AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಇಂಪ್ಯಾಕ್ಟ್: ಬಿಎಂಟಿಸಿಗೆ ಬಂತು 100 ಹೊಸ ಎಲೆಕ್ಟ್ರಿಕ್ ಬಸ್​, ಇವುಗಳ ವಿಶೇಷತೆ ತಿಳಿಯಿರಿ

ಟಿವಿ9 ಡಿಜಿಟಲ್​ ವರದಿ ಪ್ರಸಾರ ಬೆನ್ನಲೆ ನೂರು ಹೊಚ್ಚ ಹೊಸ ಎಲೆಕ್ಟ್ರಿಕ್ ಬಸ್​ಗಳನ್ನು ಬಿಎಂಟಿಸಿ ಖರೀದಿಸಿದೆ. ಕೇಂದ್ರ ಸರ್ಕಾರದ ಫೇಮ್- 2 ಅಡಿಯಲ್ಲಿ 921 ಬಸ್​ಗಳನ್ನು ಬಿಎಂಟಿಸಿ ಅಳವಡಿಸಿಕೊಳ್ಳು ಮುಂದಾಗಿದ್ದು, ಮೊದಲ ಹಂತದಲ್ಲಿ ನೂರು ಟಾಟಾ ಕಂಪನಿಯ ಇವಿ ಬಸ್​ಗಳು ಆಗಮಿಸಿವೆ.

ಟಿವಿ9 ವರದಿ ಇಂಪ್ಯಾಕ್ಟ್: ಬಿಎಂಟಿಸಿಗೆ ಬಂತು 100 ಹೊಸ ಎಲೆಕ್ಟ್ರಿಕ್ ಬಸ್​, ಇವುಗಳ ವಿಶೇಷತೆ ತಿಳಿಯಿರಿ
Kiran Surya
| Edited By: |

Updated on: Dec 15, 2023 | 6:18 PM

Share

ಬೆಂಗಳೂರು, ಡಿಸೆಂಬರ್​​ 15: ಬಿಎಂಟಿಸಿ (BMTC) ಹಳೆಯ ಬಸ್​​ಗಳ ಬಗ್ಗೆ ಟಿವಿ9 ಡಿಜಿಟಲ್​ ವರದಿ ಪ್ರಸಾರ ಬೆನ್ನಲೆ ನೂರು ಹೊಚ್ಚ ಹೊಸ ಎಲೆಕ್ಟ್ರಿಕ್ ಬಸ್​ಗಳನ್ನು ಬಿಎಂಟಿಸಿ ಖರೀದಿಸಿದೆ. ಬರುವ ವಾರ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಸಿರು ನಿಶಾನೆ ತೋರಲಿದ್ದಾರೆ. ಕೇಂದ್ರ ಸರ್ಕಾರದ ಫೇಮ್- 2 ಅಡಿಯಲ್ಲಿ 921 ಬಸ್​ಗಳನ್ನು ಬಿಎಂಟಿಸಿ ಅಳವಡಿಸಿಕೊಳ್ಳು ಮುಂದಾಗಿದ್ದು, ಮೊದಲ ಹಂತದಲ್ಲಿ ನೂರು ಟಾಟಾ ಕಂಪನಿಯ ಇವಿ ಬಸ್​ಗಳು ಆಗಮಿಸಿವೆ.

12 ವರ್ಷಗಳ ಗುತ್ತಿಗೆ ಆಧಾರದ ಅಡಿಯಲ್ಲಿ ರಾಜಧಾನಿಯಲ್ಲಿ ಈ ನೂರು ಹವಾನಿಯಂತ್ರಣ ರಹಿತ ವಿದ್ಯುತ್ ಚಾಲಿತ ಬಸ್​ಗಳು ಸಂಚಾರ ನಡೆಸಲಿವೆ.

ಇವಿ ಬಸ್​ಗಳ ವೈಶಿಷ್ಟ್ಯಗಳೇನು?

  • 12 ಮೀಟರ್ ಉದ್ದದ 400 ಮಿಮಿ ಫ್ಲೋರ್ ಎತ್ತರದ ಹವಾನಿಯಂತ್ರಣ ರಹಿತ ಬಸ್​ ಇದಾಗಿದೆ.
  • 35 ಸಂಖ್ಯೆ ಪ್ಲಾಸ್ಟಿಕ್ ಮೌಲ್ಡೆಡ್ ಪ್ರಯಾಣಿಕರ ಆಸನಗಳು.
  • ಚಾಲಕರ ಅನುಕೂಲಕ್ಕಾಗಿ ಬಸ್ಸಿನ ಒಳಬಾಗದಲ್ಲಿ 03 ಕ್ಯಾಮರಾ ಮತ್ತು ಹಿಂದಿನ ಭಾಗದಲ್ಲಿ 01 ಕ್ಯಾಮರಾ ಅಳವಡಿಕೆ.
  • ಒಂದು ಬಾರಿ ಚಾರ್ಜ್​ನೊಂದಿಗೆ ಪ್ರತಿ ದಿನ 200 ಕಿಮೀ ಸಂಚಾರ ಮಾಡುತ್ತದೆ.
  • ಪ್ರಯಾಣಿಕರಿಗೆ ಮತ್ತು ಅಂಗವಿಕಲರ ಅನುಕೂಲಕ್ಕಾಗಿ 04 ಎಲ್​​ಇಡಿ ಡೆಸ್ಟಿನೇಷನ್ ಬೋರ್ಡ್ ಮತ್ತು ವಾಯ್ಸ್ ಅನೌನ್ಸ್ಮೆಂಟ್ ಅಳವಡಿಸಲಾಗಿದೆ.
  • ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ 10 ಪ್ಯಾನಿಕ್ ಬಟನ್​ ಅಳವಡಿಸಲಾಗಿರುತ್ತದೆ.
  • ಫೈರ್ ಡಿಟೆಕ್ಷನ್ ಮತ್ತು ಅಲರ್ಮಿಂಗ್ ವ್ಯವಸ್ಥೆ ಮತ್ತು ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ವ್ಯವಸ್ಥೆ ಹೊಂದಿದೆ.
  • ಹೊಗೆ ರಹಿತ ಹಾಗೂ ಪರಿಸರ ಸ್ನೇಹಿ.
  • ಅಂಗವಿಕಲರಿಗಾಗಿ ವೀಲ್ ಚೇರ್ ಪ್ರವೇಶಕ್ಕೆ ನಿಲಿಂಗ್ ವ್ಯವಸ್ಥೆ.
  • ಸ್ಟಾಪ್ ಕೋರಿಕೆ ಸ್ವೀಚ್.
  • ಪ್ರಯಾಣಿಕರ ಸುರಕ್ಷತೆಗಾಗಿ ಬಸ್​ ಚಾಲನೆಯಲ್ಲಿರುವಾಗ ಬಸ್ಸಿನ ಬಾಗಿಲನ್ನು ತೆರೆಯಲು ಸಾಧ್ಯವಾಗುವುದಿಲ್ಲ.
  • ಬಸ್ಸಿನ ಬಾಗಿಲುಗಳು ಮುಚ್ಚಿದ ನಂತರವೇ ವಾಹನ ಚಲಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