AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಸಿಪಾಳ್ಯ ಗ್ಯಾಂಗ್‌ವಾರ್ ಪ್ರಕರಣಕ್ಕೆ ಟ್ವಿಸ್ಟ್: ತನಿಖೆ ವೇಳೆ ಅಸಲಿ ಕಾರಣ ಬಯಲು

Kalasipalya Gang War: ಬೆಂಗಳೂರಿನಲ್ಲಿ ಎರಡು ಗ್ಯಾಂಗ್ ನಡುವೆ ಮಾರಾಮಾರಿ ನಡೆದಿದೆ. ಕಲಾಸಿಪಾಳ್ಯ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಗ್ಯಾಂಗ್​ವಾರ್​​ಗೆ ಏನು ಕಾರಣ ಎಂಬ ಅಸಲು ಸತ್ಯ ಪೊಲೀಸ್​ ತನಿಖೆ ವೇಳೆ ಬಯಲಾಗಿದೆ. ಇನ್ನು ಪ್ರಕಣದಕ್ಕೆ ಸಂಬಂಧಿಸಿದಂತೆ ಒಟ್ಟು ಐವರನ್ನು ವಶಕ್ಕೆ ಪಡೆಯಲಾಗಿದೆ.

ಕಲಾಸಿಪಾಳ್ಯ ಗ್ಯಾಂಗ್‌ವಾರ್ ಪ್ರಕರಣಕ್ಕೆ ಟ್ವಿಸ್ಟ್: ತನಿಖೆ ವೇಳೆ ಅಸಲಿ ಕಾರಣ ಬಯಲು
ಗ್ಯಾಂಗ್​ವಾರ್Image Credit source: tv9 kannada
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 06, 2026 | 5:51 PM

Share

ಬೆಂಗಳೂರು, ಆಗಸ್ಟ್ 06: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ (gangwar) ಮಿತಿಮೀರಿದೆ. ಕಲಾಸಿಪಾಳ್ಯ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ದೊಡ್ಡಿ‌ವಂಶ ಮತ್ತು ವಿನೋಬನಗರದ ಮೌಲಾನ ಗ್ಯಾಂಗ್ ನಡುವೆ ಲಾಂಗು, ಮಚ್ಚುಗಳಿಂದ ಮಾರಾಮಾರಿ ನಡೆದಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮಾಡಿದ ಪೊಲೀಸರಿಗೆ ಗಲಾಟೆಯ ಹಿಂದಿನ ಅಸಲಿ ಕಾರಣ ತಿಳಿದುಬಂದಿದೆ. ಅಂಗಡಿ ಮಾಲಿಕ ಹಾಗೂ ಬಾಡಿಗೆದಾರನ ನಡುವೆ ಬ್ಯಾಂಕ್ ಲೋನ್ ವಿಚಾರವಾಗಿ ನಡೆದ ಮಾರಾಮಾರಿ ಎಂಬುದು ಬಯಲಾಗಿದೆ.

ಬಯಲಾದ ಅಸಲಿಯತ್ತು ಏನು?

ಮಹಮ್ಮದ್ ಮೌಲಿ ಎಂಬಾತ ಅಂಗಡಿಯ ಮಾಲಿಕನಾಗಿದ್ದು, ತನ್ನ ಮಳಿಗೆಯನ್ನು ಅಜ್ಜು ಎಂಬ ವ್ಯಕ್ತಿಗೆ ಬಾಡಿಗೆಗೆ ನೀಡಿದ್ದ. ಆದರೆ, ಬಾಡಿಗೆಗೆ ಕೊಟ್ಟಿದ್ದ ಅದೇ ಅಂಗಡಿಗೆ ತನ್ನ ಹೆಸರಿನ ಬೋರ್ಡ್ ಹಾಕಿ ಬ್ಯಾಂಕ್ ಲೋನ್ ಪಡೆಯಲು ಮಾಲಿಕ ಮೌಲಿ ಮುಂದಾಗಿದ್ದ. ಇದನ್ನು ಪ್ರಶ್ನಿಸಿದ್ದ ಬಾಡಿಗೆದಾರ ಅಜ್ಜು, ‘ನಾನು ಬಾಡಿಗೆಗೆ ಇದ್ದೇನೆ, ನೀನ್ಯಾಕೆ ನನ್ನ ಅಂಗಡಿ ಮೇಲೆ ಬೋರ್ಡ್ ಹಾಕಿ ಲೋನ್ ತಗೊಳ್ತೀಯಾ? ಒಂದು ವೇಳೆ ನೀನು ಲೋನ್ ಕಟ್ಟದಿದ್ದರೆ ಆ ಹೊರೆ ನನ್ನ ಮೇಲೆ ಬೀಳುತ್ತದೆ’ ಎಂದು ಗಲಾಟೆ ಮಾಡಿದ್ದ.

ಇದನ್ನೂ ಓದಿ: ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ನುಗ್ಗಿದ ಆಗಂತುಕರು: ಚಾಕು ಹಿಡಿದು ಓಡಾಟ, CCTVಯಲ್ಲಿ ದೃಶ್ಯ ಸೆರೆ

ಇನ್ನು ಮಾತುಕತೆ ವಿಕೋಪಕ್ಕೆ ತಿರುಗಿದ್ದು, ಮಹಮ್ಮದ್ ಮೌಲಿ, ಅಜ್ಜುಗೆ ಕಪಾಳಮೋಕ್ಷ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಅಜ್ಜು ತಕ್ಷಣವೇ ತನ್ನ ಗೆಳೆಯರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಬಳಿಕ ಅಂಗಡಿಯಲ್ಲಿದ್ದ ಕಬ್ಬಿಣ ಕತ್ತರಿಸುವ ಕತ್ತರಿ, ರಾಡ್ ಹಾಗೂ ಇತರ ಮಾರಕಾಸ್ತ್ರಗಳಿಂದ ಮೌಲಿ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಮೌಲಿ ಮುಖ ಕಟ್ ಆಗಿ ತೀವ್ರ ಗಾಯಗೊಂಡಿದ್ದು, ಮೌಲಿ ಹಾಗೂ ಅಬ್ರಹಾರ್ ಎಂಬ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐವರು ಪೊಲೀಸ್​ ವಶಕ್ಕೆ 

ಸದ್ಯ ಘಟನೆಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿ ಕಲಾಸಿಪಾಳ್ಯ ಠಾಣೆ ಪೊಲೀಸರು, ಪ್ರಕರಣದ ಮುಖ್ಯ ಆರೋಪಿಗಳಾದ ಅಜ್ಜು, ಅಮಜ್ದ್, ಅಸ್ಗರ್ ಸೇರಿದಂತೆ ಒಟ್ಟು ಐವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us