
ಪಶುವೈದ್ಯಕೀಯ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ (CID) ತಂಡ, ಪ್ರಮುಖ ಆರೋಪಿ ಕನ್ನಾಳೆಯನ್ನು ಸ್ಥಳ ಮಹಜರಿಗೆ ಕರೆದೊಯ್ದಿದೆ. ಆರೋಪಿಯ ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ದೇವನಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಅಧಿಕಾರಿಗಳು ಪ್ರಮುಖ ಸ್ಥಳ ಮಹಜರು ಹಾಗೂ ಸಾಕ್ಷ್ಯ ಸಂಗ್ರಹಣೆ ನಡೆಸುವ ಸಾಧ್ಯತೆಯಿದೆ.
ಸಾರ್ವಜನಿಕರ ವಿರೋಧಕ್ಕೆ ಮಣಿದು ಸಂಪುಟದಲ್ಲಿ ಉದ್ಯಾನವನ ಸಂರಕ್ಷಣೆ ಕಾಯ್ದೆ ತಿದ್ದುಪಡಿ ವಿಧೇಯಕ ವಾಪಸ್ ಪಡೆದಿರುವುದಾಗಿ ಹೇಳಿ ರಾಜ್ಯ ಸರ್ಕಾರ ಬೆಂಗಳೂರಿನ ಜನರಿಗೆ ಮೋಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ‘ಬಿಲ್ ಮತ್ತೆ ತರುತ್ತೇವೆ’ ಎನ್ನುವ ಮೂಲಕ ಜನರ ಕಣ್ಣಿಗೆ ಮಂಕುಬೂದಿ ಎರಚುತ್ತಿದ್ದಾರೆ. ಡಿ.ಕೆ.ಶಿವಕುಮಾರ್ಗಿಂತ ಸೂಪರ್ ಸಿಎಂ ರೀತಿ ವರ್ತಿಸುತ್ತಿರುವ ಅವರ ಈ ಬಿಲ್ ಬಗ್ಗೆ ಸದನದಲ್ಲಿ ಯಾವುದೇ ಚರ್ಚೆಯಾಗಬಾರದು ಎಂದು ಸಚಿವರು ಆಗ್ರಹಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಈ ಪವಿತ್ರ ಪರ್ವದಿನವು ಪ್ರತಿಯೊಬ್ಬರ ಜೀವನದಲ್ಲೂ ಸಕಾರಾತ್ಮಕ ಶಕ್ತಿ ಮತ್ತು ಭಕ್ತಿಯನ್ನು ತುಂಬಲಿ ಎಂದು ಹಾರೈಸಿ ‘ಜೈ ಶ್ರೀಕೃಷ್ಣ’ ಎಂದಿದ್ದಾರೆ.
आप सभी को जन्माष्टमी की अनेकानेक शुभकामनाएं। भगवान श्रीकृष्ण के दिव्य संदेशों में नि:स्वार्थ कर्म की अद्भुत प्रेरणा निहित है, जिसने मानवता का निरंतर मार्गदर्शन किया है। उनकी भक्ति और उपासना को समर्पित यह पावन अवसर हर किसी के जीवन में सकारात्मक ऊर्जा और शक्ति का संचार करे, यही… pic.twitter.com/4Y3AmUg4Nm
— Narendra Modi (@narendramodi) September 4, 2026
ನವಿ ಮುಂಬೈನಿಂದ ಶ್ರೀನಗರಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನವು ಲ್ಯಾಂಡಿಂಗ್ ಬಳಿಕ ಪಾರ್ಕಿಂಗ್ ಮಾಡುವಾಗ ಏರ್ಪೋರ್ಟ್ನ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಂಪೂರ್ಣ ಸುರಕ್ಷಿತವಾಗಿದ್ದಾರೆ. ಶ್ರೀನಗರ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಸೆಪ್ಟೆಂಬರ್ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ರಂಗೇರಿದ್ದು, ಅಧ್ಯಕ್ಷ ಗಾದಿ ಮೇಲಿರುವ ಕೆ.ಎನ್. ರಾಜಣ್ಣ, ಶಿವಾನಂದ ಪಾಟೀಲ್ ಹಾಗೂ ಎಸ್. ರವಿ ಅವರ ತೀವ್ರ ಪೈಪೋಟಿ ನಡುವೆ ಶಾಸಕ ಲಕ್ಷ್ಮಣ್ ಸವದಿ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದಾರೆ.
Breaking News Today Live Updates in Kannada: ಲಾಲ್ಬಾಗ್ ಶಿಲಾ ರಚನೆ ಜಿಎಸ್ಐ ವರದಿ ಸಲ್ಲಿಸಲು ಹಾಗೂ ಹೆಬ್ಬಾಳ ಕೆರೆಗೆ ಟನಲ್ ರೋಡ್ನಿಂದ ಧಕ್ಕೆಯಾಗದಂತೆ ಪ್ರಾತ್ಯಕ್ಷಿಕೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಮತ್ತೊಂದೆಡೆ, ನಗರದ ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು, ಭಕ್ತರ ದರ್ಶನಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನ್ನು ತಿರುಪತಿಯಲ್ಲಿ ಸಾಮಾನ್ಯ ಕ್ಲರ್ಕ್ ಆಗಿ ಸೇರಿ ಟಿಟಿಡಿ ಉಪ ಇಒ ಆಗಿದ್ದ ಲೋಕನಾಥಮ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ 5 ಕೋಟಿ ರೂ.ಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 10:12 am, Fri, 4 September 26