AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಬೆಂಗಳೂರಿನ ಹಲವು ಭಾಗಗಳಲ್ಲಿ ಸುರಿದ ಧಾರಾಕಾರ ಮಳೆ, ಕಸದ ಬುಟ್ಟಿಯಲ್ಲಿ ಪತ್ತೆಯಾಯ್ತು ರಾಶಿ ರಾಶಿ ಭೂ ದಾಖಲೆಗಳು

Karnataka News Today Live Updates: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಆರ್ಮಿ ಗೋಡೆ ಕುಸಿದು ಹಸುಗಳು ಮೃತಪಟ್ಟಿವೆ. ಮಂಡ್ಯದಲ್ಲಿ ಭೂ ಅಕ್ರಮದ ಆರೋಪಗಳ ನಡುವೆ ನಾಗಮಂಗಲ ಕಚೇರಿ ಕಸದ ಬುಟ್ಟಿಯಲ್ಲಿ ಭೂ ದಾಖಲೆಗಳು ಪತ್ತೆಯಾಗಿವೆ. ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದೆ. ಜೊತೆಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ವೇಣುಗೋಪಾಲ್ ಕೆಪಿಸಿಸಿ ಸಭೆಗಳಿಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇವು ಸೆಪ್ಟೆಂಬರ್ 16ರ ಪ್ರಮುಖ ರಾಜ್ಯ ಸುದ್ದಿ.

TV9 Kannada News Live: ಬೆಂಗಳೂರಿನ ಹಲವು ಭಾಗಗಳಲ್ಲಿ ಸುರಿದ ಧಾರಾಕಾರ ಮಳೆ, ಕಸದ ಬುಟ್ಟಿಯಲ್ಲಿ ಪತ್ತೆಯಾಯ್ತು ರಾಶಿ ರಾಶಿ ಭೂ ದಾಖಲೆಗಳು
ಲೈವ್​​ ಸ್ಟೊರಿ Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on:Sep 16, 2026 | 10:16 AM

Share

LIVE NEWS & UPDATES

  • 16 Sep 2026 10:15 AM (IST)

    ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಗೆ ಕ್ಷಣಗಣನೆ

    ನಾಗಮಂಗಲ ಘಟನೆಯ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಇಂದು ನಡೆಯಲಿರುವ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಪಟ್ಟಣದ ಪ್ರಮುಖ ರಸ್ತೆ, ಸರ್ಕಲ್ ಹಾಗೂ ಗಲ್ಲಿ-ಗಲ್ಲಿಗಳಲ್ಲಿ ಕೇಸರಿ ಬಾವುಟ, ಬಂಟಿಂಗ್ಸ್ ಹಾಗೂ ಬೃಹತ್ ಬ್ಯಾನರ್‌ಗಳು ರಾರಾಜಿಸುತ್ತಿದ್ದು, ಮದ್ದೂರು ನಗರ ಸಂಪೂರ್ಣವಾಗಿ ಕೇಸರಿಮಯವಾಗಿದೆ.

  • 16 Sep 2026 10:14 AM (IST)

    ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆಯೇ ನಿಂತ ನೀರು

    ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಕೆರೆಯಂತೆ ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಐಟಿ ಕಾರಿಡಾರ್‌ಗೆ ಸಂಪರ್ಕ ಕಲ್ಪಿಸುವ ಪ್ರಮುಖ ಫ್ಲೈಓವರ್ ಮೇಲೆಯೇ ನೀರು ಸರಾಗವಾಗಿ ಹರಿದು ಹೋಗದೆ ಜಲಾವೃತಗೊಂಡಿರುವುದರಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.

  • 16 Sep 2026 09:47 AM (IST)

    ಧರ್ಮದ ಗಡಿ ದಾಟಿದ ಗಣೇಶೋತ್ಸವ: ಬಿಳಿಚೋಡು ಠಾಣೆಯಲ್ಲಿ ಗಣೇಶ ಪ್ರತಿಷ್ಠಾಪಿಸಿ ವಿಸರ್ಜಿಸಿದ ಇನ್ಸ್‌ಪೆಕ್ಟರ್ ನೂರ್ ಅಹ್ಮದ್

    ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಪೊಲೀಸ್ ಠಾಣೆಯು ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಬಿಳಿಚೋಡು ಠಾಣೆಯ ಇನ್ಸ್‌ಪೆಕ್ಟರ್ ನೂರ್ ಅಹ್ಮದ್ ಅವರು ತಮ್ಮ ಠಾಣೆಯಲ್ಲಿ ಸ್ವತಃ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಸೌಹಾರ್ದತೆ ಮೆರೆದಿದ್ದಾರೆ. ಠಾಣೆಯ ಸರ್ವ ಧರ್ಮದ ಸಿಬ್ಬಂದಿ ಹಾಗೂ ಸ್ಥಳೀಯ ನಾಗರಿಕರನ್ನು ಒಂದೆಡೆ ಸೇರಿಸಿದ ಇನ್ಸ್‌ಪೆಕ್ಟರ್ ನೂರ್ ಅಹ್ಮದ್, ಭಕ್ತಿಭಾವದಿಂದ ಪೂಜೆ ಪುನಸ್ಕಾರ ನೆರವೇರಿಸಿದ್ದಾರೆ. ಬಳಿಕ ಎಲ್ಲರೊಂದಿಗೆ ಸೇರಿ ಗಣೇಶ ಮೂರ್ತಿಯನ್ನು ವಿಜೃಂಭಣೆಯಿಂದ ವಿಸರ್ಜನೆ ಮಾಡುವ ಮೂಲಕ ಸೌಹಾರ್ದತೆಯ ಬೆಳಕನ್ನು ಚೆಲ್ಲಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

  • 16 Sep 2026 09:46 AM (IST)

    ಕೆಪಿಸಿಸಿ ಕಚೇರಿಯಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಸರಣಿ ಸಭೆ

    ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

  • 16 Sep 2026 09:46 AM (IST)

    ಖುದ್ದು ಹಾಜರಿಗೆ ಕೋರಿ ಅರ್ಜಿ ಸಲ್ಲಿಸಿದ್ದ ದರ್ಶನ್‌ಗೆ ಹೈಕೋರ್ಟ್‌ನಿಂದ 3 ಆಯ್ಕೆ

    ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಹೈಕೋರ್ಟ್‌ನ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠವು ನಡೆಸಿತು. ವಿಚಾರಣಾ ನ್ಯಾಯಾಲಯದ (59ನೇ CCH ಕೋರ್ಟ್) ಮುಂದೆ ವಿಚಾರಣೆ ವೇಳೆ ಖುದ್ದು ಹಾಜರಾಗಲು ಅನುಮತಿ ನೀಡುವಂತೆ ದರ್ಶನ್ ಕೋರಿದ್ದರು. ಆದರೆ ವಿಚಾರಣಾ ನ್ಯಾಯಾಲಯ ಇದನ್ನು ನಿರಾಕರಿಸಿದ್ದರಿಂದ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • 16 Sep 2026 09:45 AM (IST)

    ನಾಗಮಂಗಲ ತಾಲೂಕು ಕಚೇರಿಯ ಕಸದ ಬುಟ್ಟಿಯಲ್ಲಿ ಪತ್ತೆಯಾಯ್ತು ರಾಶಿ ರಾಶಿ ಭೂ ದಾಖಲೆಗಳು

    ಮಂಡ್ಯದ ನಾಗಮಂಗಲ ತಾಲೂಕು ಕಚೇರಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಭೂ ಅಕ್ರಮದ ಬೆನ್ನಲ್ಲೇ, ಕಚೇರಿ ಆವರಣದ ಕಸದ ಬುಟ್ಟಿಯಲ್ಲಿ ರಾಶಿ ರಾಶಿ ಭೂ ದಾಖಲೆಗಳು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಭಾರಿ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಕೆಲ ತಿಂಗಳ ಹಿಂದೆ ನಾಗಮಂಗಲ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಸಾವಿರಾರು ಎಕರೆ ಸರ್ಕಾರಿ ಭೂಮಿ ಹಾಗೂ ಬಗರ್ ಹುಕುಂ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವುದು ಬಯಲಾಗಿತ್ತು. ಈ ಅಕ್ರಮದ ತನಿಖೆಗೆ ಇ.ಡಿ ಕೂಡ ಎಂಟ್ರಿ ಕೊಟ್ಟಿತ್ತು. ಇದೀಗ ಕಚೇರಿಯ ಆಭಿಲೇಖ ವಿಭಾಗದಲ್ಲಿ ಭದ್ರವಾಗಿ ಇರಬೇಕಿದ್ದ ಮೂಲ ದಾಖಲೆಗಳು ಕಸದ ಬುಟ್ಟಿ ಸೇರಿರುವುದು ಪತ್ತೆಯಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಅಕ್ರಮವನ್ನು ಮುಚ್ಚಿಹಾಕಲು ಅಥವಾ ಭೂ ದಂಧೆಕೋರರೊಂದಿಗೆ ಸೇರಿ ದಾಖಲೆಗಳನ್ನು ನಾಶಪಡಿಸಲು ಈ ರೀತಿ ಮಾಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

