Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Nov 17, 2023 | 6:16 PM

ಬೆಂಗಳೂರು, ನವೆಂಬರ್ 17: ಬಿಎಂಟಿಸಿ (BMTC) ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಇತರ ವಿಭಾಗಗಳ ಬಸ್​ಗಳು ನಡುರಸ್ತೆಯಲ್ಲಿಯೇ ಕೆಟ್ಟುನಿಂತು ಟ್ರಾಫಿಕ್​​ ಜಾಮ್​ಗೆ ಕಾರಣವಾಗುತ್ತಿರುವ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ‘ಟಿವಿ9’ ಕೆಲವು ದಿನಗಳ ಹಿಂದಷ್ಟೇ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ಇದೀಗ, 5500 ಹೊಸ ಬಸ್ ಖರೀದಿಗೆ ಮುಂದಾಗಿದೆ. ಇದರೊಂದಿಗೆ ಸಾರಿಗೆ ನಿಗಮಕ್ಕೆ ಹೊಸ ಬಸ್​​ಗಳು ಬರುವುದು ಖಾತರಿಯಾಗಿದೆ.

ನಾಲ್ಕೂ ನಿಗಮಗಳಿಗೆ 12 ಸಾವಿರಕ್ಕೂ ಹೆಚ್ಚು ಬಸ್​​ಗಳ ಅವಶ್ಯಕತೆ ಇದ್ದು 2024 ಆರಂಭದಲ್ಲಿ 5500 ಬಸ್​ಗಳು ಬರಲಿವೆ. ಮುಂದಿನ ದಿನಗಳಲ್ಲಿ ಮಿಕ್ಕ 7000 ಬಸ್ ಖರೀದಿಗೆ ಸರ್ಕಾರ ಮುಂದಾಗಲಿದೆ. ಬಿಎಂಟಿಸಿಗೆ 1500 ಸಾವಿರ ಕೆಎಸ್ಆರ್ಟಿಸಿಗೆ 2 ಸಾವಿರ ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆಗೆ ತಲಾ ಒಂದು ಸಾವಿರ ಬಸ್ ಖರೀದಿ ಮಾಡಲಾಗುತ್ತಿದೆ.

ನಡುರಸ್ತೆಯಲ್ಲೇ ಕೆಟ್ಟುನಿಲ್ಲುತ್ತಿರುವ ಬಸ್​ಗಳು!

ಬಿಎಂಟಿಸಿ ಬಸ್​​ಗಳೇ ಬೆಂಗಳೂರಿನ ಟ್ರಾಫಿಕ್ ಜಾಮ್​ಗೆ ಕಾರಣವಾಗುತ್ತಿರುವ ವಿಚಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಅಂಕಿ ಅಂಶದಿಂದ ತಿಳಿದುಬಂದಿದೆ. ಬಿಎಂಟಿಸಿ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯ ಇತರ ವಿಭಾಗಗಳ ಬಸ್​ಗಳೂ ಇದೇ ರೀತಿ ಕೆಟ್ಟುನಿಂತಿದ್ದ ಬಗ್ಗೆಯೂ ‘ಟಿವಿ9’ ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಜನವರಿಯಲ್ಲಿ 152, ಫೆಬ್ರವರಿಯಲ್ಲಿ 158, ಮಾರ್ಚ್​​​ನಲ್ಲಿ 160 ಬಸ್​ಗಳು ಕೆಟ್ಟುಹೋಗಿವೆ. ಏಪ್ರಿಲ್​​ನಲ್ಲಿ 110, ಮೇನಲ್ಲಿ 112, ಜೂನ್​ನಲ್ಲಿ 130, ಜುಲೈ 160, ಆಗಸ್ಟ್ 167, ಸೆಫ್ಟೆಂಬರ್159 ಹಾಗೂ ಅಕ್ಟೋಬರ್ 170 ಬಸ್​ಗಳು ನಡುರಸ್ತೆಯಲ್ಲಿ ಕೆಟ್ಟುಹೋಗಿವೆ ಎಂಬುದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಯಲು ಮಾಡಿತ್ತು. ಈ ಕುರಿತು ‘ಟಿವಿ9’ ವಿಸ್ತೃತ ವರದಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