TV9 Kannada News Live: ಕೆಂಪೇಗೌಡ ಏರ್ಪೋರ್ಟ್ನಲ್ಲಿ ತಡರಾತ್ರಿ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಆತಂಕ!ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಕರ್ನಾಟಕದಾದ್ಯಂತ ಬರಗಾಲದ ತಲ್ಲಣ ಸೃಷ್ಟಿಯಾಗಿದ್ದು, ನೀರಿಗಾಗಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಚಿತ್ರದುರ್ಗ, ಯಾದಗಿರಿಯಲ್ಲೂ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿದೆ. ಮತ್ತೊಂದೆಡೆ, ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾಕಿ ಉಗ್ರರು ಬಹುಮಾನ ಘೋಷಿಸಿದ್ದಾರೆ. ಇಂದಿನ ರಾಜ್ಯದ ಹವಾಮಾನ ಮುನ್ಸೂಚನೆ ಹಾಗೂ ದೇಶ-ವಿದೇಶದ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಯುಎಸ್ ಚುನಾವಣೆ: ವಿದೇಶಿ ಹಸ್ತಕ್ಷೇಪದ ಬಗ್ಗೆ ಟ್ರಂಪ್ ಆರೋಪ
ಅಮೆರಿಕದ 2020ರ ಚುನಾವಣೆಯಲ್ಲಿ ಚೀನಾ, ರಷ್ಯಾ ಮತ್ತು ಇರಾನ್ ಹಸ್ತಕ್ಷೇಪ ಮಾಡಿವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಚೀನಾವು 220 ಮಿಲಿಯನ್ ಮತದಾರರ ದತ್ತಾಂಶ ಕಳವು ಮಾಡಿದ್ದು, ಇದಕ್ಕೆ ಎಫ್ಬಿಐ ಸೇರಿದಂತೆ ಸ್ಥಳೀಯ ಗುಪ್ತಚರ ಸಂಸ್ಥೆಗಳು ಸಹಕರಿಸಿವೆ ಎಂದು ವೈಟ್ಹೌಸ್ನಲ್ಲಿ ಟ್ರಂಪ್ ಹೇಳಿಕೆ ನೀಡಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.
-
Uttara Kannada Rain update: ಅಂಕೋಲಾ ತಾಲೂಕಿನ ಶಾಲೆಗಳಿಗೆ ಇಂದು ರಜೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜುಲೈ 17) ರಜೆ ಘೋಷಿಸಿ ಅಂಕೋಲಾ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಯಿಂದಾಗಿ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.
-
-
ನೀಟ್ ಯುಜಿ 2026 ಮರುಪರೀಕ್ಷೆ ಫಲಿತಾಂಶ ಪ್ರಕಟ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ನೀಟ್ ಯುಜಿ ಮರುಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, 20 ಲಕ್ಷ ಅಭ್ಯರ್ಥಿಗಳಲ್ಲಿ 11.21 ಲಕ್ಷ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಆರ್ಯನ್ ಗುಪ್ತಾ ಮತ್ತು ಪಂಶುಲ್ ಬನ್ಸಾಲ್ ಜಂಟಿ ಪ್ರಥಮ ಸ್ಥಾನ ಗಳಿಸಿದ್ದು, ಶೇ.58ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಿದ್ದು, ಕೌನ್ಸೆಲಿಂಗ್ ಶೀಘ್ರದಲ್ಲೇ ಆರಂಭವಾಗಲಿದೆ. ಮತ್ತಷ್ಟು ಓದಿ
-
ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಡಗರ
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ ಆರಂಭವಾಗಿದೆ. ಭಕ್ತರಿಗಾಗಿ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಖಾಸಗಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಒಂದು ಲಕ್ಷ ಲಾಡು ಪ್ರಸಾದ ಸಿದ್ಧಪಡಿಸಲಾಗಿದ್ದು, ಸುಗಮ ದರ್ಶನಕ್ಕಾಗಿ ಜಿಲ್ಲಾಡಳಿತದಿಂದ ಸೂಕ್ತ ಭದ್ರತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ವೀಡಿಯೋ ನೋಡಿ
Breaking News Today Live Updates in Kannada: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಿಗಾಗಿ ರೈತರು ಹಾಗೂ ಕರಾವೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ಕೇವಲ ಕುಡಿಯುವ ನೀರು ಬಿಡುಗಡೆ ಮಾಡಿದೆ. ಇತ್ತ ಯಾದಗಿರಿಯಲ್ಲಿ ಒಣಗುತ್ತಿರುವ ಬೆಳೆಗಳು, ಚಿತ್ರದುರ್ಗದಲ್ಲಿ ಬತ್ತಿದ ಬೋರ್ವೆಲ್ಗಳು ಹಾಗೂ ವಿಜಯನಗರದ ಮಳೆ ಅಭಾವ ರೈತರನ್ನು ಕಂಗಾಲುಗೊಳಿಸಿದೆ. ಬರ ಪರಿಹಾರಕ್ಕಾಗಿ ಡಿಸಿಎಂ ಪರಮೇಶ್ವರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಇನ್ನು ಕೊಪ್ಪಳದಲ್ಲಿ ಮಳೆಗಾಗಿ ಹರಕೆ ಹೊತ್ತ ಬೆನ್ನಲ್ಲೇ ಮಳೆರಾಯ ತಂಪೆರೆದಿದ್ದಾನೆ. ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ಜಾಗತಿಕವಾಗಿ, ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾಕಿ ಉಗ್ರ ಸಂಘಟನೆ 84 ಕೋಟಿ ರೂ. ಬಹುಮಾನ ಘೋಷಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jul 17,2026 8:18 AM




