TV9 Kannada News Live: ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ನಾಯಕರ ಪ್ರತಿಭಟನೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಓಣಂ ಹಬ್ಬಕ್ಕಾಗಿ ಬೆಂಗಳೂರಿನಿಂದ ತಿರುವನಂತಪುರಂಗೆ ವಿಶೇಷ ರೈಲು ಸಂಚಾರ, ಕೆ.ಆರ್. ಮಾರ್ಕೆಟ್ನಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ ಭರಾಟೆ ಮತ್ತು ಸಂಚಾರ ನಿಯಂತ್ರಣ ಕ್ರಮಗಳು ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಹೌಸ್ಫುಲ್ ಟಿಕೆಟ್ ಬುಕಿಂಗ್ ಹವಾ ಸೇರಿದಂತೆ ಕರ್ನಾಟಕ ಹಾಗೂ ಬೆಂಗಳೂರಿನ ಪ್ರಮುಖ ಲೈವ್ ಅಪ್ಡೇಟ್ಗಳು ಇಲ್ಲಿವೆ.

LIVE NEWS & UPDATES
-
ಕಪ್ಪು ಬಟ್ಟೆ ಧರಿಸಿ ವಿಧಾನಸೌಧದಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಪ್ಪು ಟೀ-ಶರ್ಟ್ ಧರಿಸಿ, ವಿಧಾನಸೌಧದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ಮಾರ್ಷಲ್ಗಳ ತಡೆಯನ್ನೂ ಮೀರಿ ಒಳಗಿಳಿದ ಶಾಸಕರು ಸರ್ಕಾರ ಹಾಗೂ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.
ಬಿಜೆಪಿ ಶಾಸಕರು ಬ್ಲಾಕ್ ಟಿ-ಶರ್ಟ್ ಧರಿಸಿ ಬಂದಾಗ ವಿಧಾನಸೌಧದ ಒಳಗಡೆ ತಡೆಯಲು ಪ್ರಯತ್ನಿಸಿದ ಪೊಲೀಸರು..#bjp #vidhanasoudha pic.twitter.com/2jksAipr8D
— TV9 Kannada (@tv9kannada) August 21, 2026
-
ವಿಪಕ್ಷಗಳಿಗೆ ಸಡ್ಡು ಹೊಡೆದ ಕಾಂಗ್ರೆಸ್: ಶಾಸಕರ ಪ್ರತಿಭಟನೆ
ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ, ಬಿಜೆಪಿಗೆ ಸಡ್ಡು ಹೊಡೆಯಲು ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಧರಣಿ ಪ್ರತಿಭಟನೆ ನಡೆಸಲಿದ್ದಾರೆ.
-
Breaking News Today Live Updates in Kannada: ಒಂದೆಡೆ ಓಣಂ ಹಬ್ಬಕ್ಕಾಗಿ ಬೆಂಗಳೂರಿನಿಂದ ತಿರುವನಂತಪುರಂಗೆ ನೈಋತ್ಯ ರೈಲ್ವೆ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಿಸಿದೆ. ಇನ್ನೊಂದೆಡೆ, ರಾಜಧಾನಿಯ ಕೆ.ಆರ್. ಮಾರ್ಕೆಟ್ನಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ ಭರಾಟೆ ಜೋರಾಗಿದ್ದು, ಟ್ರಾಫಿಕ್ ಸಮಸ್ಯೆ ತಪ್ಪಿಸಲು ಪೊಲೀಸರು ರಸ್ತೆ ಮಧ್ಯದ ವ್ಯಾಪಾರಕ್ಕೆ ಬ್ರೇಕ್ ಹಾಕಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಮತ್ತೊಂದೆಡೆ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಮುಂಗಡ ಟಿಕೆಟ್ ಬುಕಿಂಗ್ ಓಪನ್ ಆಗುತ್ತಿದ್ದಂತೆ ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳ ಪ್ರದರ್ಶನಗಳು ಕೆಲವೇ ನಿಮಿಷಗಳಲ್ಲಿ ‘ಸೋಲ್ಡ್ ಔಟ್’ ಆಗಿ ಹೊಸ ಇತಿಹಾಸ ಬರೆದಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Aug 21,2026 10:26 AM




