TV9 Kannada News Live: ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಭಾರಿ ದುರಂತ: ಬಂಡೆ ಕುಸಿದು 7 ಜನ ಸಾವು

Karnataka News Today Live Updates: ಅಯೋಧ್ಯೆ ರಾಮ ಮಂದಿರ ಹುಂಡಿ ಹಣ ದುರ್ಬಳಕೆ ಪ್ರಕರಣ ಸಂಬಂಧ SIT ತನಿಖೆ, ರಾಜ್ಯದ ಹವಾಮಾನ, ಕರ್ನಾಟಕ ಸಚಿವ ಸಂಪುಟ ಸಭೆ, ಕರ್ನಾಟಕ ರಾಜಕೀಯ, ದೇಶ-ಅಂತಾರಾಷ್ಟ್ರೀಯ, ಸಿನೆಮಾ, ಕ್ರೀಡೆ ಸೇರಿ ಇಂದಿನ ಪ್ರಮುಖ ಸುದ್ದಿಗಳು ಇಲ್ಲಿವೆ.

TV9 Kannada News Live: ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಭಾರಿ ದುರಂತ: ಬಂಡೆ ಕುಸಿದು 7 ಜನ ಸಾವು
ಬಂಡೆ ಕುಸಿದು ಏಳು ಜನ ಸಾವು
Image Credit source: Tv9 Kannada

Updated on: Jul 02, 2026 | 11:21 AM

LIVE NEWS & UPDATES

  • 02 Jul 2026 11:21 AM (IST)

    ನೂತನ ಎಂಎಲ್ ಸಿಗಳ ಪ್ರಮಾಣವಚನ

    ನೂತನ ಎಂಎಲ್ ಸಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ಸಿಎಂ ಡಿಕೆಶಿ, ಡಿಸಿಎಂ ಪರಮೇಶ್ವರ್​​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

  • 02 Jul 2026 11:18 AM (IST)

    ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

    ಕಲ್ಲುಕ್ವಾರಿ ದುರಂತಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. 7 ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ.

  • 02 Jul 2026 11:08 AM (IST)

    ಮೈಸೂರು ಜಿಲ್ಲಾ ನ್ಯಾಯಲಯಕ್ಕೆ ಬಾಂಬ್​​ ಬೆದರಿಕೆ

    ರಾಜ್ಯದಲ್ಲಿ ನ್ಯಾಯಾಲಯಗಳಿಗೆ ಬಾಂಬ್​​ ಬೆದರಿಕೆ ಸಂದೇಶ ಪ್ರಕರಣಗಳು ಮುಂದುವರಿದಿದ್ದು, ಇದೀಗ ಮೈಸೂರು ಜಿಲ್ಲಾ ನ್ಯಾಯಲಯಕ್ಕೆ ಇ- ಮೇಲ್​ ಮೂಲಕ ಬಾಂಬ್​ ಬೆದರಿಕೆ ಹಾಕಲಾಗಿದೆ. ಮೈಸೂರುರಿನ ಚಾಮರಾಜಪುರಂನಲ್ಲಿ ಇರುವ ಇದೇ ನ್ಯಾಯಾಲಯದಲ್ಲಿ 8 ವರ್ಷದ ಹಿಂದೆ ಶೌಚಾಲಯದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವಾಗಿತ್ತು.

  • 02 Jul 2026 11:05 AM (IST)

    ಕಾವೇರಿ ಕ್ವಾರಿಗೆ ಸೋಕೊ ತಂಡ ಭೇಟಿ

    ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ದುರಂತ ಸಂಬಂಧ ಇನ್ನಷ್ಟು ಮಾಹಿತಿ ಬಯಲಾಗಿದೆ. ಬಸವೇಶ್ವರ ಕ್ವಾರಿಯಿಂದ ಕಾವೇರಿ ಕಲ್ಲು ಕ್ವಾರಿಗೆ ಬಂಡೆ ಬಿದ್ದಿದ್ದು, ಎರಡೂ ಕ್ವಾರಿಗಳು ಅಕ್ಕ-ಪಕ್ಕ ಇದೆ. ಜೆಸಿಬಿ ಮೂಲಕ ಒಂದು ಮೃತದೇಹ ಹೊರಕ್ಕೆ ತೆಗೆಯಲಾಗಿದ್ದು, ಘಟನಾ ಸ್ಥಳದಲ್ಲಿನ 6 ಮೃತ ದೇಹಕ್ಕಾಗಿ ಕಾರ್ಯಚರಣೆ ಮುಂದುವರಿದಿದೆ. ಕಾವೇರಿ ಕ್ವಾರಿಗೆ ಸೋಕೊ ತಂಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

