AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 17, 2023 | 6:16 PM

Share

ಬೆಂಗಳೂರು, ನವೆಂಬರ್ 17: ಬಿಎಂಟಿಸಿ (BMTC) ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಇತರ ವಿಭಾಗಗಳ ಬಸ್​ಗಳು ನಡುರಸ್ತೆಯಲ್ಲಿಯೇ ಕೆಟ್ಟುನಿಂತು ಟ್ರಾಫಿಕ್​​ ಜಾಮ್​ಗೆ ಕಾರಣವಾಗುತ್ತಿರುವ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ‘ಟಿವಿ9’ ಕೆಲವು ದಿನಗಳ ಹಿಂದಷ್ಟೇ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ಇದೀಗ, 5500 ಹೊಸ ಬಸ್ ಖರೀದಿಗೆ ಮುಂದಾಗಿದೆ. ಇದರೊಂದಿಗೆ ಸಾರಿಗೆ ನಿಗಮಕ್ಕೆ ಹೊಸ ಬಸ್​​ಗಳು ಬರುವುದು ಖಾತರಿಯಾಗಿದೆ.

ನಾಲ್ಕೂ ನಿಗಮಗಳಿಗೆ 12 ಸಾವಿರಕ್ಕೂ ಹೆಚ್ಚು ಬಸ್​​ಗಳ ಅವಶ್ಯಕತೆ ಇದ್ದು 2024 ಆರಂಭದಲ್ಲಿ 5500 ಬಸ್​ಗಳು ಬರಲಿವೆ. ಮುಂದಿನ ದಿನಗಳಲ್ಲಿ ಮಿಕ್ಕ 7000 ಬಸ್ ಖರೀದಿಗೆ ಸರ್ಕಾರ ಮುಂದಾಗಲಿದೆ. ಬಿಎಂಟಿಸಿಗೆ 1500 ಸಾವಿರ ಕೆಎಸ್ಆರ್ಟಿಸಿಗೆ 2 ಸಾವಿರ ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆಗೆ ತಲಾ ಒಂದು ಸಾವಿರ ಬಸ್ ಖರೀದಿ ಮಾಡಲಾಗುತ್ತಿದೆ.

ನಡುರಸ್ತೆಯಲ್ಲೇ ಕೆಟ್ಟುನಿಲ್ಲುತ್ತಿರುವ ಬಸ್​ಗಳು!

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿತ್ತು. ಈ ಕುರಿತು ‘ಟಿವಿ9’ ವಿಸ್ತೃತ ವರದಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!