AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News In Kannada Live: ಇಸ್ಕಾನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

TV9 Kannada News Today Live Updates: ಬೆಂಗಳೂರು ಟನಲ್ ರೋಡ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರ್ದೇಶನ, ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ವೈಭವದ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಹಾಗೂ ತಿರುಪತಿ ಟಿಟಿಡಿ ಉಪ ಇಒ ಮನೆಯಲ್ಲಿ ಎಸಿಬಿ ಭೇಟೆಯಾಗಿ 5 ಕೋಟಿ ರೂ.ಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿರುವ ವರದಿ ಸೇರಿದಂತೆ ಇಂದಿನ ಪ್ರಮುಖ ಸುದ್ಧಿಗಳ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

Breaking News In Kannada Live: ಇಸ್ಕಾನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಇಸ್ಕಾನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಭಾವನಾ ಹೆಗಡೆ
|

Updated on:Sep 04, 2026 | 10:53 AM

Share

LIVE NEWS & UPDATES

  • 04 Sep 2026 10:53 AM (IST)

    ಉದ್ಯಾನವನ ತಿದ್ದುಪಡಿ ಬಿಲ್ ವಾಪಸ್: ಶೋಭಾ ಕರಂದ್ಲಾಜೆ ಕಿಡಿ

    ಸಾರ್ವಜನಿಕರ ವಿರೋಧಕ್ಕೆ ಮಣಿದು ಸಂಪುಟದಲ್ಲಿ ಉದ್ಯಾನವನ ಸಂರಕ್ಷಣೆ ಕಾಯ್ದೆ ತಿದ್ದುಪಡಿ ವಿಧೇಯಕ ವಾಪಸ್ ಪಡೆದಿರುವುದಾಗಿ ಹೇಳಿ ರಾಜ್ಯ ಸರ್ಕಾರ ಬೆಂಗಳೂರಿನ ಜನರಿಗೆ ಮೋಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ‘ಬಿಲ್ ಮತ್ತೆ ತರುತ್ತೇವೆ’ ಎನ್ನುವ ಮೂಲಕ ಜನರ ಕಣ್ಣಿಗೆ ಮಂಕುಬೂದಿ ಎರಚುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ಗಿಂತ ಸೂಪರ್ ಸಿಎಂ ರೀತಿ ವರ್ತಿಸುತ್ತಿರುವ ಅವರ ಈ ಬಿಲ್ ಬಗ್ಗೆ ಸದನದಲ್ಲಿ ಯಾವುದೇ ಚರ್ಚೆಯಾಗಬಾರದು ಎಂದು ಸಚಿವರು ಆಗ್ರಹಿಸಿದ್ದಾರೆ.

  • 04 Sep 2026 10:50 AM (IST)

    ಕೃಷ್ಣ ಜನ್ಮಾಷ್ಟಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ

    ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಈ ಪವಿತ್ರ ಪರ್ವದಿನವು ಪ್ರತಿಯೊಬ್ಬರ ಜೀವನದಲ್ಲೂ ಸಕಾರಾತ್ಮಕ ಶಕ್ತಿ ಮತ್ತು ಭಕ್ತಿಯನ್ನು ತುಂಬಲಿ ಎಂದು ಹಾರೈಸಿ ‘ಜೈ ಶ್ರೀಕೃಷ್ಣ’ ಎಂದಿದ್ದಾರೆ.

  • 04 Sep 2026 10:47 AM (IST)

    ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಕಂಬಕ್ಕೆ ಡಿಕ್ಕಿ

    ನವಿ ಮುಂಬೈನಿಂದ ಶ್ರೀನಗರಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನವು ಲ್ಯಾಂಡಿಂಗ್ ಬಳಿಕ ಪಾರ್ಕಿಂಗ್ ಮಾಡುವಾಗ ಏರ್‌ಪೋರ್ಟ್‌ನ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಂಪೂರ್ಣ ಸುರಕ್ಷಿತವಾಗಿದ್ದಾರೆ. ಶ್ರೀನಗರ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

  • 04 Sep 2026 10:13 AM (IST)

    ಸಿಎಂ ಡಿಕೆಶಿ ಭೇಟಿಯಾದ ಶಾಸಕ ಲಕ್ಷ್ಮಣ್ ಸವದಿ

    ಸೆಪ್ಟೆಂಬರ್ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ರಂಗೇರಿದ್ದು, ಅಧ್ಯಕ್ಷ ಗಾದಿ ಮೇಲಿರುವ ಕೆ.ಎನ್. ರಾಜಣ್ಣ, ಶಿವಾನಂದ ಪಾಟೀಲ್ ಹಾಗೂ ಎಸ್. ರವಿ ಅವರ ತೀವ್ರ ಪೈಪೋಟಿ ನಡುವೆ ಶಾಸಕ ಲಕ್ಷ್ಮಣ್ ಸವದಿ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದಾರೆ.

Breaking News Today Live Updates in Kannada: ಲಾಲ್‌ಬಾಗ್ ಶಿಲಾ ರಚನೆ ಜಿಎಸ್‌ಐ ವರದಿ ಸಲ್ಲಿಸಲು ಹಾಗೂ ಹೆಬ್ಬಾಳ ಕೆರೆಗೆ ಟನಲ್ ರೋಡ್‌ನಿಂದ ಧಕ್ಕೆಯಾಗದಂತೆ ಪ್ರಾತ್ಯಕ್ಷಿಕೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಮತ್ತೊಂದೆಡೆ, ನಗರದ ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು, ಭಕ್ತರ ದರ್ಶನಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನ್ನು ತಿರುಪತಿಯಲ್ಲಿ ಸಾಮಾನ್ಯ ಕ್ಲರ್ಕ್ ಆಗಿ ಸೇರಿ ಟಿಟಿಡಿ ಉಪ ಇಒ ಆಗಿದ್ದ ಲೋಕನಾಥಮ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ 5 ಕೋಟಿ ರೂ.ಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Sep 04,2026 10:12 AM

Follow Us