TV9 Kannada News Live: ನಾಲ್ಕನೇ ದಿನದ ಮಳೆಗಾಲದ ಅಧಿವೇಶನ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಹನೂರು ಎನ್ಕೌಂಟರ್ ವಿಚಾರದಲ್ಲಿ ತಮಿಳುನಾಡು ನಾಯಕರ ಹೇಳಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತ ಹನೂರು ಶೂಟೌಟ್ ಸಾಕ್ಷ್ಯಗಳ ಬಗ್ಗೆ ಅನುಮಾನ ವ್ಯಕ್ತವಾಗಿದ್ದು FSL ತನಿಖೆ ಮುಂದುವರಿದಿದೆ. ಮತ್ತೊಂದೆಡೆ KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್ ನಡೆಸಿದೆ. ರಾಜ್ಯದ ಇಂದಿನ ಪ್ರಮುಖ ಅಪ್ಡೇಟ್ಸ್ ಓದಿ.

LIVE NEWS & UPDATES
-
ಆಟವಾಡುತ್ತಿದ್ದಾಗ ಪಿಲ್ಲರ್ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು!
ಶಾಲೆ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಧನುಷ್ (10) ಎಂಬುವವನು ದುರ್ಮರಣಕ್ಕೀಡಾದ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೃತ ಧನುಷ್ ಮತ್ತಿಘಟ್ಟದ ಆನಂದಮೂರ್ತಿ ಅವರ ಪುತ್ರ. ಇಂದು ಬೆಳಿಗ್ಗೆ ಶಾಲೆ ಆರಂಭಕ್ಕೂ ಮುನ್ನ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
KPSC ಅಕ್ರಮ ಪ್ರಕರಣ: ಇಡಿ ವಶಕ್ಕೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್!
KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಹೊಯ್ಸಳ ಡ್ರೀಮ್ಸ್ ಅಪಾರ್ಟ್ಮೆಂಟ್ನಲ್ಲಿರುವ (ಮಗಳು ಸುಮಾ ಎಸ್ ಸಾಹುಕಾರ್ ಫ್ಲ್ಯಾಟ್) ಸುದೀರ್ಘ ದಾಳಿ ನಡೆಸಿ, ಅವರ ಮೊಬೈಲ್ಗಳನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
-
-
ವಿಧಾನಪರಿಷತ್ಗೆ ನೂತನ ಉಪಸಭಾಪತಿ: ಉಮಾಶ್ರೀ ಸರ್ವಾನುಮತದಿಂದ ಆಯ್ಕೆ!
ಕರ್ನಾಟಕ ವಿಧಾನಪರಿಷತ್ನ ನೂತನ ಉಪಸಭಾಪತಿಯಾಗಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಸಭಾಪತಿ ಹುದ್ದೆಗೆ ಪರಿಷತ್ ಸದಸ್ಯರು ಉಮಾಶ್ರೀ ಅವರ ಹೆಸರನ್ನು ಸೂಚಿಸಿದ್ದು, ಯಾವುದೇ ವಿರೋಧವಿಲ್ಲದೆ ಸರ್ವಸಮ್ಮತಿಯಿಂದ ಈ ಆಯ್ಕೆ ನೆರವೇರಿದೆ.
Breaking News Today Live Updates in Kannada: ಹನೂರು ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ನಾಯಕರ ಮಧ್ಯಪ್ರವೇಶಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. “ನಮ್ಮದು ಫೆಡರಲ್ ಒಕ್ಕೂಟ, ಬೇರೆ ರಾಜ್ಯಗಳು ನಮ್ಮ ಆಡಳಿತದಲ್ಲಿ ತಲೆಹಾಕಬಾರದು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಬೇಕೆಂದು ನಮಗೆ ಗೊತ್ತಿದೆ” ಎಂದು ಅವರು ಹೇಳಿದ್ದಾರೆ. ಮತ್ತೊಂದೆಡೆ, ಹನೂರು ಘಟನಾ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳ ಫೋಟೋದಲ್ಲಿ ಸ್ಟಿಕ್ಕರ್ ತೆಗೆಯದ ಹೊಸ ಚಪ್ಪಲಿ ಕಂಡುಬಂದಿದ್ದು, ನಕಲಿ ಸಾಕ್ಷಿ ಸೃಷ್ಟಿಯ ದೊಡ್ಡ ಅನುಮಾನ ಮೂಡಿಸಿದೆ. ಪ್ರಸ್ತುತ FSL ಮತ್ತು ಬ್ಯಾಲೆಸ್ಟಿಕ್ ತಜ್ಞರು ಘಟನಾ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.ಅತ್ತ ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಲಂಚ ಹಾಗೂ ಅಕ್ರಮ ಆರೋಪದಡಿ, ಅಮಾನತುಗೊಂಡ ಸದಸ್ಯ ಶಿವಶಂಕರಪ್ಪ ಸಾಹುಕಾರ್ ಮನೆ, KPSC ಕಚೇರಿ ಸೇರಿದಂತೆ ರಾಜ್ಯದ 21 ಕಡೆಗಳಲ್ಲಿ ಇಡಿ (ED) ಮೆಗಾ ರೇಡ್ ನಡೆಸಿ ತನಿಖೆ ಚುರುಕುಗೊಳಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Aug 18,2026 11:19 AM




