AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ.

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್
ನಿರ್ಮಾಪಕ ರಮೇಶ್ ಕಶ್ಯಪ್
TV9 Web
| Edited By: |

Updated on: Jul 29, 2021 | 7:22 AM

Share

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು.

ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ ರಮೇಶ್ ಕಶ್ಯಪ್ ಈ ಘಟನೆ ಸಂಬಂಧ ಹನುಮಂತನಗರ ಠಾಣೆಗೆ ಹೋಗಿ ದೂರು ನೀಡಿದ್ದರು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಖದೀಮರಿಂದ 3 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕದ್ದಿರುವ ಚಿನ್ನ ಅಡವಿಟ್ಟು ಹಣ ಪಡೆದಿದ್ದ ಎಂದು ತಿಳಿದು ಬಂದಿದೆ.

ಇನ್ನು ಆರೋಪಿ ಮನೆಯ ಅಸಲಿ ಕೀಯನ್ನು ತೆಗೆದುಕೊಂಡು ಹೋಗಿ ನಕಲಿ ಕೀ ಮಾಡಿಸಿಕೊಂಡು ಬಂದಿದ್ದ. ಸುಳಿವು ಸಿಗಬಾರದೆಂದು ತನ್ನ ಸ್ನೇಹಿತ ಅಭಿಷೇಕ್ ಮೂಲಕ ಮನೆಗೆ ಕನ್ನ ಹಾಕಿಸಿದ್ದ. ಕದ್ದ ಚಿನ್ನ ಅಡವಿಟ್ಟು ಹಣ ಪಡೆದಿದ್ದ. ಸಿಸಿಟಿವಿ ಹಾಗೂ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಚಂದ್ರಶೇಖರ್ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅಸಲಿ ಸತ್ಯ ಬಯಲಾಗಿದೆ.

ಇದನ್ನೂ ಓದಿ: ಭಾರತದ ಸ್ಟಾರ್ ಆಲ್-ರೌಂಡರ್ ರವೀಂದ್ರ ಜಡೇಜಾಗೆ ಕುದುರೆಗಳ ಮೇಲಿರುವ ವ್ಯಾಮೋಹ ನಿಮಗೆ ಗೊತ್ತಾ?

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?