Breaking News In Kannada Live: ಇಂದು ದೇಶವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

TV9 Kannada News Today Live Updates: ವಾರಕ್ಕೆ 5 ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ. ಬ್ರಿಕ್ಸ್ ಶೃಂಗಸಭೆಗೆ ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್-ಮೋದಿ ಮಾತುಕತೆ. ಹಾಗೂ ಉಚಿತ ವಿದ್ಯುತ್ ನಡುವೆಯೂ 293.62 ಕೋಟಿ ಲಾಭಗಳಿಸಿದ ಬೆಸ್ಕಾಂ. ಇಂದಿನ ಪ್ರಮುಖ ಸುದ್ಧಿಗಳ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

Breaking News In Kannada Live: ಇಂದು ದೇಶವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಇಂದು ದೇಶವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ

Updated on: Sep 11, 2026 | 9:22 AM

LIVE NEWS & UPDATES

  • 11 Sep 2026 09:07 AM (IST)

    ವೆಲ್ಲೂರಿನಲ್ಲಿ ಚರ್ಚ್ ಮೇಲ್ಚಾವಣಿ ಕುಸಿತ: 3 ಕಾರ್ಮಿಕರು ಸಾವು

    ತಮಿಳುನಾಡಿನ ವೆಲ್ಲೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್‌ನ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದು ಮೂವರು ಕಾರ್ಮಿಕರು ದುರಂತವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ವೆಲ್ಲೂರು ಹಾಗೂ ನೆರೆಯ ಆಂಧ್ರಪ್ರದೇಶದ ಚಿತ್ತೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

Breaking News Today Live Updates in Kannada: ವಾರಕ್ಕೆ 5 ದಿನಗಳ ಕೆಲಸದ ಅವಧಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಇಂದು 12 ರಾಷ್ಟ್ರೀಕೃತ ಬ್ಯಾಂಕ್‌ಗಳ 350 ಶಾಖೆಗಳು ಬಂದ್ ಆಗಲಿವೆ. ಸುಮಾರು 800 ಸಿಬ್ಬಂದಿ ಕೆಲಸಕ್ಕೆ ಗೈರಾಗಿ ಬೆಂಬಲ ಸೂಚಿಸಿದ್ದು,ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.ಮತ್ತೊಂದೆಡೆ, ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನವದೆಹಲಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯವರೊಂದಿಗೆ ರಕ್ಷಣೆ, ಇಂಧನ ಹಾಗೂ ಸ್ಥಳೀಯ ಕರೆನ್ಸಿ ವಹಿವಾಟು ವಿಸ್ತರಣೆ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇನ್ನು ರಾಜ್ಯದಲ್ಲಿ, ಉಚಿತ ವಿದ್ಯುತ್ ಯೋಜನೆಯ ಸವಾಲಿನ ನಡುವೆಯೂ ಬೆಸ್ಕಾಂ 2025-26ನೇ ಸಾಲಿನಲ್ಲಿ 293.62 ಕೋಟಿ ರೂ. ವಾರ್ಷಿಕ ಲಾಭ ದಾಖಲಿಸುವ ಮೂಲಕ 7 ವರ್ಷಗಳ ಬಳಿಕ ಯಶಸ್ವಿಯಾಗಿ ಲಾಭದ ಹಾದಿಗೆ ಮರಳಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

Published On - 9:06 am, Fri, 11 September 26

Loading...
Unable to load recommendations.
Follow Us