
ಮೈಸೂರು: ಸಂಸದ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನ ಜೆ.ಕೆ. ಮೈದಾನದಲ್ಲಿ ನಾಳೆ (ಶುಕ್ರವಾರ) ನಡೆಯಬೇಕಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಸ್ವಾಗತ ಸಮಾವೇಶವನ್ನು ದಿಢೀರನೆ ರದ್ದುಗೊಳಿಸಲಾಗಿದೆ. ನಾಡಿದ್ದು (ಶನಿವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಸಿದ್ಧತೆಗಳ ಕಾರಣ ನೀಡಿ ಈ ಸಮಾವೇಶವನ್ನು ಕೈಬಿಡಲಾಗಿದೆ.
ದೇಶಾದ್ಯಂತ ಸಾರ್ವಜನಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆ (ಅಕ್ರಮ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ – 2026’ (Public Examinations Prevention of Unfair Means Amendment Bill 2026) ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿದ್ದ ಮೂರು ಅಸ್ಥಿಪಂಜರಗಳ ರಹಸ್ಯ ಸದ್ಯ ಬಯಲಾಗಿದ್ದು, ವೈಜ್ಞಾನಿಕ ಡಿಎನ್ಎ (DNA) ಪರಿಶೀಲನೆಯಲ್ಲಿ ಮೃತರ ಗುರುತು ಪತ್ತೆಯಾಗಿದೆ.
ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೆಚ್ಚದಾಯಕ ಹಾಗೂ ಬಹುನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಸಿನಿಮಾದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚಿಸಿತ್ತು. ಆದರೆ, ಕೆಆರ್ಎಸ್ ಸೇರಿದಂತೆ ರಾಜ್ಯದ ಜಲಾಶಯಗಳಲ್ಲಿ ಕುಡಿಯುವ ನೀರಿಗೇ ಅಭಾವವಿರುವುದರಿಂದ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿರುವ ರಾಜ್ಯ ಸರ್ಕಾರ, ಈ ಆದೇಶವನ್ನು ಪ್ರಶ್ನಿಸಿ CWMA ಮುಂದೆ ಮೇಲ್ಮನವಿ ಸಲ್ಲಿಸಿದೆ.
Breaking News Today Live Updates in Kannada: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತಾರಕಕ್ಕೇರಿದ್ದು, ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನವದೆಹಲಿಯಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಿಗದಿಯಾಗಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರ ಚಿತ್ತ ದೆಹಲಿ ಸಭೆಯತ್ತ ನೆಟ್ಟಿದೆ. ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೆಚ್ಚದಾಯಕ ಹಾಗೂ ಬಹುನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಸಿನಿಮಾದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ. ಕಾಮನ್ವೆಲ್ತ್ ಗೇಮ್ಸ್ 2026ರ 6ನೇ ದಿನದ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ಗಳು ತಮ್ಮ ಕಠಿಣ ಪರಿಶ್ರಮ ಮತ್ತು ಛಲದಿಂದ ಒಟ್ಟು 3 ಪದಕಗಳನ್ನು ಭಾರತದ ಮಡಿಲಿಗೆ ಹಾಕಿದ್ದಾರೆ. ಇದರ ಜತೆಗೆ ಸಚಿವ ಸಂಪುಟ ರಚನೆ ಹಾಗೂ ಸಚಿವ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.
Published On - 9:18 am, Thu, 30 July 26