AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಗುಡ್​ ನ್ಯೂಸ್: ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ

Karnataka News Today Live Updates: ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ, ಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಹಾಗೂ ಶಿವಮೊಗ್ಗ- ತಾಳಗುಪ್ಪ ರೈಲು ಸಂಚಾರದಲ್ಲಿ ವ್ಯತ್ಯಯ; ಆಗಸ್ಟ್ 19 ರ ರಾಜ್ಯದ ಪ್ರಮುಖ ಮುಖ್ಯಾಂಶಗಳ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

TV9 Kannada News Live: ಗುಡ್​ ನ್ಯೂಸ್: ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ
ವಿಧಾನಸೌಧImage Credit source: Getty Image
ಭಾವನಾ ಹೆಗಡೆ
| Edited By: |

Updated on:Aug 19, 2026 | 10:29 PM

Share

Breaking News Today Live Updates in Kannada: ಮಾಜಿ ಶಿಕ್ಷಣ ಸಚಿವ, ಬಿಜೆಪಿ ಹಿರಿಯ ನಾಯಕ ಬಿ.ಸಿ. ನಾಗೇಶ್ (72) ಅನಾರೋಗ್ಯದಿಂದ ನಿಧನರಾಗಿದ್ದು, ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಲ್ಲೇಶ್ವರಂ ಕಚೇರಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ಕೆಲಸಕ್ಕಾಗಿ ಇಂದು ದೆಹಲಿ ಹಾಗೂ ನಾಳೆ ಚೆನ್ನೈಗೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ, ಮಲ್ಲಸಂದ್ರ-ಗುಬ್ಬಿ ನಡುವಿನ ಇಂಜಿನಿಯರಿಂಗ್ ಕಾಮಗಾರಿಯಿಂದಾಗಿ ಆಗಸ್ಟ್ 19, 22, 23 ಮತ್ತು 26 ರಂದು ಶಿವಮೊಗ್ಗ, ತಾಳಗುಪ್ಪ ಹಾಗೂ ಚಿಕ್ಕಮಗಳೂರು ಮಾರ್ಗದ ಹಲವು ರೈಲು ಸಂಚಾರ ರದ್ದು ಮತ್ತು ಮಾರ್ಗ ಬದಲಾವಣೆಯಾಗಿದ್ದು, ಪ್ರಯಾಣಿಕರು ವೇಳಾಪಟ್ಟಿ ಪರಿಶೀಲಿಸಲು ರೈಲ್ವೆ ಇಲಾಖೆ ಕೋರಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

LIVE NEWS & UPDATES

The liveblog has ended.
  • 19 Aug 2026 09:30 PM (IST)

    ಚಾಮರಾಜನಗರ ಶೂಟೌಟ್ ಪ್ರಕರಣಕ್ಕೆ ಮಾನವ ಹಕ್ಕು ಆಯೋಗ ಎಂಟ್ರಿ

    ಚಾಮರಾಜನಗರ ಶೂಟೌಟ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮ್ಯಾಜಿಸ್ಟ್ರೀಟ್ ತನಿಖೆಗೆ ನೀಡಲಾಗಿದೆ. ಇದರ ಮಧ್ಯೆ ಇದೀಗ ಈ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದ್ದು, ಮೂವರ ಸಾವಿನ ಕುರಿತು ಸತ್ಯಾ ಸತ್ಯತೆ ತಿಳಿಯಲು ಮಾನವ ಹಕ್ಕು ಆಯೋಗದ ಡಿವೈ ಎಸ್ಪಿ ಅಶ್ವತ್ಥನಾರಾಯಣ ಮತ್ತು ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.

  • 19 Aug 2026 08:50 PM (IST)

    ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅಂತ್ಯ

    ದೆಹಲಿಯ ಇಂದಿರಾ ಭವನದಲ್ಲಿ ನಡೆದ ಸಿಡಬ್ಲ್ಯುಸಿ ಮೀಟಿಂಗ್‌ ಅಂತ್ಯಗೊಂಡಿದ್ದು, ಈ ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಕರ್ನಾಟಕ ಭವನದತ್ತ ಹೊರಟರು.

