AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಈ ಹೊತ್ತಿನ ಪ್ರಮುಖ ಅಪ್​ಡೇಟ್ಸ್

ಬೆಂಗಳೂರಿನಲ್ಲಿ ಪೀಣ್ಯ ಫ್ಲೈಓವರ್​ನಲ್ಲಿ ಸಂಚಾರಕ್ಕೆ ಇಂದಿನಿಂದ 4 ದಿನಗಳ ಕಾಲ ನಿರ್ಬಂಧ ಹೇರಲಾಗಿದೆ. ಎಲ್​ಪಿಜಿ ದರ ಏರಿಕೆಯಿಂದ ಹೋಟೆಲ್​ಗಳ ಊಟ-ತಿಂಡಿ ದರವೂ ಏರಿಕೆಯಾಗಿದೆ. ಆಟೋ ದರ ಏರಿಕೆಗೆ ಆಗ್ರಹ ವ್ಯಕ್ತವಾಗಿದೆ. ಬೆಂಗಳೂರು ಹಾಗೂ ಕರ್ನಾಟಕದ ಇಂದಿನ ಪ್ರಮುಖ ವಿದ್ಯಮಾನಗಳ ಗುಚ್ಛ ಇಲ್ಲಿದೆ.

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಈ ಹೊತ್ತಿನ ಪ್ರಮುಖ ಅಪ್​ಡೇಟ್ಸ್
ಸಾಂದರ್ಭಿಕ ಚಿತ್ರImage Credit source: Google Gemini
ಗಣಪತಿ ಶರ್ಮಾ
|

Updated on:May 05, 2026 | 10:15 AM

Share

ಬೆಂಗಳೂರು, ಮೇ 5: ಬೆಂಗಳೂರು (Bengaluru) ಇನ್ನಷ್ಟು ದುಬಾರಿ ದುನಿಯಾ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಬಲವಾಗಲು ಕಾರಣ ಇದೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯ ಕಾರಣ ಹೋಟೆಲ್​ಗಳು ಊಟ-ತಿಂಡಿ, ಕಾಪಿ-ಚಹಾ ದರ ಏರಿಕೆ ಮಾಡಿವೆ. ಮತ್ತೊಂದೆಡೆ, ಆಟೋ ದರ ಹೆಚ್ಚಳಕ್ಕೆ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲದರ ಮಧ್ಯೆ, ಪೀಣ್ಯ ಫ್ಲೈಓವರ್​ನಲ್ಲಿ ಇಂದಿನಿಂದ (ಮೇ 5) 4 ದಿನ ಸಂಚಾರ ನಿರ್ಬಂಧ ಇದ್ದು, ಗೊರಗುಂಟೆ ಪಾಳ್ಯ ಸಹಿತ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ.

ಹೋಟೆಲ್ ಗ್ರಾಹಕರಿಗೆ ದರ ಏರಿಕೆಯ ಶಾಕ್

ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ 20ರಷ್ಟು ಹೆಚ್ಚಳವಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 3,154 ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹೋಟೆಲ್ ಮಾಲೀಕರು ಮುಂದಾಗಿದ್ದಾರೆ. ಊಟ, ದೋಸೆ ಹಾಗೂ ಕಾಫಿ-ಟೀ ಬೆಲೆಗಳಲ್ಲಿ 5 ರಿಂದ 20 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಅನಿವಾರ್ಯವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೋಟೆಲ್ ಉದ್ಯಮಿಗಳು ತಿಳಿಸಿದ್ದಾರೆ.

ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್!

ಕೇಬಲ್ ದುರಸ್ತಿ ಮತ್ತು ಲೋಡ್ ಟೆಸ್ಟಿಂಗ್ ಕಾಮಗಾರಿಯ ಕಾರಣ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಮೇ 8ರ ವರೆಗೆ ಸಂಚಾರ ನಿಷೇಧಿಸಲಾಗಿದೆ. ಇದರ ಪರಿಣಾಮವಾಗಿ ಗೊರಗುಂಟೆ ಪಾಳ್ಯ ಸೇರಿದಂತೆ ತುಮಕೂರು, ನೆಲಮಂಗಲ ಕಡೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಆಟೋ ಪ್ರಯಾಣಿಕರಿಗೆ ತಟ್ಟಲಿದೆ ದರ ಏರಿಕೆ ಬಿಸಿ

ಆಟೋ LPG ದರ ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆಯಾಗಿರುವುದರಿಂದ ಆಟೋ ಚಾಲಕರು ಪ್ರಯಾಣ ದರ ಹೆಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (2 ಕಿ.ಮೀ ಗೆ) 36 ರೂ. ಹಾಗೂ ನಂತರದ ಪ್ರತಿ ಕಿ.ಮೀ ಗೆ 18 ರೂ. ಇದೆ. ಇದನ್ನು ಕ್ರಮವಾಗಿ 50 ರೂ. ಹಾಗೂ 25 ರೂ. ಏರಿಸಬೇಕೆಂದು ಆಟೋ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Tue, 5 May 26

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?