AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 17, 2023 | 6:16 PM

Share

ಬೆಂಗಳೂರು, ನವೆಂಬರ್ 17: ಬಿಎಂಟಿಸಿ (BMTC) ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಇತರ ವಿಭಾಗಗಳ ಬಸ್​ಗಳು ನಡುರಸ್ತೆಯಲ್ಲಿಯೇ ಕೆಟ್ಟುನಿಂತು ಟ್ರಾಫಿಕ್​​ ಜಾಮ್​ಗೆ ಕಾರಣವಾಗುತ್ತಿರುವ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ‘ಟಿವಿ9’ ಕೆಲವು ದಿನಗಳ ಹಿಂದಷ್ಟೇ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ಇದೀಗ, 5500 ಹೊಸ ಬಸ್ ಖರೀದಿಗೆ ಮುಂದಾಗಿದೆ. ಇದರೊಂದಿಗೆ ಸಾರಿಗೆ ನಿಗಮಕ್ಕೆ ಹೊಸ ಬಸ್​​ಗಳು ಬರುವುದು ಖಾತರಿಯಾಗಿದೆ.

ನಾಲ್ಕೂ ನಿಗಮಗಳಿಗೆ 12 ಸಾವಿರಕ್ಕೂ ಹೆಚ್ಚು ಬಸ್​​ಗಳ ಅವಶ್ಯಕತೆ ಇದ್ದು 2024 ಆರಂಭದಲ್ಲಿ 5500 ಬಸ್​ಗಳು ಬರಲಿವೆ. ಮುಂದಿನ ದಿನಗಳಲ್ಲಿ ಮಿಕ್ಕ 7000 ಬಸ್ ಖರೀದಿಗೆ ಸರ್ಕಾರ ಮುಂದಾಗಲಿದೆ. ಬಿಎಂಟಿಸಿಗೆ 1500 ಸಾವಿರ ಕೆಎಸ್ಆರ್ಟಿಸಿಗೆ 2 ಸಾವಿರ ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆಗೆ ತಲಾ ಒಂದು ಸಾವಿರ ಬಸ್ ಖರೀದಿ ಮಾಡಲಾಗುತ್ತಿದೆ.

ನಡುರಸ್ತೆಯಲ್ಲೇ ಕೆಟ್ಟುನಿಲ್ಲುತ್ತಿರುವ ಬಸ್​ಗಳು!

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿತ್ತು. ಈ ಕುರಿತು ‘ಟಿವಿ9’ ವಿಸ್ತೃತ ವರದಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