  • 19 Aug 2026 07:49 PM (IST)

    ಮುಡಾ ಬದಲಿ ನಿವೇಶನ ಹಂಚಿಕೆ ಮಾಡಿರುವ ಎಲ್ಲಾ ಆದೇಶಗಳು ರದ್ದು

    ರಾಜ್ಯ ಸರ್ಕಾರದ 2023ರ ಮಾರ್ಚ್‌ 14ರ ನಿರ್ದೇಶನ ಉಲ್ಲಂಘಿಸಿ ಹಂಚಿಕೆ ಮಾಡಿರುವ ಮುಡಾ ನಿವೇಶನಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಮುಡಾ ಬದಲಿ ನಿವೇಶನ ಹಂಚಿಕೆ ಮಾಡಿರುವ ಎಲ್ಲಾ ಆದೇಶಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ನೋಂದಣಿಯಾಗಿರುವ ಬದಲಿ ನಿವೇಶನಗಳ ಖಾತೆ ಮಾಡುವುದನ್ನುತಡೆಹಿಡಿಯಲು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಅಲ್ಲದೇ ಸರ್ಕಾರದ ಮಾರ್ಗಸೂಚಿ ಬರುವವರೆಗೆ ಕ್ರಯಪತ್ರ ನೀಡದಂತೆ ಸೂಚನೆ ನೀಡಲಾಗಿದೆ. ಇನ್ನು ಈಗಾಗಲೇ ಖಾತೆ ಆಗಿದ್ದರೆ ನಿಯಮಾನುಸಾರ ರದ್ದುಪಡಿಸುವಂತೆ ಸೂಚಿಸಲಾಗಿದೆ.

  • 19 Aug 2026 07:32 PM (IST)

    ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ

    ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗಿದೆ. ವಾರ್ಷಿಕ ಆದಾಯ ಮಿತಿ 32,000 ದಿಂದ ₹1,20,000 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಇನ್ನು 1,20,000ರವರೆಗಿನ ಆದಾಯ ಹೊಂದಿರುವವರಿಗೆ ಪಿಂಚಣಿ ಮುಂದುವರಿಕೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಮತ್ತಷ್ಟು ಓದಿ

  • 19 Aug 2026 05:50 PM (IST)

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಳ್ಳಾಳಿಗಳ ಹಾವಳಿ

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಳ್ಳಾಳಿಗಳ ಹಾವಳಿ ಹೆಚ್ಚಾಗಿದೆ. ಆಸ್ಪತ್ರೆಯ ಸಿಬ್ಬಂದಿಯಿಂದಲೇ ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಹೊರ ಕಳಿಸುವ ಪ್ರಯತ್ನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.ಹೌದು… ಅಪಘಾತದಲ್ಲಿ ಗಾಯಗೊಂಡ ಕೋಲಾರ ಜಿಲ್ಲೆ ಕೆಜಿಎಫ್ ನಿವಾಸಿ ಪ್ರಶಾಂತ್ ಎಂಬುವರು ಚಿಕಿತ್ಸೆಗೆ ವಿಕ್ಟೋರಿಯಾ ಕರೆದೊಯ್ದದಾಗ ಹಾಸಿಗೆ ಇಲ್ಲ ಎಂದು ಕಳಿಸುವ ಯತ್ನ ನಡೆದಿದೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ಶಿವಕುಮಾರ್ ಎಂಬುವರಿಂದ ದಳ್ಳಾಳಿ ಕೆಲಸ ಮಾಡಿದ್ದು, ರೋಗಿ ಸಂಬಂಧಿ ಜೊತೆಗೆ ಮಾತಾನಡಿರುವ ಆಡಿಯೋ ಲಭ್ಯ ವೈರಲ್ ಆಗಿದೆ.

