TV9 Kannada News Live: ಟ್ರ್ಯಾಲಿ ಬ್ಯಾಗ್‌ನಲ್ಲಿ ಸಿಕ್ಕಿತು ಬರೋಬ್ಬರಿ 21 ಕೋಟಿಯ ಡ್ರಗ್ಸ್‌! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಮುಂಬೈ ಸರಣಿ ಹತ್ಯಾಕಾಂಡದ ಭೀಕರ ಸಂಚು ಭೇದಿಸಿದ ಪೊಲೀಸರು. ಇತ್ತ ಬೆಂಗಳೂರಿನಲ್ಲಿ ಮೊದಲ ದಿನವೇ 11 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ ದಾಖಲೆ ಬರೆಯಲಾಗಿದೆ. ಪ್ರಿಯಾ ಸುದೀಪ್ ಅವರಿಂದ ಹೊಸ ಕಥೆಗಾರರಿಗೆ ಸುವರ್ಣ ಅವಕಾಶ. ದೇಶ-ವಿದೇಶ, ಸಿನಿಮಾ ಹಾಗೂ ರಾಜ್ಯದ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.

TV9 Kannada News Live: ಟ್ರ್ಯಾಲಿ ಬ್ಯಾಗ್‌ನಲ್ಲಿ ಸಿಕ್ಕಿತು ಬರೋಬ್ಬರಿ 21 ಕೋಟಿಯ ಡ್ರಗ್ಸ್‌! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಮಾದಕ ವಸ್ತುಗಳು ಸೀಜ್

Updated on: Jun 29, 2026 | 11:45 AM

LIVE NEWS & UPDATES

  • 29 Jun 2026 11:37 AM (IST)

    ಲಗೇಜ್ ಬ್ಯಾಗ್‌ನಲ್ಲಿ ತರುತ್ತಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

    ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಲಗೇಜ್ ಟ್ರ್ಯಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟು ಡ್ರಗ್ಸ್ ಸಾಗಿಸುತ್ತಿದ್ದ ಮೂವರು ನೈಜೀರಿಯಾ ಮೂಲದ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ (MDMA) ಕ್ರಿಸ್ಟಲ್, 4 ಮೊಬೈಲ್ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

  • 29 Jun 2026 11:12 AM (IST)

    ಪಾಕ್-ಅಫ್ಘಾನ್ ಗಡಿಯಲ್ಲಿ ಸೇನಾ ದಾಳಿ: 35ಕ್ಕೂ ಹೆಚ್ಚು ನಾಗರಿಕರ ಸಾವು!

    ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದಿದ್ದು, ಪಾಕ್ ನಡೆಸಿದ ಭೂ ಕಾರ್ಯಾಚರಣೆಯಲ್ಲಿ ಮಕ್ಕಳು, ವೃದ್ಧರು ಸೇರಿ 35ಕ್ಕೂ ಹೆಚ್ಚು ನಾಗರಿಕರು ಬಲಿಯಾಗಿದ್ದಾರೆ. ಕರಾಚಿ ದಾಳಿಗೆ ಪ್ರತೀಕಾರವಾಗಿ ನಡೆದ ಈ ದಾಳಿಗೆ ಅಫ್ಘಾನಿಸ್ತಾನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಸ್ಲಾಮಾಬಾದ್ ಮತ್ತು ಕಾಬೂಲ್ ನಡುವಿನ ಗಡಿ ಉದ್ವಿಗ್ನತೆ ಅಪಾಯಕಾರಿ ಮಟ್ಟಕ್ಕೆ ತಲುಪಿದೆ.

  • 29 Jun 2026 11:11 AM (IST)

    ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ಎಂಬಿಎ ವಿದ್ಯಾರ್ಥಿ ದುರ್ಮರಣ!

    ಶಿರಾ ತಾಲೂಕಿನ ಬಡಮಾರನಹಳ್ಳಿಯ ಶಶಿಕುಮಾರ್ (24) ಎಂಬಿಎ ವಿದ್ಯಾರ್ಥಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಓದುತ್ತಿದ್ದ, ಪೊಲೀಸ್ ಆಗುವ ಕನಸು ಹೊತ್ತಿದ್ದ ದಂಪತಿಯ ಏಕೈಕ ಮಗ ನಿನ್ನೆ ರಾತ್ರಿ ಬೆಂಗಳೂರಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • 29 Jun 2026 11:10 AM (IST)

    ಫಿಫಾ ವಿಶ್ವಕಪ್ 2026: ರೌಂಡ್ ಆಫ್ 32 ಹಂತಕ್ಕೆ ಲಗ್ಗೆ ಇಟ್ಟ ಮೆಸ್ಸಿ ಪಡೆ!

