AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 17, 2023 | 6:16 PM

Share

ಬೆಂಗಳೂರು, ನವೆಂಬರ್ 17: ಬಿಎಂಟಿಸಿ (BMTC) ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಇತರ ವಿಭಾಗಗಳ ಬಸ್​ಗಳು ನಡುರಸ್ತೆಯಲ್ಲಿಯೇ ಕೆಟ್ಟುನಿಂತು ಟ್ರಾಫಿಕ್​​ ಜಾಮ್​ಗೆ ಕಾರಣವಾಗುತ್ತಿರುವ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ‘ಟಿವಿ9’ ಕೆಲವು ದಿನಗಳ ಹಿಂದಷ್ಟೇ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ಇದೀಗ, 5500 ಹೊಸ ಬಸ್ ಖರೀದಿಗೆ ಮುಂದಾಗಿದೆ. ಇದರೊಂದಿಗೆ ಸಾರಿಗೆ ನಿಗಮಕ್ಕೆ ಹೊಸ ಬಸ್​​ಗಳು ಬರುವುದು ಖಾತರಿಯಾಗಿದೆ.

ನಾಲ್ಕೂ ನಿಗಮಗಳಿಗೆ 12 ಸಾವಿರಕ್ಕೂ ಹೆಚ್ಚು ಬಸ್​​ಗಳ ಅವಶ್ಯಕತೆ ಇದ್ದು 2024 ಆರಂಭದಲ್ಲಿ 5500 ಬಸ್​ಗಳು ಬರಲಿವೆ. ಮುಂದಿನ ದಿನಗಳಲ್ಲಿ ಮಿಕ್ಕ 7000 ಬಸ್ ಖರೀದಿಗೆ ಸರ್ಕಾರ ಮುಂದಾಗಲಿದೆ. ಬಿಎಂಟಿಸಿಗೆ 1500 ಸಾವಿರ ಕೆಎಸ್ಆರ್ಟಿಸಿಗೆ 2 ಸಾವಿರ ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆಗೆ ತಲಾ ಒಂದು ಸಾವಿರ ಬಸ್ ಖರೀದಿ ಮಾಡಲಾಗುತ್ತಿದೆ.

ನಡುರಸ್ತೆಯಲ್ಲೇ ಕೆಟ್ಟುನಿಲ್ಲುತ್ತಿರುವ ಬಸ್​ಗಳು!

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿತ್ತು. ಈ ಕುರಿತು ‘ಟಿವಿ9’ ವಿಸ್ತೃತ ವರದಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