  • 19 Aug 2026 04:55 PM (IST)

    ಕಾವೇರಿ ನೀರು ಬಿಡುಗಡೆಗೆ ಕರ್ನಾಟಕದಿಂದ ಮರುಪರಿಶೀಲನೆಗೆ ಮನವಿ

    CWMA 12 ಸಾವಿರ ಕ್ಯೂಸೆಕ್ ಆದೇಶಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. 12 ಸಾವಿರ ಕ್ಯೂಸೆಕ್ ಬದಲು 6 ಸಾವಿರ ಕ್ಯೂಸೆಕ್‌ಗೆ ಇಳಿಸಲು ಮನವಿ ಮಾಡಿದೆ. ನಿರೀಕ್ಷೆಯಂತೆ ಮುಂಗಾರು ಮಳೆ ಮುಂದುವರಿಯದೆ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದೆ. ಸೂಪರ್ ಎಲ್ ನಿನೊ ಪರಿಣಾಮದಿಂದ ಮುಂಗಾರು ದುರ್ಬಲಗೊಂಡಿದೆ. ಕರ್ನಾಟಕದ ಕಾವೇರಿ ಜಲಾಶಯಗಳಿಗೆ ಒಳಹರಿವಿನಲ್ಲಿ ಶೇ.47.68ರಷ್ಟು ಕೊರತೆ ಇದೆ. ಆಗಸ್ಟ್ 18ಕ್ಕೆ ಜಲಾಶಯಗಳಲ್ಲಿ ಕೇವಲ 77.907 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳಹರಿವು 25,964 ಕ್ಯೂಸೆಕ್‌ನಿಂದ 13,141 ಕ್ಯೂಸೆಕ್‌ಗೆ ಇಳಿದಿದೆ. ಹೀಗಾಗಿ ಆದೇಶ ಮರುಪರಿಶೀಲಿಸುವಂತೆ ಮನವಿ ಮಾಡಿದೆ.

  • 19 Aug 2026 04:05 PM (IST)

    ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್‌ CWC ಸಭೆ ಆರಂಭ

    ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್‌ CWC ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಕಾಂಗ್ರೆಸ್‌ನ ಘಟಾನುಘಟಿ ನಾಯಕರ ಭಾಗಿಯಾಗಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, K.C. ವೇಣುಗೋಪಾಲ್, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಈ ಸಭೆಯಲ್ಲಿ ದೇಶದ ಪ್ರಮುಖ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

  • 19 Aug 2026 03:50 PM (IST)

    ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ

    ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯ ಪ್ರತಿಭಟನೆ ಮುಂದುವರಿದಿದೆ. ಸದನದಲ್ಲಿ ಪ್ಲಕಾರ್ಡ್ ಪ್ರದರ್ಶಿಸಿ ಧಿಕ್ಕಾರ ಕೂಗುತ್ತಿದ್ದಾರೆ. ಇದರ ಮಧ್ಯೆಯೂ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆದಿದೆ. ಇನ್ನು ಬಿಜೆಪಿಯ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ಆಡಳಿತರೂಢ ಸದಸ್ಯರು ಸಹ ರಾಮಮಂದಿರ ಹಣ ಎಲ್ಲೋಯ್ತು ಎಂದು ಘೋಷಣೆ ಕೂಗಿದರು. ಈ ಗದ್ದಲದ ಮಧ್ಯೆಯೇ ಪ್ರಶ್ನೋತ್ತರ ಕಲಾಪ ಅಂತ್ಯವಾಯ್ತು. ತೀವ್ರ ಗದ್ದಲ ಹಿನ್ನೆಲೆ 15 ನಿಮಿಷ ವಿಧಾನಸಭೆ ಕಲಾಪ ಮುಂದೂಡಿಕೆ ಮಾಡಲಾಗಿದೆ.

  • 19 Aug 2026 02:32 PM (IST)

    ಪ್ಲೇಕಾರ್ಡ್‌ಗೆ ನಿರ್ಬಂಧ: ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಬಿಜೆಪಿ ಪ್ರತಿಭಟನೆ

    ವಿಧಾನಸಭೆಯೊಳಗೆ ಪ್ಲೇಕಾರ್ಡ್ ಹಿಡಿದು ಧರಣಿ ನಡೆಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಹಾದಿ ಬದಲಿಸಿದೆ. ಮಧ್ಯಾಹ್ನ 2.45ಕ್ಕೆ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಎದುರು ಪ್ಲೇಕಾರ್ಡ್ ಹಿಡಿದು ಧರಣಿ ನಡೆಸಲು ವಿಪಕ್ಷ ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ.

