Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು
Karnataka News Today Live Updates: ವಿಧಾನಪರಿಷತ್ ಚುನಾವಣೆ ಕಣ, ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ದಾಖಲೆ, ನಟ ದೊಡ್ಡಣ್ಣ ಸಾವಿನ ಸುಳ್ಳು ಸುದ್ದಿಗೆ ಸೈಬರ್ ಪೊಲೀಸ್ ಕೇಸ್ ಮತ್ತು ಟಿಎಂಸಿ ರಾಜಕೀಯ ಬಿಕ್ಕಟ್ಟು ಸೇರಿದಂತೆ ದೇಶ-ವಿದೇಶ, ಸಿನಿಮಾ, ಕ್ರೀಡೆಯ ಕ್ಷಣಕ್ಷಣದ ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಆರ್ಎಸ್ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಜಾರ್ಖಂಡ್ನ ರಾಂಚಿಯಲ್ಲಿರುವ ಆರ್ಎಸ್ಎಸ್ (RSS) ಕಚೇರಿಯ ಮೇಲೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾನೆ. ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದಾಳಿ ನಡೆಸಿ ತಪ್ಪಿಸಿಕೊಂಡಿರುವ ಆರೋಪಿಯ ಪತ್ತೆಗಾಗಿ ರಾಂಚಿ ಪೊಲೀಸರು ಸದ್ಯ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.
-
ಪ್ರಕಾಶ್ ರಾಜ್ ಸುದ್ದಿಗೋಷ್ಠಿ: ಪ್ರೆಸ್ ಕ್ಲಬ್ ಸುತ್ತ ಪೊಲೀಸ್ ಭದ್ರತೆ
ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ನಟ ಪ್ರಕಾಶ್ ರಾಜ್ ಹಮ್ಮಿಕೊಂಡಿರುವ ಸುದ್ದಿಗೋಷ್ಠಿ ಹಿನ್ನೆಲೆಯಲ್ಲಿ ವಿಧಾನ ಸೌಧ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು 25ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕೇವಲ ಪತ್ರಕರ್ತರಿಗೆ ಮಾತ್ರ ಪ್ರವೇಶವಿದ್ದು, ಪೊಲೀಸರು ಸೂಕ್ತ ತಪಾಸಣೆ ಮತ್ತು ಪರಿಶೀಲನೆ ನಡೆಸಿದ ಬಳಿಕವಷ್ಟೇ ಸುದ್ದಿಗೋಷ್ಠಿಗೆ ಪ್ರವೇಶಿಸಲು ಅವಕಾಶ ನೀಡುತ್ತಿದ್ದಾರೆ.
-
-
ಬೆಳಗಾವಿಯಲ್ಲಿ ಒಣಗುವ ಹಂತದಲ್ಲಿ ಭತ್ತದ ಬೆಳೆ
ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳಗಾವಿ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಎಕರೆಗೆ 40-50 ಸಾವಿರ ರೂ. ಖರ್ಚು ಮಾಡಿ ಬಿತ್ತಿದ್ದ ಇಂದ್ರಾಣಿ, ಬಾಸೂಮತಿ ಭತ್ತದ ಪೈರುಗಳು ತೇವಾಂಶವಿಲ್ಲದೆ ಒಣಗುತ್ತಿವೆ. ಮುಂದಿನ ನಾಲ್ಕು ದಿನಗಳಲ್ಲಿ ಮಳೆಯಾಗದಿದ್ದರೆ ಬೆಳೆ ಸಂಪೂರ್ಣ ನಾಶವಾಗಲಿದೆ. ಜಿಲ್ಲೆಯಲ್ಲಿ ಸದ್ಯ ಶೇ 50.76ರಷ್ಟು ಮಾತ್ರ ಬಿತ್ತನೆಯಾಗಿದ್ದು, ಯಳ್ಳೂರ, ಶಹಾಪುರ ಭಾಗದ ಅನ್ನದಾತರು ಆತಂಕಗೊಂಡಿದ್ದಾರೆ.
-
ಶಾಸಕ ಜಿ.ಎಸ್. ಪಾಟೀಲ್ಗೆ ಸಚಿವ ಸ್ಥಾನಕ್ಕಾಗಿ ‘ಸ್ವಾಭಿಮಾನ ನಡಿಗೆ’ ಪಾದಯಾತ್ರೆ
ರೋಣ ಶಾಸಕ ಜಿ.ಎಸ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಮಗ ಮಿಥುನ್ ಪಾಟೀಲ್ ನೇತೃತ್ವದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಎರಡು ದಿನಗಳ ‘ಸ್ವಾಭಿಮಾನ ನಡಿಗೆ’ ಪಾದಯಾತ್ರೆ ಆರಂಭಿಸಿದ್ದಾರೆ. ಸುಮಾರು 20 ಮಠಾಧಿಪತಿಗಳು ಚಾಲನೆ ನೀಡಿದ ಈ ಪಾದಯಾತ್ರೆಯಲ್ಲಿ 2 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಇಂದು ನೆಲಮಂಗಲದಲ್ಲಿ ತಂಗಿ, ನಾಳೆ ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಲಿದೆ.
ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾನೂನು ಬಿಸಿ ಮುಟ್ಟಿದೆ. ರಾಷ್ಟ್ರೀಯ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ನ (TMC) ಬಿಕ್ಕಟ್ಟು ತಾರಕಕ್ಕೇರಿದ್ದು, ಬಂಡಾಯ ಸಂಸದರು ವಿಲೀನಗೊಳ್ಳಲಿರುವ NCPI ಪಕ್ಷಕ್ಕೆ ಜ್ಯೋತಿಪ್ರಕಾಶ್ ಚಟರ್ಜಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - Jun 17,2026 9:37 AM




