AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ಸಾವು, ಹೊಟ್ಟೆಪಾಡಿಗಾಗಿ ಬೆಂಗ್ಳೂರಿಗೆ ಬಂದಿದ್ದ ಸಹೋದರರು ದುರಂತ ಅಂತ್ಯ

ಸಹೋದರರಿಬ್ಬರು ಹೊಟ್ಟೆ ಪಾಡಿಗಾಗಿ ದೂರದ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ನೀರಿನ ಸಂಪ್ ಸ್ವಚ್ಛ ಮಾಡುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ತುತ್ತಿನ ಚೀಲ ತುಂಬಿಸುಕೊಳ್ಳುವುದಕ್ಕೆ ಬಂದಿದ್ದ ಸಹೋದರರು ಇದೀಗ ಒಟ್ಟಿಗೆ ದುರಂತ ಅಂತ್ಯಕಂಡಿದ್ದಾರೆ.

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ಸಾವು, ಹೊಟ್ಟೆಪಾಡಿಗಾಗಿ ಬೆಂಗ್ಳೂರಿಗೆ ಬಂದಿದ್ದ ಸಹೋದರರು ದುರಂತ ಅಂತ್ಯ
ನೀರಿನ ಸಂಪ್
Follow us
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ

Updated on: Nov 23, 2023 | 10:56 AM

ಆನೇಕಲ್(ಬೆಂಗಳೂರು), (ನವೆಂಬರ್ 23): ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಮೃತಪಟ್ಟ ಘಟನೆ ಬೆಂಗಳೂರಿನ (Bengaluru)ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ ಕಂಪನಿ ಮಾಲೀಕ ಹಾಗೂ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತರು. ಶ್ರೀನಿವಾಸ್ ರೆಡ್ಡಿ ಎಂಬುವವರ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಸಂಜೆ ಸಂಪ್‌ನಲ್ಲಿ ಕ್ಲೀನ್‌ ಮಾಡಲು ಕಾರ್ಮಿಕರು ಇಳಿದಿದ್ದರು. ಆ್ಯಸಿಡ್ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರು ಸಹೋದರರಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಇವರನ್ನು ಉಳಿಸಲು ಮುಂದಾಗಿದ್ದ ಜಗದೀಶ್ ಹಾಗೂ ಮಾಲೀಕ ಶ್ರೀನಿವಾಸ್ ರೆಡ್ಡಿ ಅಸ್ವಸ್ಥಗೊಂಡಿದ್ದು, ಸದ್ಯ ಅವರನ್ನು ಜಿಗಣಿ ವಿಜಯಶ್ರೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!