  • 19 Aug 2026 02:30 PM (IST)

    34ನೇ ರಾಷ್ಟ್ರೀಯ ಖೋ ಖೋ ಕ್ರೀಡಾಕೂಟಕ್ಕೆ ಚಾಲನೆ

    ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯ ನವೋದಯ ವಿದ್ಯಾಲಯ ಆವರಣದಲ್ಲಿ 34ನೇ ರಾಷ್ಟ್ರೀಯ ಖೋ ಖೋ ಕ್ರೀಡಾಕೂಟಕ್ಕೆ ಹಾಸನ ಸಂಸದ ಶ್ರೇಯಸ್ ಪಟೇಲ್ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ದೇಶದ 30 ರಾಜ್ಯಗಳ 800 ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

  • 19 Aug 2026 02:26 PM (IST)

    ರಾಮನಗರ ನಕಲಿ ಔಷಧಿ ಪ್ರಕರಣ: ಇಂದೇ ಎಸ್‌ಐಟಿ (SIT) ರಚನೆ ಸಾಧ್ಯತೆ

    ರಾಮನಗರದಲ್ಲಿ ನಕಲಿ ಔಷಧಿ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆಗೆ ಎಸ್‌ಐಟಿ ರಚಿಸಲು ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ಗೃಹ ಸಚಿವ ಪರಮೇಶ್ವರ್ ಖರ್ಗೆ ಚರ್ಚೆ ನಡೆಸಿದ್ದು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡ ರಚನೆಯಾಗಲಿದೆ. ನಕಲಿ ಇಂಜೆಕ್ಷನ್‌ಗಳನ್ನು ನೇರವಾಗಿ ಐಸಿಯು ಆಸ್ಪತ್ರೆಗಳಿಗೆ ಪೂರೈಸುತ್ತಿದ್ದ ಜಾಲದ ತನಿಖೆಗೆ ಇಂದೇ ಆದೇಶ ಹೊರಬೀಳುವ ಸಾಧ್ಯತೆಯಿದೆ.

  • 19 Aug 2026 01:11 PM (IST)

    ವಿಧಾನಪರಿಷತ್‌ನಲ್ಲಿ ಗದ್ದಲ: ಸಭಾಪತಿಯವರ ಸೂಚನೆಗೆ ವಿಪಕ್ಷ ಆಕ್ಷೇಪ

    ವಿಧಾನಪರಿಷತ್‌ನಲ್ಲಿ ವಿಪಕ್ಷಗಳ ಘೋಷಣೆಗಳನ್ನು ಕಡತಕ್ಕೆ ಸೇರಿಸಬಾರದು ಹಾಗೂ ಮಾಧ್ಯಮಗಳು ಕವರ್ ಮಾಡಬಾರದು ಎಂಬ ಸಭಾಪತಿ ಸಲೀಂ ಅವರ ಸೂಚನೆಗೆ ವಿಪಕ್ಷ ಸಚೇತಕ ರವಿಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಮಾಧ್ಯಮಗಳಿಗೂ ನೀವೇ ನಿರ್ದೇಶನ ನೀಡುವುದು ಸರ್ವಾಧಿಕಾರ” ಎಂದು ಕಿಡಿಕಾರಿದ ಅವರು, ಆ ಪದ ಹಿಂಪಡೆಯಲು ಆಗ್ರಹಿಸಿದರು. ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ಮುಂದುವರಿಯಿತು.

  • 19 Aug 2026 12:59 PM (IST)

    ಇಬ್ಬರು ಮಕ್ಕಳನ್ನು ಕಾಲುವೆಗೆ ತಳ್ಳಿದ ತಂದೆ

    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿ ಕೌಟುಂಬಿಕ ಕಲಹದಿಂದಾಗಿ ತಂದೆ ಶಾಂತಪ್ಪ ತನ್ನಿಬ್ಬರು ಮಕ್ಕಳನ್ನು ಕಾಲುವೆಗೆ ತಳ್ಳಿದ್ದಾನೆ. ಪತ್ನಿ ರೇಣುಕಾ ಜೊತೆ ಜಗಳವಾಡಿ ಮೂವರು ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ದು, 9 ವರ್ಷದ ಸಾನ್ವಿ ಮತ್ತು 2 ವರ್ಷದ ಸೃಜನ್‌ನನ್ನು ಕಾಲುವೆಗೆ ಎಸೆದಿದ್ದಾನೆ. ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಕ್ಕಳಿಗಾಗಿ ಶೋಧ ನಡೆಯುತ್ತಿದೆ.

