TV9 Kannada News Live: ಚಾಮರಾಜನಗರ ಎನ್‌ಕೌಂಟರ್​​​​ಗೆ ತಿರುವು, ನಕಲಿ ಔಷಧಿ ಜಾಲ: ವಿಧಾನಸಭೆಯಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ

Karnataka News Today Live Updates: ವಿಧಾನ ಸಭೆ ಅಧಿವೇಶನದಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಭಾರೀ ಗದ್ದಲ ಮುಂದುವರಿದಿದೆ. ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದ್ದು, ಕಾವೇರಿ ವಿವಾದ ಮತ್ತು ಚಾಮರಾಜನಗರ ಎನ್‌ಕೌಂಟರ್ ಕುರಿತು ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ನಕಲಿ ಔಷಧಿ ದಂಧೆಯೂ ಬೆಳಕಿಗೆ ಬಂದಿದೆ. ಈ ಎಲ್ಲಾ ಪ್ರಮುಖ ರಾಜಕೀಯ ಮತ್ತು ರಾಜ್ಯ ಸುದ್ದಿಗಳನ್ನು ಇಲ್ಲಿ ಲೈವ್ ಆಗಿ ಅಪ್ಡೇಟ್ ಮಾಡಲಾಗಿದೆ.

TV9 Kannada News Live: ಚಾಮರಾಜನಗರ ಎನ್‌ಕೌಂಟರ್​​​​ಗೆ ತಿರುವು, ನಕಲಿ ಔಷಧಿ ಜಾಲ: ವಿಧಾನಸಭೆಯಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ
ಸಾಂದರ್ಭಿಕ ಚಿತ್ರ

Updated on: Aug 20, 2026 | 11:48 AM

LIVE NEWS & UPDATES

  • 20 Aug 2026 11:48 AM (IST)

    ನಕಲಿ ಬ್ರಾಂಡ್ ಔಷಧ, ಕಾಸ್ಮೆಟಿಕ್ಸ್ ಜಾಲ ಪ್ರಕರಣ: ಶೀಘ್ರವೇ ‘SIT’ ರಚನೆ

    ರಾಜ್ಯದಲ್ಲಿ ಪತ್ತೆಯಾಗಿರುವ ನಕಲಿ ಬ್ರಾಂಡ್ ಔಷಧ ಹಾಗೂ ಕಾಸ್ಮೆಟಿಕ್ಸ್ ಜಾಲವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ತನಿಖೆಗೆ ಶೀಘ್ರವೇ ವಿಶೇಷ ತನಿಖಾ ತಂಡ (SIT) ರಚಿಸಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ದಂಧೆಯು ಅಂತಾರಾಜ್ಯ ಮಟ್ಟದಲ್ಲಿ ಹಬ್ಬಿರುವುದರಿಂದ ಕೇಂದ್ರ ಆರೋಗ್ಯ ಸಚಿವರಿಗೆ ಹಾಗೂ ಸಂಬಂಧಪಟ್ಟ ಇತರ ರಾಜ್ಯಗಳ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

  • 20 Aug 2026 11:29 AM (IST)

    ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ; ಇಬ್ಬರು ದುರ್ಮರಣ, ಹಲವರಿಗೆ ಗಾಯ

    ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಸೈನ್ ಬೋರ್ಡ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಅಸಹಾಯಕರಾಗಿ ದುರ್ಮರಣಕ್ಕೀಡಾಗಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

  • 20 Aug 2026 10:47 AM (IST)

    ನಕಲಿ ಔಷಧ ಜಾಲಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್: ಸುಳಿವು ಕೊಟ್ಟರೆ ಸಿಗಲಿದೆ 50,000 ರೂ. ಇನಾಮು

    ರಾಜ್ಯದಲ್ಲಿ ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಜಾಲಕ್ಕೆ ಸಂಪೂರ್ಣ ಕಡಿವಾಣ ಹಾಕಲು ಕರ್ನಾಟಕ ಆರೋಗ್ಯ ಇಲಾಖೆ ಹಾಗೂ ಔಷಧ ನಿಯಂತ್ರಣ ಮಂಡಳಿ (Drug Control Board) ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ನಕಲಿ ಔಷಧಗಳ ಬಗ್ಗೆ ನಿಖರ ಸುಳಿವು ನೀಡುವ ಸಾರ್ವಜನಿಕರಿಗೆ ₹10,000 ದಿಂದ ₹50,000 ದವರೆಗೆ ನಗದು ಬಹುಮಾನ (Cash Award) ನೀಡಲು ಇಲಾಖೆ ಯೋಜನೆ ರೂಪಿಸಿದೆ.

