ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Follow us
| Edited By: ಗಣಪತಿ ಶರ್ಮ

Updated on: Nov 17, 2023 | 6:16 PM

ಬೆಂಗಳೂರು, ನವೆಂಬರ್ 17: ಬಿಎಂಟಿಸಿ (BMTC) ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಇತರ ವಿಭಾಗಗಳ ಬಸ್​ಗಳು ನಡುರಸ್ತೆಯಲ್ಲಿಯೇ ಕೆಟ್ಟುನಿಂತು ಟ್ರಾಫಿಕ್​​ ಜಾಮ್​ಗೆ ಕಾರಣವಾಗುತ್ತಿರುವ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ‘ಟಿವಿ9’ ಕೆಲವು ದಿನಗಳ ಹಿಂದಷ್ಟೇ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ಇದೀಗ, 5500 ಹೊಸ ಬಸ್ ಖರೀದಿಗೆ ಮುಂದಾಗಿದೆ. ಇದರೊಂದಿಗೆ ಸಾರಿಗೆ ನಿಗಮಕ್ಕೆ ಹೊಸ ಬಸ್​​ಗಳು ಬರುವುದು ಖಾತರಿಯಾಗಿದೆ.

ನಾಲ್ಕೂ ನಿಗಮಗಳಿಗೆ 12 ಸಾವಿರಕ್ಕೂ ಹೆಚ್ಚು ಬಸ್​​ಗಳ ಅವಶ್ಯಕತೆ ಇದ್ದು 2024 ಆರಂಭದಲ್ಲಿ 5500 ಬಸ್​ಗಳು ಬರಲಿವೆ. ಮುಂದಿನ ದಿನಗಳಲ್ಲಿ ಮಿಕ್ಕ 7000 ಬಸ್ ಖರೀದಿಗೆ ಸರ್ಕಾರ ಮುಂದಾಗಲಿದೆ. ಬಿಎಂಟಿಸಿಗೆ 1500 ಸಾವಿರ ಕೆಎಸ್ಆರ್ಟಿಸಿಗೆ 2 ಸಾವಿರ ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆಗೆ ತಲಾ ಒಂದು ಸಾವಿರ ಬಸ್ ಖರೀದಿ ಮಾಡಲಾಗುತ್ತಿದೆ.

ನಡುರಸ್ತೆಯಲ್ಲೇ ಕೆಟ್ಟುನಿಲ್ಲುತ್ತಿರುವ ಬಸ್​ಗಳು!

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿತ್ತು. ಈ ಕುರಿತು ‘ಟಿವಿ9’ ವಿಸ್ತೃತ ವರದಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