  • 19 Aug 2026 12:59 PM (IST)

    ಕ್ಯಾನ್ಸರ್ ಔಷಧ ಖರೀದಿಸುವ ಮುನ್ನ ಎಚ್ಚರ

    ನಕಲಿ ಔಷಧ ದಂಧೆ ಬೆನ್ನಲ್ಲೇ ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸಂಜೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಕ್ಯಾನ್ಸರ್ ಔಷಧಗಳ ಅಸಲಿಯತ್ತು ತಿಳಿಯಲು ಕ್ಯೂಆರ್ (QR) ಕೋಡ್ ಸ್ಕ್ಯಾನ್ ಮಾಡಲು ಮತ್ತು ಬ್ಯಾಚ್ ನಂಬರ್ ಪರಿಶೀಲಿಸಲು ಸಲಹೆ ನೀಡಲಾಗಿದೆ. ಸಾರ್ವಜನಿಕರು ಜಾಗರೂಕರಾಗಿ ನಕಲಿ ಔಷಧಗಳಿಂದ ರಕ್ಷಣೆ ಪಡೆಯುವಂತೆ ಇಲಾಖೆ ಮನವಿ ಮಾಡಿದೆ.

  • 19 Aug 2026 12:59 PM (IST)

    ದೊಡ್ಡೇರಿ ನಕಲಿ ಡ್ರಗ್ಸ್ ಪ್ರಕರಣ: ತನಿಖೆ ಚುರುಕು, ಆರೋಪಿಯ ಬಂಧನ

    ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ನಕಲಿ ಡ್ರಗ್ಸ್ ಜಾಲದ ಕುರಿತು ಎಸ್.ಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಬೀಟ್ ಸಿಬ್ಬಂದಿ ಸುಳಿವು ಆಧರಿಸಿ ದಾಳಿ ನಡೆಸಿ, ಐಸಿಯು ಹೈ-ಎಂಡ್ ಔಷಧಗಳನ್ನು ನಕಲಿ ಮಾಡುತ್ತಿದ್ದುದನ್ನು ಪತ್ತೆಹಚ್ಚಲಾಗಿದೆ. ಒಬ್ಬನನ್ನು ಬಂಧಿಸಲಾಗಿದ್ದು, ಇಬ್ಬರ ವಿಚಾರಣೆ ನಡೆಯುತ್ತಿದೆ. ವರ್ಷಕ್ಕೆ ರೂ. 10 ಲಕ್ಷಕ್ಕೆ ಲೀಸ್‌ಗೆ ಪಡೆದ ಫಾರ್ಮ್‌ಹೌಸ್‌ನಲ್ಲಿ ಈ ಅಕ್ರಮ ನಡೆದಿದ್ದು, ಪ್ರಮುಖ ಆರೋಪಿಗಾಗಿ ಜಾಲ ಬೀಸಲಾಗಿದೆ.

  • 19 Aug 2026 12:58 PM (IST)

    RSS ಗಣೇಶೋತ್ಸವ ನಿಯಂತ್ರಣ ಯತ್ನಕ್ಕೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಆಕ್ರೋಶ

    ಕಾಂಗ್ರೆಸ್ ನಾಯಕರ ‘ವಂದೇ ಮಾತರಂ’ ವಿರೋಧ ಮತ್ತು ಆರ್.ಎಸ್.ಎಸ್ ಕುರಿತ ಹೇಳಿಕೆಗಳಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಕಿಡಿಕಾರಿದ್ದಾರೆ. RSS ರಾಷ್ಟ್ರಭಕ್ತಿ ಪಸರಿಸುವ ಸಂಸ್ಥೆಯಾಗಿದ್ದು, ಮುಂಬರುವ ಗಣೇಶೋತ್ಸವ ಹಾಗೂ ಶಾರದೋತ್ಸವಗಳನ್ನು ನಿಯಂತ್ರಿಸಿ, ಹಿಂದೂಗಳನ್ನು ದಮನ ಮಾಡಲು ಸರ್ಕಾರ ಕಾಯ್ದೆ ತರಲು ಹೊರಟಿದೆ ಎಂದು ಆರೋಪಿಸಿರುವ ಅವರು, ಈ ಕಾಯ್ದೆಯನ್ನು ಸಕ್ತವಾಗಿ ವಿರೋಧಿಸುವುದಾಗಿ ಹೇಳಿದ್ದಾರೆ.

  • 19 Aug 2026 11:50 AM (IST)

    ನಕಲಿ ಔಷಧಿ ಜಾಲ ತಡೆಗೆ ಎಸ್‍ಐಟಿ ರಚನೆ: ಸಚಿವ ಯು.ಟಿ.ಖಾದರ್

    ರಾಜ್ಯದಲ್ಲಿ ನಕಲಿ ಔಷಧಿ ಹಾಗೂ ಕಾಸ್ಮೆಟಿಕ್ಸ್ ಜಾಲ ಬಯಲಾದ ಹಿನ್ನೆಲೆಯಲ್ಲಿ, ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ದುಬೈನಲ್ಲಿರುವ ಪ್ರಶಾಂತ್ ಎಂಬಾತ ಸಿದ್ದಯ್ಯ ಎಂಬುವರ ಫಾರ್ಮ್‌ಹೌಸ್ ಲೀಸ್‌ಗೆ ಪಡೆದು, ಬೇರೆ ರಾಜ್ಯಗಳಿಂದ ತಂದ ನಕಲಿ ಮಾತ್ರೆಗಳಿಗೆ ಮಲ್ಟಿನ್ಯಾಷನಲ್ ಕಂಪನಿಗಳ ಲೇಬಲ್ ಹಾಕಿ ಮಾರಾಟ ಮಾಡುತ್ತಿದ್ದ. ಐಸಿಯು ಔಷಧಿಗಳನ್ನೂ ನಕಲಿ ಮಾಡಲಾಗಿದ್ದು, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ದೇಶಾದ್ಯಂತ ಈ ಜಾಲ ಹರಡಿದೆ. ಪ್ರಸ್ತುತ ಪ್ರಭುದೇವ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರು ನಕಲಿ ಜಾಲದ ಮಾಹಿತಿ ನೀಡಿದರೆ ಸೂಕ್ತ ಬಹುಮಾನ ನೀಡಲಾಗುವುದು.

  • 19 Aug 2026 11:45 AM (IST)

    ಮತದಾರರ ಪಟ್ಟಿಯಿಂದ 1.71 ಲಕ್ಷ ಜನರ ಹೆಸರು ತೆರವು

    ಕೋಲಾರ ಜಿಲ್ಲೆಯಲ್ಲಿ ನಡೆಸಲಾದ ಮನೆ-ಮನೆ ಗಣತಿಯಲ್ಲಿ 1,71,034 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಒಟ್ಟು ವಿತರಿಸಲಾದ 12.95 ಲಕ್ಷ ಗಣತಿ ನಮೂನೆಗಳಲ್ಲಿ 11.24 ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಪಟ್ಟಿಯಿಂದ ಹೊರಬಿದ್ದವರಲ್ಲಿ ಶಾಶ್ವತ ಸ್ಥಳಾಂತರಗೊಂಡವರು (86,992), ಗೈರುಹಾಜರಾದವರು, ಮೃತಪಟ್ಟವರು ಹಾಗೂ ದ್ವಿ-ನೋಂದಾಯಿತರು ಸೇರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಮಂಗಳಾ ತಿಳಿಸಿದ್ದಾರೆ.

  • 19 Aug 2026 11:44 AM (IST)

    ತಮಿಳುನಾಡು ಶಾಸಕರಿಗೆ ಹೊಸ ಕಾರು ನೀಡಲು ಸಿಎಂ ವಿಜಯ್ ನಿರ್ಧಾರ

    ತಮಿಳುನಾಡು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಸಂಚರಿಸಿ ಜನರ ಕುಂದುಕೊರತೆ ಆಲಿಸಲು ಸಿಎಂ ವಿಜಯ್ ಹೊಸ ಕಾರು ನೀಡಲು ನಿರ್ಧರಿಸಿದ್ದಾರೆ. ಕಾರಿನ ವೆಚ್ಚ ಮತ್ತು ಚಾಲಕರ ಸಂಬಳಕ್ಕಾಗಿ ಹೆಚ್ಚುವರಿ 25,000 ರೂ. ಸೇರಿದಂತೆ ಸರ್ಕಾರದಿಂದ ತಿಂಗಳಿಗೆ ಒಟ್ಟು 75,000 ರೂ. ಹಣ ನೀಡಲಾಗುವುದು.

  • 19 Aug 2026 11:44 AM (IST)

    ಮೈಸೂರು ದಸರಾ: ವಿರೋಧದ ನಡುವೆಯೂ ವೈಭವದ ಕಂಬಳ ಉತ್ಸವಕ್ಕೆ ಸಿದ್ಧತೆ

    ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಅಂಗವಾಗಿ ಅಕ್ಟೋಬರ್ 18 ಮತ್ತು 19 ರಂದು ವೈಭವದ ಕಂಬಳ ಪಂದ್ಯಾಟ ಆಯೋಜನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಮೈಸೂರಿನ ಸಾತಗಳ್ಳಿ ರಿಂಗ್ ರಸ್ತೆ ಸಮೀಪವಿರುವ ವಿಟಿಯು ಹತ್ತಿರದ ಜಾಗದಲ್ಲಿ ಟ್ರ್ಯಾಕ್ ಹಾಗೂ ಗದ್ದೆ ಹದಗೊಳಿಸುವ ಕಾರ್ಯ ಆರಂಭವಾಗಿದೆ. ಈ ಬಾರಿಯ ಕಂಬಳ ಕ್ರೀಡೆಗಾಗಿ ಈಗಾಗಲೇ 130 ಜೋಡಿ ಕೋಣಗಳು ನೋಂದಣಿಯಾಗಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ವಿವಿಧ ಕಂಬಳ ಸಮಿತಿಗಳ ಜೊತೆ ಸಭೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ.

  • 19 Aug 2026 10:56 AM (IST)

    ನಾಗೇಂದ್ರರಿಂದ ದಲಿತ ಅಸ್ತ್ರ ದುರುಪಯೋಗ: ಜನಾರ್ದನ್ ರೆಡ್ಡಿ ಆರೋಪ

    ಭ್ರಷ್ಟಾಚಾರ ಮುಚ್ಚಿಕೊಳ್ಳಲು ದಲಿತ ಜಾತಿ ಅಸ್ತ್ರ ಬಳಸುವುದು ತಪ್ಪು ಎಂದು ಹಿರಿಯ ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ. ಹಣ ರಿಕವರಿ ಆದ ತಕ್ಷಣ ಕಳ್ಳತನದ ಅಪರಾಧ ಇಲ್ಲವಾಗುವುದಿಲ್ಲ. ನಾಗೇಂದ್ರ ಕೇವಲ ಮುಖವಾಡ, ಈ ಹಣ ಕಾಂಗ್ರೆಸ್ ಹೈಕಮಾಂಡ್‌ಗೆ ತಲುಪಿದೆ ಎಂದು ಆರೋಪಿಸಿರುವ ಅವರು, ನಾಗೇಂದ್ರರನ್ನು ಸಚಿವಸ್ಥಾನದಿಂದ ತೆಗೆದು ಬೇರೆ ದಲಿತರನ್ನು ಸಚಿವರನ್ನಾಗಿ ಮಾಡಲು ಆಗ್ರಹಿಸಿದ್ದಾರೆ.

  • 19 Aug 2026 10:28 AM (IST)

    ನಕಲಿ ಔಷಧ, ಕಾಸ್ಮೆಟಿಕ್ಸ್ ಜಾಲದ ಮೇಲೆ ದಾಳಿ

    ರಾಷ್ಟ್ರಮಟ್ಟದಲ್ಲಿ ಸಕ್ರಿಯವಾಗಿರುವ ನಕಲಿ ಬ್ರಾಂಡೆಡ್ ಔಷಧ ಹಾಗೂ ಕಾಸ್ಮೆಟಿಕ್ಸ್ ಜಾಲದ ಮೇಲಿನ ದಾಳಿ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಿದ್ದು, ನಕಲಿ ಜಾಲದ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಲಾಗಿದೆ.

Published On - Aug 19,2026 10:26 AM

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