಬೃಹತ್ ಪಾದಯಾತ್ರೆ
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಎರಡನೇ ದಿನದ 16 ಕಿ.ಮೀ. ಪಾದಯಾತ್ರೆ ನಡೆಸಲಿದೆ. ಬಿಡದಿಯಿಂದ ನೈಸ್ ಜಂಕ್ಷನ್ ವರೆಗೆ ನಡೆಯಲಿರುವ ಈ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಚಾಲನೆ ನೀಡಲಿದ್ದು, ರೈತರ ಪರವಾಗಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಮತ್ತಷ್ಟು ಓದಿ
Breaking News Today Live Updates in Kannada: ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದಲ್ಲಿ 295 ಪೊಲೀಸರ 23 ವಿಶೇಷ ತಂಡಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ, ಸೂಕ್ತ ದಾಖಲೆಗಳಿಲ್ಲದ 15 ಬಾಂಗ್ಲಾದೇಶಿ ಪ್ರಜೆಗಳನ್ನು ಬೇಗೂರು ಹಾಗೂ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಯುಬಿ ಸಿಟಿಯ 5 ಹೋಟೆಲ್ಗಳ ಮೇಲೆ ದಾಳಿ ನಡೆಸಿದ್ದು, ಸ್ಕೈ ಹೋಟೆಲ್ನಲ್ಲಿ 51 ಕೆಜಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆ ಅಡುಗೆಮನೆ ಸೀಲ್ ಮಾಡಿದ್ದಾರೆ. ರಾಯಲ್ ಚೈನ್ನಲ್ಲೂ 55 ಕೆಜಿ ಮಾಂಸ ಜಪ್ತಿ ಮಾಡಲಾಗಿದೆ. 40,000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅನಿಲ್ ಅಂಬಾನಿ ಒಡೆತನದ ಆರ್ಕಾಮ್ ಹಾಗೂ ರಿಲಯನ್ಸ್ ಇನ್ಫ್ರಾ ವಿರುದ್ಧ ಇಡಿ ದೆಹಲಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Aug 10,2026 9:39 AM




