Breaking News In Kannada Live: ಹನೂರು ಶೂಟೌಟ್ ಪ್ರಕರಣ: ಸಿಐಡಿ ತನಿಖೆಗೆ ಸರ್ಕಾರ ಆದೇಶ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
TV9 Kannada News Today Live Updates: ಆಗಸ್ಟ್ 25ರ ಕರ್ನಾಟಕದ ಪ್ರಮುಖ ಸುದ್ದಿಗಳು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆನ್ಲೈನ್ನಲ್ಲಿ ವಿಷಕಾರಿ ದತ್ತೂರಿ ಹಣ್ಣು ಮಾರಾಟ ತಡೆಗೆ ಎಫ್ಡಿಎ ನೋಟಿಸ್ ಜಾರಿಗೊಳಿಸಿದೆ. ಇತ್ತ ಚಿಕ್ಕಮಗಳೂರಿನ ಟಿಪ್ಪು ಕಟೌಟ್ ವಿವಾದದ ಪ್ರಮುಖ ಆರೋಪಿ ಅಫ್ರಿದ್ನನ್ನು ಪೊಲೀಸರು ಬಂಧಿಸಿದ್ದಾರೆ. ಸಂಪೂರ್ಣ ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಹನೂರು ಶೂಟೌಟ್ ಪ್ರಕರಣ ಸಿಐಡಿಗೆ
ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಮೂವರ ಸಾವಿಗೆ ಕಾರಣವಾಗಿದ್ದ ಶೂಟೌಟ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿ (CID) ತನಿಖೆಗೆ ವರ್ಗಾಯಿಸಿ ಅಧಿಕೃತ ಆದೇಶ ಹೊರಡಿಸಿದೆ.
-
ಬೆಂಗಳೂರು: ಸಿಗ್ನಲ್ನಲ್ಲಿ ಕಾರು ಡಿಕ್ಕಿ; ಬೈಕ್ ಸವಾರ ಸಾವು
ವಿಜ್ಞಾನ ನಗರದಲ್ಲಿ ನಿನ್ನೆ ಬೆಳಗ್ಗೆ ಸಿಗ್ನಲ್ನಲ್ಲಿ ನಿಂತಿದ್ದ ಬೈಕ್ಗೆ ಕಾರು ರಭಸದಿಂದ ಡಿಕ್ಕಿ ಹೊಡೆದು, ಸವಾರ ನವೀನ್ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Breaking News Today Live Updates in Kannada: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಮೆಜಾನ್ ಸೇರಿದಂತೆ ಹಲವು ಇ-ಕಾಮರ್ಸ್ ಸಂಸ್ಥೆಗಳಲ್ಲಿ ಮಾರಣಾಂತಿಕ ದತ್ತೂರಿ ಹಣ್ಣು ಮತ್ತು ಬೀಜಗಳ ಮಾರಾಟ ಹೆಚ್ಚಿದ್ದರಿಂದ, ಎಫ್ಡಿಎ (FDA) ಮತ್ತು FSSAI ಕಠಿಣ ಕ್ರಮ ಕೈಗೊಂಡು ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿವೆ. ಚಿಕ್ಕಮಗಳೂರಿನಲ್ಲಿ ಟಿಪ್ಪು ಸುಲ್ತಾನ್ ಕಟೌಟ್ಗೆ ಪಾಕ್ ಪರ ಹಾಡು ಜೋಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಇನ್ಸ್ಟಾಗ್ರಾಮ್ ಖಾತೆದಾರ, ಪ್ರಮುಖ ಆರೋಪಿ ಅಫ್ರಿದ್ನನ್ನು ಪೊಲೀಸರು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Aug 25,2026 9:34 AM




