TV9 Kannada News Live: ರಾಜ್ಯದಲ್ಲಿ ಹೆಚ್ಚಾಯ್ತು ಕಾವೇರಿ ಕಿಚ್ಚು! ಕೆಆರ್ಎಸ್ ಮುತ್ತಿಗೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ನಾಯಕರಿಂದ ಕೆಆರ್ಎಸ್ ಜಲಾಶಯ ಮುತ್ತಿಗೆ ಚಳವಳಿ, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಕೊನೆಗೂ ಸಿಕ್ಕ ಗ್ರೀನ್ ಸಿಗ್ನಲ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಹೊಸ ಸೆಲ್ಫಿ ವಿಡಿಯೋ ವೈರಲ್ ಸೇರಿದಂತೆ ಇಂದಿನ ಎಲ್ಲಾ ಪ್ರಮುಖ ಮುಖ್ಯಾಂಶಗಳ ಲೈವ್ ಅಪ್ಡೇಟ್ಗಳು ಇಲ್ಲಿವೆ.

LIVE NEWS & UPDATES
-
ಮಹಾಗಾಂವ್ ಬಳಿ KKRTC ಬಸ್ ಪಲ್ಟಿ: ಚಾಲಕ, ನಿರ್ವಾಹಕ ಸೇರಿ ಐವರಿಗೆ ಗಾಯ
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಬಳಿ ಬೀದರ್ನಿಂದ ಕಲಬುರಗಿಗೆ ಬರುತ್ತಿದ್ದ KKRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿದೆ. ಬಸ್ನಲ್ಲಿದ್ದ ಚಾಲಕ, ನಿರ್ವಾಹಕ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಾಗಾಂವ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
CWMA ಆದೇಶ ಖಂಡಿಸಿ ಕೆಆರ್ಎಸ್ ಬಳಿ ಬಿಜೆಪಿ ಪ್ರತಿಭಟನೆ: ಭದ್ರತೆ ಬಿಗಿ
ತಮಿಳುನಾಡಿಗೆ ದಿನವೂ 3,500 ಕ್ಯೂಸೆಕ್ ನೀರು ಹರಿಸುವ CWMA ಆದೇಶ ಖಂಡಿಸಿ ಇಂದು ಬಿಜೆಪಿ KRS ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ. ಮುಂಜಾಗ್ರತಾ ಕ್ರಮವಾಗಿ 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಐಜಿಪಿ ಬೋರಲಿಂಗಯ್ಯ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು.
-
Breaking News Today Live Updates in Kannada: ತಮಿಳುನಾಡಿಗೆ 3,500 ಕ್ಯೂಸೆಕ್ಸ್ ನೀರು ಹರಿಸುವ CWRC ಆದೇಶ ಖಂಡಿಸಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಇಂದು ಕೆಆರ್ಎಸ್ ಜಲಾಶಯ ಮುತ್ತಿಗೆ ಚಳವಳಿ ನಡೆಸುತ್ತಿದ್ದು, ಮಂಡ್ಯದಲ್ಲಿ ಹೋರಾಟ ತೀವ್ರಗೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಕಗ್ಗಂಟಿಗೆ ತೆರೆಬಿದ್ದಿದ್ದು, ರಾಹುಲ್ ಗಾಂಧಿ ಪಟ್ಟಿಗೆ ಅಂತಿಮ ಅಂಕಿತ ಹಾಕಿದ್ದಾರೆ. ಸೋಮವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ಹೊಸ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ನಲ್ಲಿದ್ದು, ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಂಗೀಕಾರವನ್ನು ಐತಿಹಾಸಿಕ ಕ್ಷಣ ಎಂದು ಕರೆದಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jul 31,2026 9:27 AM




