
ಆಗಸ್ಟ್ 7ರಂದು ನಡೆದ ಮುದರಂಗಡಿ ಉದ್ಯಮಿ ಡೇವಿಡ್ ಹತ್ಯೆಗೆ ಶೂಟರ್ಗಳನ್ನು ಒದಗಿಸಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಅನೋಜ್, ಹೆಬ್ರಿ ಬಳಿ ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
KPSC ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇಡಿ ದಾಳಿಯ ಸುಳಿವು ದೊರೆಯುತ್ತಿದ್ದಂತೆಯೇ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಿ ಪರಾರಿಯಾಗಿದ್ದಾರೆ. ಸದ್ಯ ಅವರ ಮನೆ ಬೀಗ ಒಡೆದ ಇಡಿ ಅಧಿಕಾರಿಗಳು ಸುಮಾರು 9 ಗಂಟೆಗಳ ಕಾಲ ಶೋಧ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
Breaking News Today Live Updates in Kannada: ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವಿಧಾನಸೌಧ ಮುತ್ತಿಗೆ ಚಳವಳಿ ಹಮ್ಮಿಕೊಂಡಿದ್ದು, 500ಕ್ಕೂ ಹೆಚ್ಚು ಪೊಲೀಸರು ಮತ್ತು ಕೆಎಸ್ಆರ್ಪಿ ತುಕಡಿಗಳೊಂದಿಗೆ ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ, ದೆಹಲಿಯ ಐಟಿಓ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಾಗೂ ದೆಹಲಿ ಆಪ್ ಶಾಸಕ ಅನಿಲ್ ಝಾ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ದೊಡ್ಡಬಳ್ಳಾಪುರದಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳ ಜೊತೆ ಸಂಪರ್ಕದಲ್ಲಿದ್ದ ಎಸಿ ಮೆಕ್ಯಾನಿಕ್ ಸೈಯದ್ ಅಬೂಬಕರ್ನನ್ನು ತನಿಖಾ ಸಂಸ್ಥೆಗಳು ಬಂಧಿಸಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 8:53 am, Mon, 24 August 26