TV9 Kannada News Live: ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಯಶವಂತಪುರ ಎಪಿಎಂಸಿಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ, ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ನೀಡಿದ್ದ ಎಸ್​ಐಆರ್ ನೋಟಿಸ್ ಹಿಂಪಡೆದ ಅಧಿಕಾರಿಗಳು ಹಾಗೂ ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ಮಹಿಳಾ ಸಿಬ್ಬಂದಿ ನಿರ್ಬಂಧ ಖಂಡಿಸಿ ನೌಕರರ ಮುಷ್ಕರ ಸೇರಿದಂತೆ ಇಂದಿನ ಪ್ರಮುಖ ಅಪ್‌ಡೇಟ್‌ಗಳು ಇಲ್ಲಿವೆ.

TV9 Kannada News Live: ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಎಂಟ್ರಿ!

Updated on: Sep 08, 2026 | 12:10 PM

LIVE NEWS & UPDATES

  • 08 Sep 2026 12:10 PM (IST)

    ಜೈಲಲ್ಲಿ ಮೊಬೈಲ್ ಬಳಕೆ: ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಪೊಲೀಸರ ಸಿದ್ಧತೆ!

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್‌ನನ್ನು ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇಂದು ಬಾಡಿ ವಾರಂಟ್ ಆಧಾರದ ಮೇಲೆ ಇಬ್ಬರನ್ನೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಕೋರಲಿದ್ದಾರೆ.

  • 08 Sep 2026 12:09 PM (IST)

    ಎಪಿಎಂಸಿಯಲ್ಲಿ ವೇಯಿಂಗ್ ಮಷಿನ್ ಹತ್ತಿ ಖುದ್ದು ತೂಕ ಪರಿಶೀಲಿಸಿದ ಸಿಎಂ ಡಿಕೆಶಿ!

    ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ್ದ ಸಿಎಂ ಡಿ.ಕೆ. ಶಿವಕುಮಾರ್, ಮಾರುಕಟ್ಟೆಯ ಪರಿಶೀಲನೆ ವೇಳೆ ಅಲ್ಲಿನ ದೊಡ್ಡ ವೇಯಿಂಗ್ ಮಷಿನ್ ಮೇಲೆ ಹತ್ತಿ ಖುದ್ದು ತಮ್ಮ ತೂಕವನ್ನು ಪರಿಶೀಲಿಸಿಕೊಂಡರು. ಈ ವೇಳೆ ಅಧಿಕಾರಿಗಳು ಹಾಗೂ ಮಾರುಕಟ್ಟೆಯ ಸಾರ್ವಜನಿಕರು ಸಿಎಂ ನಡೆಯನ್ನು ಆಶ್ಚರ್ಯದಿಂದ ವೀಕ್ಷಿಸಿದರು.

    YouTube video player

  • 08 Sep 2026 11:28 AM (IST)

    ಟ್ರಾಲಿ ಬ್ಯಾಗ್‌ನಲ್ಲಿ 180 ನಕ್ಷತ್ರ ಆಮೆಗಳ ಸಾಗಾಟ: ಬೆಂಗಳೂರಲ್ಲಿ ಆರೋಪಿ ಬಂಧನ!

    ಬೆಂಗಳೂರಿನ ಗಾಂಧಿನಗರದಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡಿಆರ್‌ಐ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆಮೆ ಇಟ್ಟುಕೊಂಡರೆ ಅದೃಷ್ಟ ಬರಲಿದೆ ಎಂದು ನಂಬಿಸಿ 10,000 ರೂ.ಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಒಬ್ಬನನ್ನು ಬಂಧಿಸಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

     

  • 08 Sep 2026 11:26 AM (IST)

    ಮಕ್ಕಳನ್ನು ಕೆಲಸಕ್ಕೆ ಇಟ್ಕೊಂಡಿದ್ರೆ ಸಸ್ಪೆಂಡ್ ಮಾಡಿ ಎಂದ ಸಿಎಂ!

    ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್, ಮಾರುಕಟ್ಟೆಯಲ್ಲಿ ಸಣ್ಣ ಮಕ್ಕಳಿಂದ ಕೂಲಿ ಕೆಲಸ ಮಾಡಿಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಂದ ಕೆಲಸ ಮಾಡಿಸುವವರನ್ನು ಇಂದೇ ಬಂಧಿಸದಿದ್ದರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನೇ ಅಮಾನತುಗೊಳಿಸುವುದಾಗಿ ಎಚ್ಚರಿಸಿದ ಅವರು, ಬಾಲಕಾರ್ಮಿಕ ಪದ್ಧತಿಯನ್ನು ತಕ್ಷಣವೇ ತಡೆಯಲು ಸೂಚಿಸಿದರು.

    YouTube video player

  • 08 Sep 2026 11:23 AM (IST)

    ಎಪಿಎಂಸಿ ಮಾರುಕಟ್ಟೆಯ ಪುಟ್ಟ ಹೋಟೆಲ್‌ನಲ್ಲಿ ತಿಂಡಿ ಸವಿದ ಸಿಎಂ ಡಿಕೆಶಿ!

    ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಸಿಎಂ ಡಿ.ಕೆ. ಶಿವಕುಮಾರ್, ಅಲ್ಲಿನ ಸಣ್ಣ ಹೋಟೆಲ್‌ ಒಂದರಲ್ಲಿ ಇಡ್ಲಿ-ಸಾಂಬಾರ್ ಹಾಗೂ ಚಿತ್ರಾನ್ನ ಸೇವಿಸಿದರು. ಸಾಮಾನ್ಯ ಜನರಂತೆ ಹೋಟೆಲ್‌ನಲ್ಲಿ ಕುಳಿತು ತಿಂಡಿ ಸವಿಯುತ್ತಲೇ, ಸ್ಥಳೀಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಜೊತೆ ಸುದೀರ್ಘ ಮಾತುಕತೆ ನಡೆಸಿ ಅವರ ಯೋಗಕ್ಷೇಮ ವಿಚಾರಿಸಿದರು.