  • 02 Jul 2026 10:59 AM (IST)

    ‘ಕಲ್ಲು ಕ್ವಾರಿಯಲ್ಲಿ ದುರಂತಕ್ಕೆ ಅಧಿಕಾರಿಗಳೇ ಹೊಣೆ’

    ಮಾದಪಟ್ಟಣ ಬಳಿಯ ಕಲ್ಲು ಕ್ವಾರಿಯಲ್ಲಿ ದುರಂತಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳೇ ಹೊಣೆ ಎಂದು ಯಶವಂತಪುರ ಶಾಸಕ ಸೋಮಶೇಖರ್ ಹೇಳಿದ್ದಾರೆ. ನನ್ನ ಕ್ಷೇತ್ರದಲ್ಲಿ ಅಕ್ರಮ ಕ್ರಷರ್ ನಡೆಸ್ತಿದ್ದಾರೆ. ಗರ್ಭಿಣಿ ಚಿರತೆ ಸತ್ತಾಗಲೇ ಅಕ್ರಮದ ಬಗ್ಗೆ ನಾನು ಧ್ವನಿ ಎತ್ತಿದ್ದೆ. ಅಸೆಂಬ್ಲಿಯಲ್ಲಿಯೂ ಅಕ್ರಮ ಗಣಿಗಾರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಕಲ್ಲುಕ್ವಾರಿ ದುರಂತದಲ್ಲಿ 8 ಮಂದಿ‌ ಮೃತಪಟ್ಟಿರುವ ಮಾಹಿತಿ ಇದೆ. ಮೃತಪಟ್ಟವರು ಎಲ್ಲಿಯವರು ಎಂಬ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ. ಮೃತರ ಕುಟುಂಬಕ್ಕೆ ಕ್ರಷರ್ ಮಾಲೀಕರಿಂದಲೇ ತಲಾ 1 ಕೋಟಿ ಪರಿಹಾರ ಕೊಡಿಸಬೇಕು. ದುರಂತದ ಬಗ್ಗೆ ಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ಮಾಡುತ್ತೇನೆ ಎಂದವರು ತಿಳಿಸಿದ್ದಾರೆ.

  • 02 Jul 2026 10:31 AM (IST)

    ಅಕ್ರಮವಾಗಿ ಕೇರಳ ಲಾಟರಿ ಮಾರುತ್ತಿದ್ದ ಇಬ್ಬರ ಬಂಧನ

    ಅಕ್ರಮವಾಗಿ ಕೇರಳ ಲಾಟರಿ ಮಾರುತ್ತಿದ್ದ ಇಬ್ಬರ ಬಂಧಿಸಿರುವ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಕೇರಳ ಲಾಟರಿ ಜಪ್ತಿ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ಹಾಗೂ ಸಂತೇಮರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಗುಂಡ್ಲುಪೇಟೆಯಲ್ಲಿ 55 ಸಾವಿರ ಮೌಲ್ಯದ 1,100 ಲಾಟರಿ ಟಿಕೆಟ್, ಸಂತೇಮರಹಳ್ಳಿ 57 ಸಾವಿರ ಮೌಲ್ಯದ 1,140 ಲಾಟರಿ ಟಿಕೆಟ್ ವಶಕ್ಕೆ ಪಡೆಯಲಾಗಿದೆ. ಮೈಸೂರು ಮೂಲದ ಚಿನ್ನತಂಬಿನಾಯ್ಡು (86) ಹಾಗೂ ಯಳಂದೂರಿನ ಮಹೇಶ್ (25) ಬಂಧಿತ ಆರೋಪಿಗಳಾಗಿದ್ದಾರೆ.

  • 02 Jul 2026 09:53 AM (IST)