  • 16 Sep 2026 09:44 AM (IST)

    ಬೆಂಗಳೂರು: ಧಾರಾಕಾರ ಮಳೆಗೆ ಆರ್ಮಿ ಕಾಂಪೌಂಡ್ ಗೋಡೆ ಕುಸಿತ

    ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಶಾಂತಿನಗರ ಕ್ಷೇತ್ರದ ದೊಮ್ಮಲೂರಿನಲ್ಲಿ ದೊಡ್ಡ ದುರ್ಘಟನೆಯೊಂದು ಸಂಭವಿಸಿದೆ. ಮಳೆಯ ರಭಸಕ್ಕೆ ಸೇನೆಯ (ಆರ್ಮಿ) ಕಾಂಪೌಂಡ್ ಗೋಡೆ ಕುಸಿದು ಬಿದ್ದು, ನಾಲ್ಕು ಹಸುಗಳು ಹಾಗೂ ಒಂದು ಕರು ಮೃತಪಟ್ಟಿವೆ. ಸ್ಥಳೀಯ ನಿವಾಸಿ ಮುನಿರಾಜು ಎಂಬುವರ ಮನೆ ಹಿಂಭಾಗದಲ್ಲಿದ್ದ ಗೋಡೆ ಇದಾಗಿದ್ದು, ಮೇಲ್ಭಾಗದಿಂದ ಹರಿದುಬಂದ ಮಳೆ ನೀರಿನ ಒತ್ತಡಕ್ಕೆ ಕಾಂಪೌಂಡ್ ಕುಸಿದಿದೆ. ಈ ವೇಳೆ ಮುನಿರಾಜು ಅವರ ಕಾಲುಗಳಿಗೂ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿದ್ದ ಮಣ್ಣನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ, ಮೃತಪಟ್ಟ ಹಸು ಹಾಗೂ ಕರುಗಳ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Breaking News Today Live in Kannada: ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಶಾಂತಿನಗರ ಕ್ಷೇತ್ರದ ದೊಮ್ಮಲೂರಿನಲ್ಲಿ ದೊಡ್ಡ ದುರ್ಘಟನೆಯೊಂದು ಸಂಭವಿಸಿದೆ. ಮಳೆಯ ರಭಸಕ್ಕೆ ಸೇನೆಯ (ಆರ್ಮಿ) ಕಾಂಪೌಂಡ್ ಗೋಡೆ ಕುಸಿದು ಬಿದ್ದು, ನಾಲ್ಕು ಹಸುಗಳು ಹಾಗೂ ಒಂದು ಕರು ಮೃತಪಟ್ಟಿವೆ. ಇನ್ನು ಮಂಡ್ಯದ ನಾಗಮಂಗಲ ತಾಲೂಕು ಕಚೇರಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಭೂ ಅಕ್ರಮದ ಬೆನ್ನಲ್ಲೇ, ಕಚೇರಿ ಆವರಣದ ಕಸದ ಬುಟ್ಟಿಯಲ್ಲಿ ರಾಶಿ ರಾಶಿ ಭೂ ದಾಖಲೆಗಳು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಭಾರಿ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಹೈಕೋರ್ಟ್‌ನ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠವು ನಡೆಸಿತು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

Published On - Sep 16,2026 9:43 AM

Follow Us
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ
ರವಿ ಸಿಂಹ ರಾಶಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಸಿಂಹ ರಾಶಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ
ಚೆನ್ನೈನಲ್ಲಿ 12,000 ಶಂಖಗಳಿಂದ ಸಿದ್ಧವಾಯ್ತು ಗಣೇಶನ ಮೂರ್ತಿ!
ಚೆನ್ನೈನಲ್ಲಿ 12,000 ಶಂಖಗಳಿಂದ ಸಿದ್ಧವಾಯ್ತು ಗಣೇಶನ ಮೂರ್ತಿ!
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು