AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ, ಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಹಾಗೂ ಶಿವಮೊಗ್ಗ- ತಾಳಗುಪ್ಪ ರೈಲು ಸಂಚಾರದಲ್ಲಿ ವ್ಯತ್ಯಯ; ಆಗಸ್ಟ್ 19 ರ ರಾಜ್ಯದ ಪ್ರಮುಖ ಮುಖ್ಯಾಂಶಗಳ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

TV9 Kannada News Live: ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್
ಭಾವನಾ ಹೆಗಡೆ
|

Updated on:Aug 19, 2026 | 10:56 AM

Share

LIVE NEWS & UPDATES

  • 19 Aug 2026 10:56 AM (IST)

    ನಕಲಿ ಔಷಧಿ ಜಾಲ ತಡೆಗೆ ಎಸ್‍ಐಟಿ ರಚನೆ: ಸಚಿವ ಯು.ಟಿ.ಖಾದರ್

    ರಾಜ್ಯದಲ್ಲಿ ನಕಲಿ ಔಷಧಿ ಹಾಗೂ ಕಾಸ್ಮೆಟಿಕ್ಸ್ ಜಾಲ ಬಯಲಾದ ಹಿನ್ನೆಲೆಯಲ್ಲಿ, ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ದುಬೈನಲ್ಲಿರುವ ಪ್ರಶಾಂತ್ ಎಂಬಾತ ಸಿದ್ದಯ್ಯ ಎಂಬುವರ ಫಾರ್ಮ್‌ಹೌಸ್ ಲೀಸ್‌ಗೆ ಪಡೆದು, ಬೇರೆ ರಾಜ್ಯಗಳಿಂದ ತಂದ ನಕಲಿ ಮಾತ್ರೆಗಳಿಗೆ ಮಲ್ಟಿನ್ಯಾಷನಲ್ ಕಂಪನಿಗಳ ಲೇಬಲ್ ಹಾಕಿ ಮಾರಾಟ ಮಾಡುತ್ತಿದ್ದ. ಐಸಿಯು ಔಷಧಿಗಳನ್ನೂ ನಕಲಿ ಮಾಡಲಾಗಿದ್ದು, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ದೇಶಾದ್ಯಂತ ಈ ಜಾಲ ಹರಡಿದೆ. ಪ್ರಸ್ತುತ ಪ್ರಭುದೇವ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರು ನಕಲಿ ಜಾಲದ ಮಾಹಿತಿ ನೀಡಿದರೆ ಸೂಕ್ತ ಬಹುಮಾನ ನೀಡಲಾಗುವುದು.

  • 19 Aug 2026 10:28 AM (IST)

    ನಕಲಿ ಔಷಧ, ಕಾಸ್ಮೆಟಿಕ್ಸ್ ಜಾಲದ ಮೇಲೆ ದಾಳಿ

    ರಾಷ್ಟ್ರಮಟ್ಟದಲ್ಲಿ ಸಕ್ರಿಯವಾಗಿರುವ ನಕಲಿ ಬ್ರಾಂಡೆಡ್ ಔಷಧ ಹಾಗೂ ಕಾಸ್ಮೆಟಿಕ್ಸ್ ಜಾಲದ ಮೇಲಿನ ದಾಳಿ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಿದ್ದು, ನಕಲಿ ಜಾಲದ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಲಾಗಿದೆ.

Breaking News Today Live Updates in Kannada: ಮಾಜಿ ಶಿಕ್ಷಣ ಸಚಿವ, ಬಿಜೆಪಿ ಹಿರಿಯ ನಾಯಕ ಬಿ.ಸಿ. ನಾಗೇಶ್ (72) ಅನಾರೋಗ್ಯದಿಂದ ನಿಧನರಾಗಿದ್ದು, ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಲ್ಲೇಶ್ವರಂ ಕಚೇರಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ಕೆಲಸಕ್ಕಾಗಿ ಇಂದು ದೆಹಲಿ ಹಾಗೂ ನಾಳೆ ಚೆನ್ನೈಗೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ, ಮಲ್ಲಸಂದ್ರ-ಗುಬ್ಬಿ ನಡುವಿನ ಇಂಜಿನಿಯರಿಂಗ್ ಕಾಮಗಾರಿಯಿಂದಾಗಿ ಆಗಸ್ಟ್ 19, 22, 23 ಮತ್ತು 26 ರಂದು ಶಿವಮೊಗ್ಗ, ತಾಳಗುಪ್ಪ ಹಾಗೂ ಚಿಕ್ಕಮಗಳೂರು ಮಾರ್ಗದ ಹಲವು ರೈಲು ಸಂಚಾರ ರದ್ದು ಮತ್ತು ಮಾರ್ಗ ಬದಲಾವಣೆಯಾಗಿದ್ದು, ಪ್ರಯಾಣಿಕರು ವೇಳಾಪಟ್ಟಿ ಪರಿಶೀಲಿಸಲು ರೈಲ್ವೆ ಇಲಾಖೆ ಕೋರಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Aug 19,2026 10:26 AM

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