    YouTube video player

  • 08 Sep 2026 10:59 AM (IST)

    ಅಧಿಕಾರಿನ ತಕ್ಷಣವೇ ಸಸ್ಪೆಂಡ್ ಮಾಡಿ ಎಂದ ಸಿಎಂ!

    ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ್ದ ಸಿಎಂ ಡಿ.ಕೆ. ಶಿವಕುಮಾರ್‌ಗೆ ವಿಜಯಪುರ ಜಿಲ್ಲೆಯ ಹಿಟ್ನಳ್ಳಿ ಗ್ರಾಮದ ರೈತ ಲಾಡ್ಲೆ ಮಶಾಕ್ ತಮ್ಮ ಅಳಲು ತೋಡಿಕೊಂಡರು. ರೈತರು ಸಕಾಲದಲ್ಲಿ ಹಣ ಪಾವತಿಸಿದ್ದರೂ ಸೊಸೈಟಿ ಕಾರ್ಯದರ್ಶಿ ಡಿಸಿಸಿ ಬ್ಯಾಂಕ್‌ಗೆ ಬೆಳೆ ವಿಮೆ ಹಣ ಕಟ್ಟದ ಹಿನ್ನೆಲೆ 93 ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ತಿಳಿಸಿದರು. ವಿಷಯ ಆಲಿಸಿದ ಸಿಎಂ, ಕೂಡಲೇ ಪರಿಶೀಲಿಸಿ ಕ್ರಮಕೈಗೊಳ್ಳಲು ಸೂಚಿಸಿದರು.

    YouTube video player

  • 08 Sep 2026 10:57 AM (IST)

    ಈರುಳ್ಳಿ ಮಂಡಿಯಲ್ಲಿ ಮಹಿಳಾ ಕಾರ್ಮಿಕರ ಸಮಸ್ಯೆ ಆಲಿಸಿದ ಸಿಎಂ ಡಿಕೆಶಿ!

    ಬೆಂಗಳೂರಿನ ಯಶವಂತಪುರ ಈರುಳ್ಳಿ ಮಾರುಕಟ್ಟೆಗೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.

    YouTube video player

  • 08 Sep 2026 10:53 AM (IST)

    ರೈತರು, ವರ್ತಕರ ಬಳಿ ಮಾಹಿತಿ ಪಡೆದ ಸಿಎಂ

    ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿನ ರೈತರು ಮತ್ತು ವರ್ತಕರ ಬಳಿ ಮಾಹಿತಿ ಪಡೆದು ಅವರ ಸಮಸ್ಯೆಗಳನ್ನು ಆಲಿಸಿದರು. ವೀಡಿಯೋ ನೋಡಿ

  • 08 Sep 2026 10:49 AM (IST)

    ಬಳ್ಳಾರಿಯಲ್ಲಿ ಬಿಜೆಪಿಯ ಬಹಿರಂಗ ಸಭೆಗೆ ಅನುಮತಿ ನಿರಾಕರಣೆ!

    ಸೆಪ್ಟೆಂಬರ್ 10ರಂದು ಬಿಜೆಪಿ ನಡೆಸಲು ಉದ್ದೇಶಿಸಿದ್ದ ಬಳ್ಳಾರಿ ಚಲೋ ಪಾದಯಾತ್ರೆಯ ಸಾರ್ವಜನಿಕ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿದೆ. ಎಕ್ಸ್ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಲಿಖಿತ ಸ್ಪಷ್ಟನೆ ನೀಡಿದ್ದು, ನಿಯಮ ಉಲ್ಲಂಘಿಸಿದರೆ ಪ್ರಾಂಶುಪಾಲರನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಇಲಾಖೆ ಎಚ್ಚರಿಸಿದೆ.

Breaking News Today Live Updates in Kannada: ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ ನೀಡಿ, ಆಲೂಗಡ್ಡೆ ಮೂಟೆ ಮೇಲೆ ಕುಳಿತು ರೈತರು, ವರ್ತಕರು ಹಾಗೂ ಮಹಿಳಾ ಕಾರ್ಮಿಕರ ಸಮಸ್ಯೆ ಆಲಿಸಿದರು. ಇತ್ತ ಮಂಗಳೂರಿನಲ್ಲಿ, ಮತದಾರರ ಪಟ್ಟಿ ವ್ಯತ್ಯಾಸದ ನೆಪದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೀಡಲಾಗಿದ್ದ ಎಸ್‌ಐಆರ್ ನೋಟಿಸ್‌ ಅನ್ನು ವ್ಯಾಪಕ ಆಕ್ರೋಶದ ಬೆನ್ನಲ್ಲೇ ಅಧಿಕಾರಿಗಳು ನಾಲ್ಕೇ ಗಂಟೆಗಳಲ್ಲಿ ವಾಪಸ್ ಪಡೆದಿದ್ದಾರೆ. ಮತ್ತೊಂದೆಡೆ, ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ಹಿಂದೂ ಧಾರ್ಮಿಕ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ನೌಕರರು ಮುಷ್ಕರ ನಡೆಸಿದ್ದರಿಂದ ಟವರ್ ಬಂದ್ ಆಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಿಂಗ ತಾರತಮ್ಯದ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

Published On - 10:49 am, Tue, 8 September 26

Loading...
Unable to load recommendations.
Follow Us