Independence Day Celebration 2026 Live: ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Independence Day Parade 2026 Live Updates: ಭಾರತದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಮನೆಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಹಾಗೂ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ನಡುವೆ ರಾಜ್ಯದ ಕರಾವಳಿಯಲ್ಲಿ ಸಾಧಾರಣ ಮಳೆ ಹಾಗೂ ಒಳನಾಡಿನಲ್ಲಿ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಸೇರಿದಂತೆ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

Independence Day Celebration 2026 Live: ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
80ನೇ ಸ್ವಾತಂತ್ರ್ಯ ದಿನಾಚರಣೆ

Updated on: Aug 15, 2026 | 8:43 AM

LIVE NEWS & UPDATES

  • 15 Aug 2026 08:43 AM (IST)

    80ನೇ ಸ್ವಾತಂತ್ರ್ಯೋತ್ಸವ: ನಾಡಿನ ಜನತೆಗೆ ಸಿಎಂ ಡಿ.ಕೆ. ಶಿವಕುಮಾರ್ ಶುಭಾಶಯ

    80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ದೇಶದ ಐಕ್ಯತೆ ಹಾಗೂ ಸಮಾನತೆಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವುದಾಗಿ ತಿಳಿಸಿದ ಅವರು, “ರಾಜ್ಯದ ಸೇವಕನಾಗಿ ಇಂದು ಧ್ವಜಾರೋಹಣ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಶಾಂತಿ, ನೆಮ್ಮದಿ ಮತ್ತು ಸಹಬಾಳ್ವೆಯನ್ನು ಕಾಪಾಡಿಕೊಂಡು ಮುನ್ನಡೆಯೋಣ,” ಎಂದು ಕರೆ ನೀಡಿದರು.

  • 15 Aug 2026 08:41 AM (IST)

    ಈದ್ಗಾ ಮೈದಾನದಲ್ಲಿ ಸಚಿವ ಜಮೀರ್ ಧ್ವಜಾರೋಹಣ: ಸಂಸದ ಪಿ.ಸಿ. ಮೋಹನ್ ಭಾಗಿ

    ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರಾಷ್ಟ್ರಧ್ವಜ ಹಾರಿಸಿದರು. ನಿನ್ನೆಯಷ್ಟೇ ಜಿಲ್ಲಾ ಧ್ವಜಾರೋಹಣದಿಂದ ವಿನಾಯಿತಿ ಕೋರಿದ್ದನ್ನು ಬಿಜೆಪಿ ಸದನದಲ್ಲಿ ಪ್ರಶ್ನಿಸಿತ್ತು. ಇಂದು ಸ್ವಕ್ಷೇತ್ರದಲ್ಲೇ ಸಂಸದ ಪಿ.ಸಿ. ಮೋಹನ್ ಅವರೊಂದಿಗೆ ಧ್ವಜಾರೋಹಣ ನೆರವೇರಿಸಿ ಜಮೀರ್ ಸಂದೇಶ ನೀಡಿದರು.

  • 15 Aug 2026 07:42 AM (IST)

    ಕೆಂಪುಕೋಟೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಪ್ರಧಾನಿ ಮೋದಿ ಧ್ವಜಾರೋಹಣ

    ರಾಷ್ಟ್ರ ರಾಜಧಾನಿಯಲ್ಲಿ ಸ್ವಾತಂತ್ರ್ಯೋತ್ಸವದ ಸಡಗರ ಮನೆಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ್ದು, ಕೆಲವೇ ಕ್ಷಣಗಳಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು ಹಾಗೂ ತ್ರಿವಿಧ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದು, ಪೊಲೀಸ್ ಬ್ಯಾಂಡ್ ‘ವಂದೆ ಮಾತರಂ’ ಗೀತೆಯೊಂದಿಗೆ ಗೌರವ ಸಲ್ಲಿಸಿತು.

Breaking News Today Live Updates in Kannada: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮುಗಿಲು ಮುಟ್ಟಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಇತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, 30ಕ್ಕೂ ಹೆಚ್ಚು ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ಕಾರ್ಯಕ್ರಮಕ್ಕಾಗಿ ಮೈದಾನದ ಸುತ್ತಲೂ 2,000 ಪೊಲೀಸರು ಹಾಗೂ 100 ಸಿಸಿಟಿವಿಗಳ ಮೂಲಕ ಬಿಗಿ ಭದ್ರತೆ ಒದಗಿಸಲಾಗಿದ್ದು, ಮಧ್ಯಾಹ್ನ 12ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮತ್ತೊಂದೆಡೆ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಒಳನಾಡಿನ ಧಾರವಾಡ, ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

Published On - 7:42 am, Sat, 15 August 26

Loading...
Unable to load recommendations.
Follow Us