AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಭಾರೀ ದುರಂತ: ಬಂಡೆ ಕುಸಿದು 7 ಜನ ಸಾವು

Karnataka News Today Live Updates: ಅಯೋಧ್ಯೆ ರಾಮ ಮಂದಿರ ಹುಂಡಿ ಹಣ ದುರ್ಬಳಕೆ ಪ್ರಕರಣ ಸಂಬಂಧ SIT ತನಿಖೆ, ರಾಜ್ಯದ ಹವಾಮಾನ, ಕರ್ನಾಟಕ ಸಚಿವ ಸಂಪುಟ ಸಭೆ, ಕರ್ನಾಟಕ ರಾಜಕೀಯ, ದೇಶ-ಅಂತಾರಾಷ್ಟ್ರೀಯ, ಸಿನೆಮಾ, ಕ್ರೀಡೆ ಸೇರಿ ಇಂದಿನ ಪ್ರಮುಖ ಸುದ್ದಿಗಳು ಇಲ್ಲಿವೆ.

TV9 Kannada News Live: ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಭಾರೀ ದುರಂತ: ಬಂಡೆ ಕುಸಿದು 7 ಜನ ಸಾವು
ಬಂಡೆ ಕುಸಿದು ಏಳು ಜನ ಸಾವುImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 02, 2026 | 9:53 AM

Share

LIVE NEWS & UPDATES

  • 02 Jul 2026 09:53 AM (IST)

    ಜುಲೈ 6ರಂದು ಶ್ರೀರಾಮ ಮಂದಿರ ಟ್ರಸ್ಟ್​​ ಸಭೆ

    ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಸಂಬಂಧ ಜುಲೈ 6ರಂದು ಶ್ರೀರಾಮ ಮಂದಿರ ಟ್ರಸ್ಟ್​​ ಮಹತ್ವದ ಸಭೆ ಕರೆದಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಮುಖರು ಇದರಲ್ಲಿ ಭಾಗಿಯಾಗಲಿದ್ದು, ಚಂಪತ್ ರಾಯ್, ಡಾ.ಅನಿಲ್ ಮಿಶ್ರಾ ರಾಜೀನಾಮೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬೈಲಾಗಳ ಪ್ರಕಾರ ಇಬ್ಬರ ರಾಜೀನಾಮೆ ಅಂಗೀಕಾರದ ಬಗ್ಗೆ ತೀರ್ಮಾನ ನಡೆಯಲಿದೆ. ರಾಜೀನಾಮೆ ಅಂಗೀಕಾರಕ್ಕೆ 2/3ರಷ್ಟು ಸದಸ್ಯರ ಬಹುಮತ ಕಡ್ಡಾಯವಾಗಿದ್ದು, ಬೈಲಾ ಪ್ರಕಾರ ಪದಾಧಿಕಾರಿಗಳನ್ನು ತೆಗೆಯಲು ಮಾತ್ರ ಅವಕಾಶ ಇದೆ. ಪ್ರಸ್ತುತ ಟ್ರಸ್ಟ್‌ನ 14 ಸದಸ್ಯರಲ್ಲಿ ಇಬ್ಬರು ಈಗಾಗಲೇ ರಾಜೀನಾಮೆ ಹಿನ್ನೆಲೆ ಬಾಕಿ ಉಳಿದ 12 ಟ್ರಸ್ಟಿಗಳ ಅಭಿಪ್ರಾಯ, ಮತ ನಿರ್ಣಾಯಕ ಆಗಲಿದೆ.

  • 02 Jul 2026 09:16 AM (IST)

    ಬಂಡೆ ಕುಸಿದು ಏಳು ಜನ ಸಾವು

    ಬಂಡೆ ಕುಸಿದು ಏಳು ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್​​ನಲ್ಲಿ ನಡೆದಿದೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

  • 02 Jul 2026 09:09 AM (IST)

    ರಾಮ ಮಂದಿರ ಟ್ರಸ್ಟ್‌ನ ಐದು ವರ್ಷಗಳ ಲೆಕ್ಕಪರಿಶೋಧನೆ

    ರಾಮ ಮಂದಿರ ಹುಂಡಿ ಎಣಿಕೆ ಕಳ್ಳತನ ಪ್ರಕರಣ ಸಂಬಂಧ ಎಸ್​​ಐಟಿ ಟ್ರಸ್ಟ್‌ನ ಐದು ವರ್ಷಗಳ ಲೆಕ್ಕಪರಿಶೋಧನೆಗೆ ಮುಂದಾಗಿದೆ. ಪ್ರತಿಯೊಂದು ಹಣಕಾಸಿನ ವಹಿವಾಟನ್ನು ತನಿಖೆಗೆ ಒಳಪಡಿಸಲಾಗಿದ್ದು, ಪರಿಶೀಲನೆ ವೇಳೆ ಟ್ರಸ್ಟ್‌ ಅಧಿಕಾರಿಗಳ ಬಾಗಿ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹಿರಿಯ ಟ್ರಸ್ಟ್ ಅಧಿಕಾರಿಗಳು ಕಳ್ಳತನದಲ್ಲಿ ಭಾಗಿ ಬಗ್ಗೆ ಎಸ್‌ಐಟಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದ್ದು, ಜುಲೈ 15ರಂದು ಎಸ್‌ಐಟಿಯಿಂದ ಈ ಸಂಬಂಧ ಯೋಗಿ ಸರ್ಕಾರಕ್ಕೆ ವರದಿ ಸಲ್ಲಿಕೆ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಎಸ್‌ಐಟಿ ಅಧಿಕಾರಿಗಳು ನಿರಂತರವಾಗಿ ಅಯೋಧ್ಯೆಯಲ್ಲಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.

ರಾಮ ಮಂದಿರದ ಹುಂಡಿ ಹಣ ದುರ್ಬಳಕೆ ಸಂಬಂಧ ಎಸ್​​ಐಟಿ ತನಿಖೆ ಚುರುಕುಗೊಳಿಸಿದೆ. ಮತ್ತೊಂದೆಡೆ ಸಿಎಂ ಡಿ.ಕೆ. ಶಿವಕುಮಾರ್​​ ನೇತೃತ್ವದಲ್ಲಿ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ. ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಶುರುವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್​​ ಅಲರ್ಟ್​​ ಘೋಷಿಸಲಾಗಿದೆ. ಇವೆಲ್ಲವೂ ಸೇರಿದಂದತೆ ರಾಜ್ಯ, ದೇಶ, ಸಿನಿಮಾ ಮತ್ತು ಕ್ರೀಡಾ ಸುದ್ದಿಗಳ ಇಂದಿನ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಸಿಗಲಿದೆ.

Published On - Jul 02,2026 9:08 AM

Follow Us