    48 ತಂಡಗಳೊಂದಿಗೆ ಆರಂಭವಾದ ಫಿಫಾ ವಿಶ್ವಕಪ್ ರೋಚಕ ಘಟ್ಟ ತಲುಪಿದ್ದು, ಅರ್ಜೆಂಟೀನಾ ಸೇರಿದಂತೆ 32 ತಂಡಗಳು ಮುಂದಿನ ಸುತ್ತಿಗೆ ಲಗ್ಗೆ ಇಟ್ಟಿವೆ. ಈ ನಾಕೌಟ್ ಹಂತದಲ್ಲಿ ಗೆಲ್ಲುವ ತಂಡಗಳು ರೌಂಡ್ ಆಫ್ 16 ಪ್ರವೇಶಿಸಲಿದ್ದು, ಲಿಯೋನೆಲ್ ಮೆಸ್ಸಿ ಪಡೆಯ ಫೈನಲ್ ಹಾದಿ ಸುಲಭವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಮತ್ತಷ್ಟು ಓದಿ

  • 29 Jun 2026 10:35 AM (IST)

    ಚಲಿಸುವ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪಾರು!

    ಬೆಳಗಾವಿಯ ರಾಮದೇವ ಹೋಟೆಲ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ನಾಲ್ಕೂ ಜನರು ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಷಣಾರ್ಧದಲ್ಲೇ ಕಾರು ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

  • 29 Jun 2026 10:34 AM (IST)

    ಮಂಗಳೂರು: ಹೆದ್ದಾರಿಯಲ್ಲಿ ಸಿನೆಮಾ ಶೈಲಿ ದರೋಡೆ!

    ಮಹಾರಾಷ್ಟ್ರದಿಂದ ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಕೇರಳದ ಚಿನ್ನದ ವ್ಯಾಪಾರಿ ವಿಕಾಸ್ ಕುಟುಂಬವನ್ನು ಬೈಕಂಪಾಡಿ ಹೆದ್ದಾರಿಯಲ್ಲಿ ಕಾರುಗಳಿಂದ ಅಡ್ಡಗಟ್ಟಿದ ದರೋಡೆಕೋರರು, ಅವರ ಪತ್ನಿ-ಮಗನನ್ನು ಬೆದರಿಸಿ ಕಾರಿನಲ್ಲಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ನಗದಿನೊಂದಿಗೆ ಪರಾರಿಯಾಗಿದ್ದಾರೆ.

  • 29 Jun 2026 10:12 AM (IST)

    ಭಾರಿ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಅಸ್ಸಾಂ: 22,000ಕ್ಕೂ ಹೆಚ್ಚು ಜನರಿಗೆ ಸಂಕಷ್ಟ!

    ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ಧೆಮಾಜಿ, ದಿಬ್ರುಗಢ ಸೇರಿದಂತೆ ಆರು ಜಿಲ್ಲೆಗಳ 22,000ಕ್ಕೂ ಹೆಚ್ಚು ಜನರ ಜೀವನ ಅಸ್ತವ್ಯಸ್ತಗೊಂಡಿದ್ದು, ಆಸ್ತಿಪಾಸ್ತಿ ನಷ್ಟವಾಗಿದೆ. ಮನೆಗಳನ್ನು ಕಳೆದುಕೊಂಡ ಕುಟುಂಬಗಳು ಬೀದಿಗೆ ಬಿದ್ದಿದ್ದು, ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ 15,000 ಜನರನ್ನು ವಿಷದ ಗುಳಿಗೆ ನೀಡಿ ಕೊಲ್ಲಲು ಸಂಚು ರೂಪಿಸಿದ್ದ ಬಿಬಿಎ ಪದವೀಧರ ಫಯ್ಯಾಜ್ ಪ್ರೇಮ್‌ಜಿಯನ್ನು ಪೊಲೀಸರು 14,900 ವಿಷದ ಕ್ಯಾಪ್ಸೂಲ್‌ಗಳೊಂದಿಗೆ ಬಂಧಿಸಿ, ಭೀಕರ ಹತ್ಯಾಕಾಂಡವನ್ನು ಕೂದಲೆಳೆಯ ಅಂತರದಲ್ಲಿ ತಪ್ಪಿಸಿದ್ದಾರೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ ದಾಖಲೆಯ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಹಾಕಲಾಗಿದ್ದು, ಶೇ. 96.4 ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನು ಸ್ಯಾಂಡಲ್‌ವುಡ್‌ನಲ್ಲಿ ನಟ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ತಮ್ಮ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಮೂಲಕ ಹೊಸ ಕಥೆಗಾರರಿಗೆ ಮುಕ್ತ ವೇದಿಕೆ ಕಲ್ಪಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

 

 

 

Published On - 10:08 am, Mon, 29 June 26

Follow Us