    ಜುಲೈ 6ರಂದು ಶ್ರೀರಾಮ ಮಂದಿರ ಟ್ರಸ್ಟ್​​ ಸಭೆ

    ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಸಂಬಂಧ ಜುಲೈ 6ರಂದು ಶ್ರೀರಾಮ ಮಂದಿರ ಟ್ರಸ್ಟ್​​ ಮಹತ್ವದ ಸಭೆ ಕರೆದಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಮುಖರು ಇದರಲ್ಲಿ ಭಾಗಿಯಾಗಲಿದ್ದು, ಚಂಪತ್ ರಾಯ್, ಡಾ.ಅನಿಲ್ ಮಿಶ್ರಾ ರಾಜೀನಾಮೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬೈಲಾಗಳ ಪ್ರಕಾರ ಇಬ್ಬರ ರಾಜೀನಾಮೆ ಅಂಗೀಕಾರದ ಬಗ್ಗೆ ತೀರ್ಮಾನ ನಡೆಯಲಿದೆ. ರಾಜೀನಾಮೆ ಅಂಗೀಕಾರಕ್ಕೆ 2/3ರಷ್ಟು ಸದಸ್ಯರ ಬಹುಮತ ಕಡ್ಡಾಯವಾಗಿದ್ದು, ಬೈಲಾ ಪ್ರಕಾರ ಪದಾಧಿಕಾರಿಗಳನ್ನು ತೆಗೆಯಲು ಮಾತ್ರ ಅವಕಾಶ ಇದೆ. ಪ್ರಸ್ತುತ ಟ್ರಸ್ಟ್‌ನ 14 ಸದಸ್ಯರಲ್ಲಿ ಇಬ್ಬರು ಈಗಾಗಲೇ ರಾಜೀನಾಮೆ ಹಿನ್ನೆಲೆ ಬಾಕಿ ಉಳಿದ 12 ಟ್ರಸ್ಟಿಗಳ ಅಭಿಪ್ರಾಯ, ಮತ ನಿರ್ಣಾಯಕ ಆಗಲಿದೆ.

  • 02 Jul 2026 09:16 AM (IST)

    ಬಂಡೆ ಕುಸಿದು ಏಳು ಜನ ಸಾವು

    ಬಂಡೆ ಕುಸಿದು ಏಳು ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್​​ನಲ್ಲಿ ನಡೆದಿದೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.  ಇನ್ನಷ್ಟು ಮಾಹಿತಿ

  • 02 Jul 2026 09:09 AM (IST)

    ರಾಮ ಮಂದಿರ ಟ್ರಸ್ಟ್‌ನ ಐದು ವರ್ಷಗಳ ಲೆಕ್ಕಪರಿಶೋಧನೆ

    ರಾಮ ಮಂದಿರ ಹುಂಡಿ ಎಣಿಕೆ ಕಳ್ಳತನ ಪ್ರಕರಣ ಸಂಬಂಧ ಎಸ್​​ಐಟಿ ಟ್ರಸ್ಟ್‌ನ ಐದು ವರ್ಷಗಳ ಲೆಕ್ಕಪರಿಶೋಧನೆಗೆ ಮುಂದಾಗಿದೆ. ಪ್ರತಿಯೊಂದು ಹಣಕಾಸಿನ ವಹಿವಾಟನ್ನು ತನಿಖೆಗೆ ಒಳಪಡಿಸಲಾಗಿದ್ದು, ಪರಿಶೀಲನೆ ವೇಳೆ ಟ್ರಸ್ಟ್‌ ಅಧಿಕಾರಿಗಳ ಬಾಗಿ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹಿರಿಯ ಟ್ರಸ್ಟ್ ಅಧಿಕಾರಿಗಳು ಕಳ್ಳತನದಲ್ಲಿ ಭಾಗಿ ಬಗ್ಗೆ ಎಸ್‌ಐಟಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದ್ದು, ಜುಲೈ 15ರಂದು ಎಸ್‌ಐಟಿಯಿಂದ ಈ ಸಂಬಂಧ ಯೋಗಿ ಸರ್ಕಾರಕ್ಕೆ ವರದಿ ಸಲ್ಲಿಕೆ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಎಸ್‌ಐಟಿ ಅಧಿಕಾರಿಗಳು ನಿರಂತರವಾಗಿ ಅಯೋಧ್ಯೆಯಲ್ಲಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.

ರಾಮ ಮಂದಿರದ ಹುಂಡಿ ಹಣ ದುರ್ಬಳಕೆ ಸಂಬಂಧ ಎಸ್​​ಐಟಿ ತನಿಖೆ ಚುರುಕುಗೊಳಿಸಿದೆ. ಮತ್ತೊಂದೆಡೆ ಸಿಎಂ ಡಿ.ಕೆ. ಶಿವಕುಮಾರ್​​ ನೇತೃತ್ವದಲ್ಲಿ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ. ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಶುರುವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್​​ ಅಲರ್ಟ್​​ ಘೋಷಿಸಲಾಗಿದೆ. ಇವೆಲ್ಲವೂ ಸೇರಿದಂದತೆ ರಾಜ್ಯ, ದೇಶ, ಸಿನಿಮಾ ಮತ್ತು ಕ್ರೀಡಾ ಸುದ್ದಿಗಳ ಇಂದಿನ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಸಿಗಲಿದೆ.

🔴LIVE | TV9 KANNADA NEWS | ಟಿವಿ9 ಕನ್ನಡ ನ್ಯೂಸ್ ಲೈವ್ | TV9 KANNADA NEWS LIVE

Published On - 9:08 am, Thu, 2 July 26

Follow Us