  • 20 Aug 2026 10:45 AM (IST)

    ರಾಣೆಬೆನ್ನೂರು ಬಳಿ ಭೀಕರ ಲಾರಿ ಅಪಘಾತ: ಬ್ರಿಡ್ಜ್‌ನಿಂದ ಕೆಳಗೆ ಬಿದ್ದು ಚಾಲಕ ದುರ್ಮರಣ

    ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹುಲಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಬ್ರಿಡ್ಜ್‌ನಿಂದ ಕೆಳಗೆ ಬಿದ್ದು, ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

  • 20 Aug 2026 10:44 AM (IST)

    ಚೆನ್ನೈನಲ್ಲಿ ದಕ್ಷಿಣ ವಲಯ ಮಂಡಳಿಯ 31ನೇ ಸಭೆ ಆರಂಭ: ಅಮಿತ್ ಶಾ ಅಧ್ಯಕ್ಷತೆಯಲ್ಲಿ ರಾಜ್ಯಗಳ ಸಿಎಂ ಭಾಗಿ

    ತಮಿಳುನಾಡಿನ ಚೆನ್ನೈ ಬಳಿಯ ಕೋವಲಂನಲ್ಲಿ ದಕ್ಷಿಣ ವಲಯ ಮಂಡಳಿಯ (Southern Zonal Council) 31ನೇ ಸಭೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಅಧಿಕೃತವಾಗಿ ಆರಂಭವಾಗಿದೆ. ಸಭೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಆರ್ಥಿಕ ಪ್ರಗತಿ, ಬಂಡವಾಳ ಹೂಡಿಕೆ, ಜಲ ಮತ್ತು ಗಡಿ ವಿವಾದಗಳು ಹಾಗೂ ಪ್ರಮುಖವಾಗಿ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ (Delimitation) ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿವೆ.

Breaking News Today Live Updates in Kannada: ವಿಧಾನಸಭೆ ಅಧಿವೇಶನ ಶುರುವಾಗಿದ್ದು, ವಿರೋಧ ಪಕ್ಷ ಹಾಗೂ ಆಡಿಳಿತ ಪಕ್ಷ ಕಾಂಗ್ರೆಸ್​​ ನಡುವೆ ಭಾರೀ ಗದ್ದಲ ಶುರುವಾಗಿದೆ. ಇದೀಗ ವಿಧಾನ ಸಭೆ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗುತ್ತಿದೆ. ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿರುವ ಬಿಜೆಪಿ. ಇದೀಗ ಅಧಿವೇಶನದಲ್ಲೂ ಈ ಬಗ್ಗೆ ಹೋರಾಟ ಮುಂದುವರಿಸಿದೆ. ಸದನದಲ್ಲಿ ಬಿಜೆಪಿಯ ಪ್ರಶ್ನೆಗಳಿಗೆ ಹಾಗೂ ಹೋರಾಟಕ್ಕೆ ಕಾಂಗ್ರೆಸ್​​ ಕೂಡ ಉತ್ತರ ನೀಡಲು ಸಿದ್ಧತೆಯನ್ನು ಮಾಡಿದೆ. ಇನ್ನು ಚಾಮರಾಜನಗರದ ಎನ್​​​ಕೌಂಟರ್​​​ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದರ ಜತೆಗೆ ವಿಧಾನಸಭೆಯಲ್ಲಿ ಕಾವೇರಿ ಬಗ್ಗೆಯೂ ಕಾವು ಹೆಚ್ಚಾಗಿದೆ.ರಾಜ್ಯದಲ್ಲಿ ಅಕ್ರಮ ಹಾಗೂ ನಕಲಿ ಔಷಧಿ ದಂದೆಗಳು ಕೂಡ ನಡೆಯುತ್ತಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ದಾಳಿಯನ್ನು ನಡೆಸಿದೆ. ಹೀಗೆ ಹಲವು ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್​ ಇಲ್ಲಿದೆ ನೋಡಿ.

🔴LIVE | TV9 KANNADA NEWS | ಟಿವಿ9 ಕನ್ನಡ ನ್ಯೂಸ್ ಲೈವ್ | TV9 KANNADA NEWS LIVE

Published On - 10:41 am, Thu, 20 August 26

Loading...
Unable to load recommendations.
Follow Us